ಮಂಡ್ಯ

ಮೈಷುಗರ್‌ ಪ್ರೌಢಾಶಾಲೆ ಗುತ್ತಿಗೆ ವಿವಾದ : ಶಾಸಕ ರವಿಕುಮಾರ್‌ ಹೇಳಿದ್ದೇನು?

ಮಂಡ್ಯ : ಮೈಷುಗರ್ ಪ್ರೌಢಶಾಲೆಯನ್ನು ಖಾಸಗಿಯವರಿಗೆ ಗುತ್ತಿಗೆ ನೀಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಗುತ್ತಿಗೆ ಪ್ರಕ್ರಿಯೆಯನ್ನು ರದ್ದುಪಡಿಸುವಂತೆ ಕಾರ್ಖಾನೆ ಅಧ್ಯಕ್ಷರಿಗೆ ತಿಳಿಸಲಾಗುವುದು ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮೈಷುಗರ್ ಪ್ರೌಢಶಾಲೆಗೆ ಸಂಬಂಽಸಿದಂತೆ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಲೆಯ ಅಭಿವೃದ್ಧಿ ದೃಷ್ಟಿಯಿಂದ ಖಾಸಗಿಯವರಿಗೆ ಗುತ್ತಿಗೆ ನೀಡಲು ಅಧ್ಯಕ್ಷರು ನಿರ್ಧರಿಸಿ ಪ್ರಕ್ರಿಯೆ ಅರಂಭಿಸಿದ್ದರು. ಆನಂತರದಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎಲ್ಲ ಮುಖಂಡರ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಲಾಗಿದೆ. ಬಹುತೇಕರು ಶಾಲೆಯನ್ನು ಗುತ್ತಿಗೆ ನೀಡುವುದಕ್ಕೆ ವಿರುದ್ಧ ಇರುವುದು ಕಂಡುಬಂದಿರುವ ಕಾರಣ ಗುತ್ತಿಗೆ ಪ್ರಕ್ರಿಯೆಯನ್ನು ಕೈಬಿಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಕಾರ್ಖಾನೆ ಆಸ್ತಿಯನ್ನು ಸುಮ್ಮನೆ ಖಾಲಿ ಬಿಡುವುದರಿಂದ ಪ್ರಯೋಜನವಿಲ್ಲ. ಪಾರಂಪರಿಕ ಎಂಬ ಹೆಸರಿನಲ್ಲಿ ಪಾಳು ಬಿಡುವುದೂ ಸರಿಯಲ್ಲ. ಆದಾಯ ಸೃಷ್ಟಿಸಿಕೊಳ್ಳಬೇಕಾದರೆ ಖಾಸಗಿಯವರ ಜೊತೆ ಕೈಜೋಡಿಸುವುದು ಇಂದಿನ ವಾಸ್ತವ ಸಂಗತಿ. ಬೆಂಗಳೂರಿನಲ್ಲಿರುವ ಕಾರ್ಖಾನೆ ಜಾಗದಲ್ಲಿ ಬಹುಮಹಡಿ ವಾಣಿಜ್ಯ ಸಂಕೀರ್ಣ ನಿರ್ಮಿಸಿ ಆದಾಯ ಬರುವಂತೆ ಮಾಡಬಹುದು. ಮಂಡ್ಯದಲ್ಲಿ ಎಂ.ಸಿ.ರಸ್ತೆ ಆಸುಪಾಸಿನಲ್ಲಿರುವ ಕಾರ್ಖಾನೆ ಜಾಗದಲ್ಲಿ ಮಾಲ್ ನಿರ್ಮಿಸಿ ಆದಾಯದ ಮೂಲ ಸೃಷ್ಟಿಸಿಕೊಳ್ಳುವುದಕ್ಕೆ ಅವಕಾಶಗಳಿವೆ. ಈ ಬೆಳವಣಿಗೆ ಕಾಣಬೇಕಾದರೆ ಖಾಸಗಿಯವರೊಂದಿಗೆ ಶೇ.೫೦:೫೦ ಅನುಪಾತದಲ್ಲಿ ಕೈಜೋಡಿಸುವುದು ಅನಿವಾರ್ಯ. ಪಾಳುಬಿದ್ದಿರುವ ಮೈಷುಗರ್ ಈಜು ಕೇಂದ್ರವನ್ನು ಖಾಸಗಿಯವರ ನಿರ್ವಹಣೆಗೆ ನೀಡುವಾಗಲೂ ವಿರೋಧ ವ್ಯಕ್ತವಾಗಿದ್ದರಿಂದ ನಾನೂ ಸುಮ್ಮನಾದೆ ಎಂದರು.

ಅಭಿವೃದ್ಧಿಗಾಗಿ ಯಾರ ಬಳಿ ಹೋಗಲೂ ಸಿದ್ಧ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಶಾಲೆಗೆ ೨೫ ಕೋಟಿ ರೂ. ಅನುದಾನ ನೀಡುವ ಭರವಸೆ ನೀಡಿದ್ದಾರೆ. ಸಿಎಸ್‌ಆರ್ ಫಂಡ್‌ನ ವ್ಯಾಪ್ತಿ ಅವರಿಗೆ ದೊಡ್ಡದಾಗಿರುವುದರಿಂದ ಹೆಚ್ಚು ಹಣವನ್ನು ದೊರಕಿಸಿಕೊಡುವ ಸಾಮರ್ಥ್ಯ ಅವರಿಗಿದೆ. ಅಭಿವೃದ್ಧಿ ವಿಚಾರದಲ್ಲಿ ನಾನು ಯಾರ ಬಳಿ ಹೋಗುವುದಕ್ಕೂ ಸಿದ್ಧನಿದ್ದೇನೆ. ಅವರು ಹಣ ನೀಡಿದಲ್ಲಿ ಶಾಲೆಯನ್ನು ಸರ್ವಾಂಗೀಣ ಅಭಿವೃದ್ಧಿಪಡಿಸಬಹುದು ಎಂದು ಹೇಳಿದರು

ಸಭೆಯಲ್ಲಿ ಮೈಷುಗರ್ ಮಾಜಿ ಅಧ್ಯಕ್ಷರಾದ ಸಿದ್ದರಾಮೇಗೌಡ, ಬಿ.ಸಿ.ಶಿವಾನಂದ, ರೈತ ಮುಖಂಡರಾದ ಕೆ.ಬೋರಯ್ಯ, ಸುನಂದಾ ಜಯರಾಂ, ಇಂಡುವಾಳು ಚಂದ್ರಶೇಖರ್, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೀಲಾರ ಕೃಷ್ಣ, ಕಬ್ಬು ಬೆಳೆಗಾರರ ಒಕ್ಕೂಟದ ಸಾತನೂರು ವೇಣುಗೋಪಾಲ್, ನಗರಸಭೆ ಸದಸ್ಯರಾದ ಎಚ್.ಎಸ್.ಮಂಜು, ಕುಮಾರ, ಪೂರ್ಣಿಮಾ, ಮುಖಂಡರಾದ ಶಿವನಂಜು, ಜಿ.ಎ.ರಮೇಶ್, ಹನಕೆರೆ ಶಶಿಕುಮಾರ್, ಗಿರೀಶ ಇತರರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago