Mysugar High School lease dispute Ravikumar Statement
ಮಂಡ್ಯ : ಮೈಷುಗರ್ ಪ್ರೌಢಶಾಲೆಯನ್ನು ಖಾಸಗಿಯವರಿಗೆ ಗುತ್ತಿಗೆ ನೀಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಗುತ್ತಿಗೆ ಪ್ರಕ್ರಿಯೆಯನ್ನು ರದ್ದುಪಡಿಸುವಂತೆ ಕಾರ್ಖಾನೆ ಅಧ್ಯಕ್ಷರಿಗೆ ತಿಳಿಸಲಾಗುವುದು ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮೈಷುಗರ್ ಪ್ರೌಢಶಾಲೆಗೆ ಸಂಬಂಽಸಿದಂತೆ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಲೆಯ ಅಭಿವೃದ್ಧಿ ದೃಷ್ಟಿಯಿಂದ ಖಾಸಗಿಯವರಿಗೆ ಗುತ್ತಿಗೆ ನೀಡಲು ಅಧ್ಯಕ್ಷರು ನಿರ್ಧರಿಸಿ ಪ್ರಕ್ರಿಯೆ ಅರಂಭಿಸಿದ್ದರು. ಆನಂತರದಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎಲ್ಲ ಮುಖಂಡರ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಲಾಗಿದೆ. ಬಹುತೇಕರು ಶಾಲೆಯನ್ನು ಗುತ್ತಿಗೆ ನೀಡುವುದಕ್ಕೆ ವಿರುದ್ಧ ಇರುವುದು ಕಂಡುಬಂದಿರುವ ಕಾರಣ ಗುತ್ತಿಗೆ ಪ್ರಕ್ರಿಯೆಯನ್ನು ಕೈಬಿಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ಕಾರ್ಖಾನೆ ಆಸ್ತಿಯನ್ನು ಸುಮ್ಮನೆ ಖಾಲಿ ಬಿಡುವುದರಿಂದ ಪ್ರಯೋಜನವಿಲ್ಲ. ಪಾರಂಪರಿಕ ಎಂಬ ಹೆಸರಿನಲ್ಲಿ ಪಾಳು ಬಿಡುವುದೂ ಸರಿಯಲ್ಲ. ಆದಾಯ ಸೃಷ್ಟಿಸಿಕೊಳ್ಳಬೇಕಾದರೆ ಖಾಸಗಿಯವರ ಜೊತೆ ಕೈಜೋಡಿಸುವುದು ಇಂದಿನ ವಾಸ್ತವ ಸಂಗತಿ. ಬೆಂಗಳೂರಿನಲ್ಲಿರುವ ಕಾರ್ಖಾನೆ ಜಾಗದಲ್ಲಿ ಬಹುಮಹಡಿ ವಾಣಿಜ್ಯ ಸಂಕೀರ್ಣ ನಿರ್ಮಿಸಿ ಆದಾಯ ಬರುವಂತೆ ಮಾಡಬಹುದು. ಮಂಡ್ಯದಲ್ಲಿ ಎಂ.ಸಿ.ರಸ್ತೆ ಆಸುಪಾಸಿನಲ್ಲಿರುವ ಕಾರ್ಖಾನೆ ಜಾಗದಲ್ಲಿ ಮಾಲ್ ನಿರ್ಮಿಸಿ ಆದಾಯದ ಮೂಲ ಸೃಷ್ಟಿಸಿಕೊಳ್ಳುವುದಕ್ಕೆ ಅವಕಾಶಗಳಿವೆ. ಈ ಬೆಳವಣಿಗೆ ಕಾಣಬೇಕಾದರೆ ಖಾಸಗಿಯವರೊಂದಿಗೆ ಶೇ.೫೦:೫೦ ಅನುಪಾತದಲ್ಲಿ ಕೈಜೋಡಿಸುವುದು ಅನಿವಾರ್ಯ. ಪಾಳುಬಿದ್ದಿರುವ ಮೈಷುಗರ್ ಈಜು ಕೇಂದ್ರವನ್ನು ಖಾಸಗಿಯವರ ನಿರ್ವಹಣೆಗೆ ನೀಡುವಾಗಲೂ ವಿರೋಧ ವ್ಯಕ್ತವಾಗಿದ್ದರಿಂದ ನಾನೂ ಸುಮ್ಮನಾದೆ ಎಂದರು.
ಅಭಿವೃದ್ಧಿಗಾಗಿ ಯಾರ ಬಳಿ ಹೋಗಲೂ ಸಿದ್ಧ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಶಾಲೆಗೆ ೨೫ ಕೋಟಿ ರೂ. ಅನುದಾನ ನೀಡುವ ಭರವಸೆ ನೀಡಿದ್ದಾರೆ. ಸಿಎಸ್ಆರ್ ಫಂಡ್ನ ವ್ಯಾಪ್ತಿ ಅವರಿಗೆ ದೊಡ್ಡದಾಗಿರುವುದರಿಂದ ಹೆಚ್ಚು ಹಣವನ್ನು ದೊರಕಿಸಿಕೊಡುವ ಸಾಮರ್ಥ್ಯ ಅವರಿಗಿದೆ. ಅಭಿವೃದ್ಧಿ ವಿಚಾರದಲ್ಲಿ ನಾನು ಯಾರ ಬಳಿ ಹೋಗುವುದಕ್ಕೂ ಸಿದ್ಧನಿದ್ದೇನೆ. ಅವರು ಹಣ ನೀಡಿದಲ್ಲಿ ಶಾಲೆಯನ್ನು ಸರ್ವಾಂಗೀಣ ಅಭಿವೃದ್ಧಿಪಡಿಸಬಹುದು ಎಂದು ಹೇಳಿದರು
ಸಭೆಯಲ್ಲಿ ಮೈಷುಗರ್ ಮಾಜಿ ಅಧ್ಯಕ್ಷರಾದ ಸಿದ್ದರಾಮೇಗೌಡ, ಬಿ.ಸಿ.ಶಿವಾನಂದ, ರೈತ ಮುಖಂಡರಾದ ಕೆ.ಬೋರಯ್ಯ, ಸುನಂದಾ ಜಯರಾಂ, ಇಂಡುವಾಳು ಚಂದ್ರಶೇಖರ್, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೀಲಾರ ಕೃಷ್ಣ, ಕಬ್ಬು ಬೆಳೆಗಾರರ ಒಕ್ಕೂಟದ ಸಾತನೂರು ವೇಣುಗೋಪಾಲ್, ನಗರಸಭೆ ಸದಸ್ಯರಾದ ಎಚ್.ಎಸ್.ಮಂಜು, ಕುಮಾರ, ಪೂರ್ಣಿಮಾ, ಮುಖಂಡರಾದ ಶಿವನಂಜು, ಜಿ.ಎ.ರಮೇಶ್, ಹನಕೆರೆ ಶಶಿಕುಮಾರ್, ಗಿರೀಶ ಇತರರು ಭಾಗವಹಿಸಿದ್ದರು.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…