Mysugar High School lease dispute Ravikumar Statement
ಮಂಡ್ಯ : ಮೈಷುಗರ್ ಪ್ರೌಢಶಾಲೆಯನ್ನು ಖಾಸಗಿಯವರಿಗೆ ಗುತ್ತಿಗೆ ನೀಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಗುತ್ತಿಗೆ ಪ್ರಕ್ರಿಯೆಯನ್ನು ರದ್ದುಪಡಿಸುವಂತೆ ಕಾರ್ಖಾನೆ ಅಧ್ಯಕ್ಷರಿಗೆ ತಿಳಿಸಲಾಗುವುದು ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮೈಷುಗರ್ ಪ್ರೌಢಶಾಲೆಗೆ ಸಂಬಂಽಸಿದಂತೆ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಲೆಯ ಅಭಿವೃದ್ಧಿ ದೃಷ್ಟಿಯಿಂದ ಖಾಸಗಿಯವರಿಗೆ ಗುತ್ತಿಗೆ ನೀಡಲು ಅಧ್ಯಕ್ಷರು ನಿರ್ಧರಿಸಿ ಪ್ರಕ್ರಿಯೆ ಅರಂಭಿಸಿದ್ದರು. ಆನಂತರದಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎಲ್ಲ ಮುಖಂಡರ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಲಾಗಿದೆ. ಬಹುತೇಕರು ಶಾಲೆಯನ್ನು ಗುತ್ತಿಗೆ ನೀಡುವುದಕ್ಕೆ ವಿರುದ್ಧ ಇರುವುದು ಕಂಡುಬಂದಿರುವ ಕಾರಣ ಗುತ್ತಿಗೆ ಪ್ರಕ್ರಿಯೆಯನ್ನು ಕೈಬಿಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ಕಾರ್ಖಾನೆ ಆಸ್ತಿಯನ್ನು ಸುಮ್ಮನೆ ಖಾಲಿ ಬಿಡುವುದರಿಂದ ಪ್ರಯೋಜನವಿಲ್ಲ. ಪಾರಂಪರಿಕ ಎಂಬ ಹೆಸರಿನಲ್ಲಿ ಪಾಳು ಬಿಡುವುದೂ ಸರಿಯಲ್ಲ. ಆದಾಯ ಸೃಷ್ಟಿಸಿಕೊಳ್ಳಬೇಕಾದರೆ ಖಾಸಗಿಯವರ ಜೊತೆ ಕೈಜೋಡಿಸುವುದು ಇಂದಿನ ವಾಸ್ತವ ಸಂಗತಿ. ಬೆಂಗಳೂರಿನಲ್ಲಿರುವ ಕಾರ್ಖಾನೆ ಜಾಗದಲ್ಲಿ ಬಹುಮಹಡಿ ವಾಣಿಜ್ಯ ಸಂಕೀರ್ಣ ನಿರ್ಮಿಸಿ ಆದಾಯ ಬರುವಂತೆ ಮಾಡಬಹುದು. ಮಂಡ್ಯದಲ್ಲಿ ಎಂ.ಸಿ.ರಸ್ತೆ ಆಸುಪಾಸಿನಲ್ಲಿರುವ ಕಾರ್ಖಾನೆ ಜಾಗದಲ್ಲಿ ಮಾಲ್ ನಿರ್ಮಿಸಿ ಆದಾಯದ ಮೂಲ ಸೃಷ್ಟಿಸಿಕೊಳ್ಳುವುದಕ್ಕೆ ಅವಕಾಶಗಳಿವೆ. ಈ ಬೆಳವಣಿಗೆ ಕಾಣಬೇಕಾದರೆ ಖಾಸಗಿಯವರೊಂದಿಗೆ ಶೇ.೫೦:೫೦ ಅನುಪಾತದಲ್ಲಿ ಕೈಜೋಡಿಸುವುದು ಅನಿವಾರ್ಯ. ಪಾಳುಬಿದ್ದಿರುವ ಮೈಷುಗರ್ ಈಜು ಕೇಂದ್ರವನ್ನು ಖಾಸಗಿಯವರ ನಿರ್ವಹಣೆಗೆ ನೀಡುವಾಗಲೂ ವಿರೋಧ ವ್ಯಕ್ತವಾಗಿದ್ದರಿಂದ ನಾನೂ ಸುಮ್ಮನಾದೆ ಎಂದರು.
ಅಭಿವೃದ್ಧಿಗಾಗಿ ಯಾರ ಬಳಿ ಹೋಗಲೂ ಸಿದ್ಧ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಶಾಲೆಗೆ ೨೫ ಕೋಟಿ ರೂ. ಅನುದಾನ ನೀಡುವ ಭರವಸೆ ನೀಡಿದ್ದಾರೆ. ಸಿಎಸ್ಆರ್ ಫಂಡ್ನ ವ್ಯಾಪ್ತಿ ಅವರಿಗೆ ದೊಡ್ಡದಾಗಿರುವುದರಿಂದ ಹೆಚ್ಚು ಹಣವನ್ನು ದೊರಕಿಸಿಕೊಡುವ ಸಾಮರ್ಥ್ಯ ಅವರಿಗಿದೆ. ಅಭಿವೃದ್ಧಿ ವಿಚಾರದಲ್ಲಿ ನಾನು ಯಾರ ಬಳಿ ಹೋಗುವುದಕ್ಕೂ ಸಿದ್ಧನಿದ್ದೇನೆ. ಅವರು ಹಣ ನೀಡಿದಲ್ಲಿ ಶಾಲೆಯನ್ನು ಸರ್ವಾಂಗೀಣ ಅಭಿವೃದ್ಧಿಪಡಿಸಬಹುದು ಎಂದು ಹೇಳಿದರು
ಸಭೆಯಲ್ಲಿ ಮೈಷುಗರ್ ಮಾಜಿ ಅಧ್ಯಕ್ಷರಾದ ಸಿದ್ದರಾಮೇಗೌಡ, ಬಿ.ಸಿ.ಶಿವಾನಂದ, ರೈತ ಮುಖಂಡರಾದ ಕೆ.ಬೋರಯ್ಯ, ಸುನಂದಾ ಜಯರಾಂ, ಇಂಡುವಾಳು ಚಂದ್ರಶೇಖರ್, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೀಲಾರ ಕೃಷ್ಣ, ಕಬ್ಬು ಬೆಳೆಗಾರರ ಒಕ್ಕೂಟದ ಸಾತನೂರು ವೇಣುಗೋಪಾಲ್, ನಗರಸಭೆ ಸದಸ್ಯರಾದ ಎಚ್.ಎಸ್.ಮಂಜು, ಕುಮಾರ, ಪೂರ್ಣಿಮಾ, ಮುಖಂಡರಾದ ಶಿವನಂಜು, ಜಿ.ಎ.ರಮೇಶ್, ಹನಕೆರೆ ಶಶಿಕುಮಾರ್, ಗಿರೀಶ ಇತರರು ಭಾಗವಹಿಸಿದ್ದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…