ಮಂಡ್ಯ

ಮೈಷುಗರ್‌ ಪ್ರೌಢಾಶಾಲೆ ಗುತ್ತಿಗೆ ವಿವಾದ : ಶಾಸಕ ರವಿಕುಮಾರ್‌ ಹೇಳಿದ್ದೇನು?

ಮಂಡ್ಯ : ಮೈಷುಗರ್ ಪ್ರೌಢಶಾಲೆಯನ್ನು ಖಾಸಗಿಯವರಿಗೆ ಗುತ್ತಿಗೆ ನೀಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಗುತ್ತಿಗೆ ಪ್ರಕ್ರಿಯೆಯನ್ನು ರದ್ದುಪಡಿಸುವಂತೆ ಕಾರ್ಖಾನೆ ಅಧ್ಯಕ್ಷರಿಗೆ ತಿಳಿಸಲಾಗುವುದು ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮೈಷುಗರ್ ಪ್ರೌಢಶಾಲೆಗೆ ಸಂಬಂಽಸಿದಂತೆ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಲೆಯ ಅಭಿವೃದ್ಧಿ ದೃಷ್ಟಿಯಿಂದ ಖಾಸಗಿಯವರಿಗೆ ಗುತ್ತಿಗೆ ನೀಡಲು ಅಧ್ಯಕ್ಷರು ನಿರ್ಧರಿಸಿ ಪ್ರಕ್ರಿಯೆ ಅರಂಭಿಸಿದ್ದರು. ಆನಂತರದಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎಲ್ಲ ಮುಖಂಡರ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಲಾಗಿದೆ. ಬಹುತೇಕರು ಶಾಲೆಯನ್ನು ಗುತ್ತಿಗೆ ನೀಡುವುದಕ್ಕೆ ವಿರುದ್ಧ ಇರುವುದು ಕಂಡುಬಂದಿರುವ ಕಾರಣ ಗುತ್ತಿಗೆ ಪ್ರಕ್ರಿಯೆಯನ್ನು ಕೈಬಿಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಕಾರ್ಖಾನೆ ಆಸ್ತಿಯನ್ನು ಸುಮ್ಮನೆ ಖಾಲಿ ಬಿಡುವುದರಿಂದ ಪ್ರಯೋಜನವಿಲ್ಲ. ಪಾರಂಪರಿಕ ಎಂಬ ಹೆಸರಿನಲ್ಲಿ ಪಾಳು ಬಿಡುವುದೂ ಸರಿಯಲ್ಲ. ಆದಾಯ ಸೃಷ್ಟಿಸಿಕೊಳ್ಳಬೇಕಾದರೆ ಖಾಸಗಿಯವರ ಜೊತೆ ಕೈಜೋಡಿಸುವುದು ಇಂದಿನ ವಾಸ್ತವ ಸಂಗತಿ. ಬೆಂಗಳೂರಿನಲ್ಲಿರುವ ಕಾರ್ಖಾನೆ ಜಾಗದಲ್ಲಿ ಬಹುಮಹಡಿ ವಾಣಿಜ್ಯ ಸಂಕೀರ್ಣ ನಿರ್ಮಿಸಿ ಆದಾಯ ಬರುವಂತೆ ಮಾಡಬಹುದು. ಮಂಡ್ಯದಲ್ಲಿ ಎಂ.ಸಿ.ರಸ್ತೆ ಆಸುಪಾಸಿನಲ್ಲಿರುವ ಕಾರ್ಖಾನೆ ಜಾಗದಲ್ಲಿ ಮಾಲ್ ನಿರ್ಮಿಸಿ ಆದಾಯದ ಮೂಲ ಸೃಷ್ಟಿಸಿಕೊಳ್ಳುವುದಕ್ಕೆ ಅವಕಾಶಗಳಿವೆ. ಈ ಬೆಳವಣಿಗೆ ಕಾಣಬೇಕಾದರೆ ಖಾಸಗಿಯವರೊಂದಿಗೆ ಶೇ.೫೦:೫೦ ಅನುಪಾತದಲ್ಲಿ ಕೈಜೋಡಿಸುವುದು ಅನಿವಾರ್ಯ. ಪಾಳುಬಿದ್ದಿರುವ ಮೈಷುಗರ್ ಈಜು ಕೇಂದ್ರವನ್ನು ಖಾಸಗಿಯವರ ನಿರ್ವಹಣೆಗೆ ನೀಡುವಾಗಲೂ ವಿರೋಧ ವ್ಯಕ್ತವಾಗಿದ್ದರಿಂದ ನಾನೂ ಸುಮ್ಮನಾದೆ ಎಂದರು.

