ಮಂಡ್ಯ: ಮಂಡ್ಯದಲ್ಲಿ ಆಯೋಜಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಿ.22ರಂದು ಸಂಜೆ 6ಕ್ಕೆ ಇದೇ ಮೊದಲ ಬಾರಿಗೆ ಪೊಲೀಸ್ ಬ್ಯಾಂಡ್ ಮೇಳೈಸಲಿದ್ದು, ಇದು ಸಾಹಿತ್ಯ ಸಮ್ಮೇಳನದ ಪ್ರಮುಖ ಆಕರ್ಷಣೆಯಾಗಲಿದೆ.
ಮೈಸೂರು ದಸರಾದಲ್ಲಿ ಪೊಲೀಸ್ ಬ್ಯಾಂಡ್ ನೋಡಲು ಜನ ಕಾತುರದಿಂದ ಕಾಯುತ್ತಿರುತ್ತಾರೆ. ಹಾಗೆಯೇ ಸಕ್ಕರೆ ನಾಡು ಮಂಡ್ಯದಲ್ಲೂ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಪೊಲೀಸ್ ಬ್ಯಾಂಡ್ ಆಯೋಜನೆ ಮಾಡಲಾಗಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಮನವಿ ಮೇರೆಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಇಂತಹ ಸದಾವಕಾಶವನ್ನು ಜಿಲ್ಲೆಯ ಜನರಿಗೆ ಕಲ್ಪಿಸಿಕೊಟ್ಟಿದ್ದಾರೆ.
ಕನ್ನಡ ಪ್ರೇಮಿಗಳಿಗೆ ಹಾಗೂ ಸಾಹಿತ್ಯಾಸಕ್ತರಿಗೆ ನುಡಿಹಬ್ಬದ ಸವಿಯ ಜೊತೆಗೆ ಕರುನಾಡು ಮತ್ತು ಹೊರನಾಡಿನ ಕಲೆ, ಕಲಾ ಪ್ರಕಾರಗಳನ್ನು ಪ್ರದರ್ಶಿಸಲು ಸಾಂಸ್ಕೃತಿಕ ಸಮಿತಿ ವೇದಿಕೆ ಸಿದ್ಧಪಡಿಸಿದೆ. ನಾನಾ ಬಗೆಯ ಕಲೆ, ಕಲಾ ಪ್ರಕಾರಗಳನ್ನು ನಾಡಿನ ಜನತೆ ಎದುರು ಪ್ರದರ್ಶಿಸಲು ರಾಜ್ಯ, ಹೊರರಾಜ್ಯಗಳಿಂದ ಕಲಾವಿದರು, ಕಲಾ ತಂಡಗಳು ಮಂಡ್ಯಕ್ಕೆ ಆಗಮಿಸಲಿವೆ.
ಈ ಹಿನ್ನೆಲೆಯಲ್ಲಿ ಡಿಸೆಂಬರ್.22ರಂದು ಪೊಲೀಸ್ ಬ್ಯಾಂಡ್ ಮೇಳೈಸಲಿದ್ದು, ನೋಡುಗರನ್ನು ಮನಸೂರೆಗೊಳಿಸಲಿದೆ.
ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…
ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…
ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…
‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’ ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…
ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…
ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…