ಮಂಡ್ಯ

ಮೈಷುಗರ್‌ ಪ್ರೌಢಾಶಾಲೆ ಗುತ್ತಿಗೆ ವಿವಾದ : ಶಾಸಕ ರವಿಕುಮಾರ್‌ ಹೇಳಿದ್ದೇನು?

ಮಂಡ್ಯ : ಮೈಷುಗರ್ ಪ್ರೌಢಶಾಲೆಯನ್ನು ಖಾಸಗಿಯವರಿಗೆ ಗುತ್ತಿಗೆ ನೀಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಗುತ್ತಿಗೆ ಪ್ರಕ್ರಿಯೆಯನ್ನು ರದ್ದುಪಡಿಸುವಂತೆ ಕಾರ್ಖಾನೆ ಅಧ್ಯಕ್ಷರಿಗೆ ತಿಳಿಸಲಾಗುವುದು ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮೈಷುಗರ್ ಪ್ರೌಢಶಾಲೆಗೆ ಸಂಬಂಽಸಿದಂತೆ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಲೆಯ ಅಭಿವೃದ್ಧಿ ದೃಷ್ಟಿಯಿಂದ ಖಾಸಗಿಯವರಿಗೆ ಗುತ್ತಿಗೆ ನೀಡಲು ಅಧ್ಯಕ್ಷರು ನಿರ್ಧರಿಸಿ ಪ್ರಕ್ರಿಯೆ ಅರಂಭಿಸಿದ್ದರು. ಆನಂತರದಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎಲ್ಲ ಮುಖಂಡರ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಲಾಗಿದೆ. ಬಹುತೇಕರು ಶಾಲೆಯನ್ನು ಗುತ್ತಿಗೆ ನೀಡುವುದಕ್ಕೆ ವಿರುದ್ಧ ಇರುವುದು ಕಂಡುಬಂದಿರುವ ಕಾರಣ ಗುತ್ತಿಗೆ ಪ್ರಕ್ರಿಯೆಯನ್ನು ಕೈಬಿಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಕಾರ್ಖಾನೆ ಆಸ್ತಿಯನ್ನು ಸುಮ್ಮನೆ ಖಾಲಿ ಬಿಡುವುದರಿಂದ ಪ್ರಯೋಜನವಿಲ್ಲ. ಪಾರಂಪರಿಕ ಎಂಬ ಹೆಸರಿನಲ್ಲಿ ಪಾಳು ಬಿಡುವುದೂ ಸರಿಯಲ್ಲ. ಆದಾಯ ಸೃಷ್ಟಿಸಿಕೊಳ್ಳಬೇಕಾದರೆ ಖಾಸಗಿಯವರ ಜೊತೆ ಕೈಜೋಡಿಸುವುದು ಇಂದಿನ ವಾಸ್ತವ ಸಂಗತಿ. ಬೆಂಗಳೂರಿನಲ್ಲಿರುವ ಕಾರ್ಖಾನೆ ಜಾಗದಲ್ಲಿ ಬಹುಮಹಡಿ ವಾಣಿಜ್ಯ ಸಂಕೀರ್ಣ ನಿರ್ಮಿಸಿ ಆದಾಯ ಬರುವಂತೆ ಮಾಡಬಹುದು. ಮಂಡ್ಯದಲ್ಲಿ ಎಂ.ಸಿ.ರಸ್ತೆ ಆಸುಪಾಸಿನಲ್ಲಿರುವ ಕಾರ್ಖಾನೆ ಜಾಗದಲ್ಲಿ ಮಾಲ್ ನಿರ್ಮಿಸಿ ಆದಾಯದ ಮೂಲ ಸೃಷ್ಟಿಸಿಕೊಳ್ಳುವುದಕ್ಕೆ ಅವಕಾಶಗಳಿವೆ. ಈ ಬೆಳವಣಿಗೆ ಕಾಣಬೇಕಾದರೆ ಖಾಸಗಿಯವರೊಂದಿಗೆ ಶೇ.೫೦:೫೦ ಅನುಪಾತದಲ್ಲಿ ಕೈಜೋಡಿಸುವುದು ಅನಿವಾರ್ಯ. ಪಾಳುಬಿದ್ದಿರುವ ಮೈಷುಗರ್ ಈಜು ಕೇಂದ್ರವನ್ನು ಖಾಸಗಿಯವರ ನಿರ್ವಹಣೆಗೆ ನೀಡುವಾಗಲೂ ವಿರೋಧ ವ್ಯಕ್ತವಾಗಿದ್ದರಿಂದ ನಾನೂ ಸುಮ್ಮನಾದೆ ಎಂದರು.

ಅಭಿವೃದ್ಧಿಗಾಗಿ ಯಾರ ಬಳಿ ಹೋಗಲೂ ಸಿದ್ಧ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಶಾಲೆಗೆ ೨೫ ಕೋಟಿ ರೂ. ಅನುದಾನ ನೀಡುವ ಭರವಸೆ ನೀಡಿದ್ದಾರೆ. ಸಿಎಸ್‌ಆರ್ ಫಂಡ್‌ನ ವ್ಯಾಪ್ತಿ ಅವರಿಗೆ ದೊಡ್ಡದಾಗಿರುವುದರಿಂದ ಹೆಚ್ಚು ಹಣವನ್ನು ದೊರಕಿಸಿಕೊಡುವ ಸಾಮರ್ಥ್ಯ ಅವರಿಗಿದೆ. ಅಭಿವೃದ್ಧಿ ವಿಚಾರದಲ್ಲಿ ನಾನು ಯಾರ ಬಳಿ ಹೋಗುವುದಕ್ಕೂ ಸಿದ್ಧನಿದ್ದೇನೆ. ಅವರು ಹಣ ನೀಡಿದಲ್ಲಿ ಶಾಲೆಯನ್ನು ಸರ್ವಾಂಗೀಣ ಅಭಿವೃದ್ಧಿಪಡಿಸಬಹುದು ಎಂದು ಹೇಳಿದರು

ಸಭೆಯಲ್ಲಿ ಮೈಷುಗರ್ ಮಾಜಿ ಅಧ್ಯಕ್ಷರಾದ ಸಿದ್ದರಾಮೇಗೌಡ, ಬಿ.ಸಿ.ಶಿವಾನಂದ, ರೈತ ಮುಖಂಡರಾದ ಕೆ.ಬೋರಯ್ಯ, ಸುನಂದಾ ಜಯರಾಂ, ಇಂಡುವಾಳು ಚಂದ್ರಶೇಖರ್, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೀಲಾರ ಕೃಷ್ಣ, ಕಬ್ಬು ಬೆಳೆಗಾರರ ಒಕ್ಕೂಟದ ಸಾತನೂರು ವೇಣುಗೋಪಾಲ್, ನಗರಸಭೆ ಸದಸ್ಯರಾದ ಎಚ್.ಎಸ್.ಮಂಜು, ಕುಮಾರ, ಪೂರ್ಣಿಮಾ, ಮುಖಂಡರಾದ ಶಿವನಂಜು, ಜಿ.ಎ.ರಮೇಶ್, ಹನಕೆರೆ ಶಶಿಕುಮಾರ್, ಗಿರೀಶ ಇತರರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

4 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

5 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

7 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

7 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

7 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

7 hours ago