ಮಂಡ್ಯ: ಮುಡಾ ಹಗರಣದ ವಿಚಾರ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಆದ್ದರಿಂದ ಕೋರ್ಟ್ ಆದೇಶದ ಮೇಲೆ ಸಿದ್ದರಾಮಯ್ಯ ಸಿಎಂ ಸ್ಥಾನದ ಭವಿಷ್ಯ ತೀರ್ಮಾನ ಆಗಲಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಒಂದು ಪ್ರಕರಣವನ್ನು ಪ್ರಾಸಿಕ್ಯೂಷನ್ಗೆ ಕೊಟ್ಟಿರುವುದು ಇದೇ ಮೊದಲಲ್ಲ. ಈ ಬಗ್ಗೆ ಹಲವಾರು ರಾಜ್ಯಗಳಲ್ಲಿ ಹಲವಾರು ಪ್ರಕರಣಗಳಿವೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ಆಗಿದೆ ಅಷ್ಟೇ.
ಇನ್ನು ಕಾಂಗ್ರೆಸ್ ಮಿತ್ರರು ಯಾಕೆ ಅಷ್ಟೊಂದು ಆತಂಕಕ್ಕೆ ಒಳಗಾಗಿದ್ದಾರೋ ಗೊತ್ತಿಲ್ಲ. ಈ ಪ್ರಕರಣ ಒಂದು ಅಂತಿಮ ಘಟಕ್ಕೆ ಬಂದಿದೆ. ಏನಾಗುತ್ತದೆ ಎಂದು ಕಾದು ನೋಡೋಣ ಎಂದು ಹೇಳಿದ್ದಾರೆ.
ಕೋರ್ಟ್ ತೀರ್ಮಾನದ ಮೇಲೆ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಲ್ಲಿ ಮುಂದುವರಿಯುವ ಬಗ್ಗೆ ತೀರ್ಮಾನ ಆಗಲಿದೆ. ನಾಳೆಯ ಆದೇಶದ ಮೇಲೆ ಅವರ ಭವಿಷ್ಯ ನಿರ್ಧಾರವಾಗಲಿದೆ ಎಂದರು.
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…
ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…