ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ವಾಹನಗಳ ಸಂಚಾರಕ್ಕೆ ಮುಕ್ತವಾದ ದಿನದಿಂದ ಈವರೆಗೆ 855.79 ಕೋಟಿ ರೂ. ಟೋಲ್ ಶುಲ್ಕ ಸಂಗ್ರಹವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸಂಗ್ರಹವಾಗುತ್ತಿರುವ ಟೋಲ್ ಶುಲ್ಕ ಕುರಿತು ವಿಧಾನಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.
ಇದನ್ನೂ ಓದಿ:-ಸಾಮಾಜಿಕ ಬಹಿಷ್ಕಾರ : ಶಿಕ್ಷೆ ಪ್ರಮಾಣ 7 ವರ್ಷಕ್ಕೆ ಹೆಚ್ಚಿಸಲು ಆಗ್ರಹ
ಬೆಂಗಳೂರಿನಲ್ಲಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಽಕಾರ ನೀಡಿರುವ ಮಾಹಿತಿ ಆಧರಿಸಿ ಈ ಉತ್ತರವನ್ನು ಒದಗಿಸಲಾಗಿದೆ.
ಹೆದ್ದಾರಿಯಲ್ಲಿ ಮೂರು ಟೋಲ್ ಕೇಂದ್ರಗಳಿದ್ದು, ೨೦೨೨-೨೩ರಿಂದ ೨೦೨೫-೨೬ರ ಅವಧಿಯಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಣಿಮಿಣಿಕೆ ಕೇಂದ್ರದಲ್ಲಿ ೨೮೨.೧೪ ಕೋಟಿ ರೂ., ರಾಮನಗರ ತಾಲ್ಲೂಕಿನ ಶೇಷಗಿರಿಹಳ್ಳಿ ಕೇಂದ್ರದಲ್ಲಿ ೨೪೮.೪೨ ಕೋಟಿ ರೂ.ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂಗೂರಿನ ಕೇಂದ್ರದಲ್ಲಿ ೩೨೫.೨೩ ಕೋಟಿ ರೂ. ಟೋಲ್ ಸಂಗ್ರಹವಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ನೀಡಿರುವ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…