ಅಭಿವೃದ್ಧಿಗಾಗಿ ಯಾರ ಬಳಿ ಹೋಗಲೂ ಸಿದ್ಧ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಶಾಲೆಗೆ ೨೫ ಕೋಟಿ ರೂ. ಅನುದಾನ ನೀಡುವ ಭರವಸೆ ನೀಡಿದ್ದಾರೆ. ಸಿಎಸ್‌ಆರ್ ಫಂಡ್‌ನ ವ್ಯಾಪ್ತಿ ಅವರಿಗೆ ದೊಡ್ಡದಾಗಿರುವುದರಿಂದ ಹೆಚ್ಚು ಹಣವನ್ನು ದೊರಕಿಸಿಕೊಡುವ ಸಾಮರ್ಥ್ಯ ಅವರಿಗಿದೆ. ಅಭಿವೃದ್ಧಿ ವಿಚಾರದಲ್ಲಿ ನಾನು ಯಾರ ಬಳಿ ಹೋಗುವುದಕ್ಕೂ ಸಿದ್ಧನಿದ್ದೇನೆ. ಅವರು ಹಣ ನೀಡಿದಲ್ಲಿ ಶಾಲೆಯನ್ನು ಸರ್ವಾಂಗೀಣ ಅಭಿವೃದ್ಧಿಪಡಿಸಬಹುದು ಎಂದು ಹೇಳಿದರು

ಸಭೆಯಲ್ಲಿ ಮೈಷುಗರ್ ಮಾಜಿ ಅಧ್ಯಕ್ಷರಾದ ಸಿದ್ದರಾಮೇಗೌಡ, ಬಿ.ಸಿ.ಶಿವಾನಂದ, ರೈತ ಮುಖಂಡರಾದ ಕೆ.ಬೋರಯ್ಯ, ಸುನಂದಾ ಜಯರಾಂ, ಇಂಡುವಾಳು ಚಂದ್ರಶೇಖರ್, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೀಲಾರ ಕೃಷ್ಣ, ಕಬ್ಬು ಬೆಳೆಗಾರರ ಒಕ್ಕೂಟದ ಸಾತನೂರು ವೇಣುಗೋಪಾಲ್, ನಗರಸಭೆ ಸದಸ್ಯರಾದ ಎಚ್.ಎಸ್.ಮಂಜು, ಕುಮಾರ, ಪೂರ್ಣಿಮಾ, ಮುಖಂಡರಾದ ಶಿವನಂಜು, ಜಿ.ಎ.ರಮೇಶ್, ಹನಕೆರೆ ಶಶಿಕುಮಾರ್, ಗಿರೀಶ ಇತರರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಮುಂದಿನ ವಾರ ಡಿಸಿಎಂ ಡಿಕೆಶಿ ಮತ್ತೆ ದೆಹಲಿಗೆ

ಬೆಂಗಳೂರು: ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೇ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ…

37 mins ago

ಪರಪ್ಪನ ಅಗ್ರಹಾರ ಜೈಲು ಸೇರಿದ ಶಾಸಕ ಚಂದ್ರು ಲಮಾಣಿ

ಬೆಂಗಳೂರು: ಗದಗ ಜಿಲ್ಲೆ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ನ್ಯಾಯಾಂಗ ಬಂಧನಕ್ಕೆ…

38 mins ago

ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…

2 hours ago

ಹನೂರು| ಫೆ.25ರಂದು ವಾಂಗಾಳಿ ಅಮ್ಮನವರ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…

2 hours ago

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ಶರದ್‌ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌ ಪವಾರ್‌…

2 hours ago

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರದಲ್ಲಿಯೇ ಬ್ಯಾನ್‌ ಆಗಲಿದೆ ಮೊಬೈಲ್?:‌ ಸಿಎಂ ಸಿದ್ದರಾಮಯ್ಯ ಸುಳಿವು

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಫೋನ್‌ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿದೆ.…

3 hours ago