ಮಂಡ್ಯ

ಮೈಶುಗರ್: 2.5 ಲಕ್ಷ ಟನ್‌ನಷ್ಟು ಕಬ್ಬು ಅರೆಯಲು ಯಾವುದೇ ತೊಂದರೆ ಇಲ್ಲ: ಡಾ: ಹೆಚ್.ಎಲ್ ನಾಗರಾಜು

ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು ಕಬ್ಬು ಪೂರೈಕೆಯಾಗುತ್ತಿದೆ. ನಿಗಧಿತ ಗುರಿಯಂತೆ 2.5 ಲಕ್ಷ ಟನ್‌ನಷ್ಟು ಕಬ್ಬು ಅರೆಯಲಾಗುವುದು, ಕಾರ್ಖಾನೆಯಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಮೈ ಶುಗರ್ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಹೆಚ್ ಎಲ್ ನಾಗರಾಜು‌ ತಿಳಿಸಿದ್ದಾರೆ.

ಅನಧಿಕೃತವಾಗಿ ಪರಭಾರೆ
ಮೈಷುಗರ್ ಕಂಪನಿಯ ವ್ಯಾಪ್ತಿಯ ಪ್ರದೇಶದಲ್ಲಿ ಅಕ್ಕ-ಪಕ್ಕದ ಕಾರ್ಖಾನೆಯಾದ ಕೆ.ಎಂ.ದೊಡ್ಡಿಯ ಭಾರತೀನಗರದಲ್ಲಿರುವ ಶ್ರೀ.ಚಾಮುಂಡೇಶ್ವರಿ ಷುಗರ್ಸ್ ಲಿ. ಇವರು ತಮ್ಮ ವ್ಯಾಪ್ತಿಯ ಪ್ರದೇಶವಾದ ಕುರುಬನಪುರ ಗ್ರಾಮದ ರೈತ ಶ್ರೀ.ಸಿದ್ದಗೌಡರ ಕಬ್ಬುನ್ನು 15 ತಿಂಗಳು ತುಂಬಿದರೂ ಕಬ್ಬುನ್ನು ಕಟಾವು ಮಾಡದೇ ಮೈಷುಗರ್ ವ್ಯಾಪ್ತಿಯ ಕಬ್ಬನ್ನು ಕಟಾವು ಮಾಡಲು ಬಂದಿರುತ್ತಾರೆ. ಎನ್.ಎಸ್.ಎಲ್. ಷುಗರ್ಸ್ ಲಿ. ಕೊಪ್ಪ ಇವರು ಹಲ್ಲೆಗೆರೆ ಗ್ರಾಮದಲ್ಲಿ ಕ್ಷೇತ್ರ ಸಹಾಯಕರ ಕಚೇರಿಗೆ ಬೀಗ ಹಾಕಿರುತ್ತಾರೆ. ಈ ಎರಡು ಕಾರ್ಖಾನೆಗಳು ಮೈಷುಗರ್ ವ್ಯಾಪ್ತಿ ಪ್ರದೇಶ ಕಬ್ಬನ್ನು ಅನಧಿಕೃತವಾಗಿ ಪರಭಾರೆ ಮಾಡುತ್ತಿದ್ದಾರೆ.

ನಿಗಧಿತ ಸುಮಯದಲ್ಲಿ ಕಬ್ಬು ಸರಬರಾಜು ಮಾಡಿದ ರೈತರಿಗೆ, ಸಾಗಾಣಿಕೆದಾರರಿಗೆ ಮತ್ತು ಕಬ್ಬು ಕಟಾವು ಮೇಸ್ತ್ರಿಗಳಿಗೆ ಮೈ ಶುಗರ್ ಸಕ್ಕರೆ ಕಾರ್ಖಾನೆ ಹಣ ಪಾವತಿ ಮಾಡುತ್ತಿದೆ.

ಮೈಸೂರು ಸಕ್ಕರೆ ಕಂಪನಿ ನಿಯಮಿತ ಕಾರ್ಖಾನೆಯು ಸೆಪ್ಟೆಂಬರ್ 15 ವರೆಗೆ 74605 ಮೆ.ಟನ್ ಕಬ್ಬು ನುರಿಸಿಲಾಗಿರುತ್ತದೆ.
38318 ಕ್ವಿಂಟಾಲ್ ಸಕ್ಕರೆ ಉತ್ಪಾದನೆ ಹಾಗೂ 4140 ಮೆ. ಟನ್ ಕಾಕಂಬಿ ಉತ್ಪಾದನೆಯಾಗಿರುತ್ತದೆ.

223 ಕಬ್ಬು ಕಟಾವು ಗ್ಯಾಂಗ್ ಮೇಸ್ತಿಗಳ ಸಂಖ್ಯೆ ಇದ್ದು, ಕಬ್ಬು ಕಟಾವು ಮೇಸ್ತ್ರಿ ಗಳಿಗೆ ರೂ 2,61,12,200/- ಪಾವತಿಯಾಗಿರುತ್ತದೆ,

ರೂ 91,62,839/- ಕಬ್ಬು ಸಾಗಾಣಿಕೆ ವೆಚ್ಚವಾಗಿದೆ. ಕಬ್ಬು ಸರಬರಾಜು ಮಾಡಿರುವ 531 ರೈತರಿಗೆ ಒಟ್ಟು (35775.511 ಮೆ. ಟನ್ ಕಬ್ಬು) ರೂ.9,14,45,197/- ಹಣ ಪಾವತಿಸಿದೆ.

ಸೆಪ್ಟೆಂಬರ್ 15, 2024 ರ ಅಂತ್ಯಕ್ಕೆ ಕಾರ್ಖಾನೆಯಲ್ಲಿ ಒಟ್ಟು 60,30,000 ಯೂನಿಟ್
ವಿದ್ಯುತ್ ಉತ್ಪಾದಿಸಿ , 28,52,640 ಯೂನಿಟ್ ನ್ನು ಒಂದು ಯುನಿಟ್ ಗೆ ರೂ. 6.07 ಪೈಸೆ ಯಂತೆ ರಪ್ತು ಮಾಡಲಾಗಿದೆ. .

ಮೈ ಶುಗರ್ ಸಕ್ಕರೆ ಕಾರ್ಖಾನೆಗೆ ಆದಾಯ ತೆರಿಗೆ ಇಲಾಖೆಯಿಂದ ಹಿಂಬಾಕಿ ರೂ.6.50 ಕೋಟಿ.
ಬರಬೇಕಿರುತ್ತದೆ. ಕಬ್ಬು ಕಟಾವು ಮೇಸ್ತಿಗಳಿಂದ ರೂ.2,12,99,865/- ಮುಂಗಡ ಹಣ ವಸೂಲಿ ಮಾಡಲಾಗಿದ್ದು ಇನ್ನುಳಿದ ಮುಂಗಡ ಹಣ – ರೂ. 1,15,75,135/- ಮೊತ್ತಕ್ಕೆ ಸಂಪೂರ್ಣ ಭದ್ರತೆ ಪಡೆದುಕೊಳ್ಳಲಾಗಿರುತ್ತದೆ.

223 ಕಬ್ಬು ಕಟಾವು ಮಾಡುವ ಗ್ಯಾಂಗ್‌ಗಳು ಮುಂಗಡ ಹಣವಿಲ್ಲದೇ ಪ್ರತಿ ದಿನ 3000 ಮೆ.ಟನ್ ಕಬ್ಬು ಕಟಾವು ಮಾಡುತ್ತಿದ್ದಾರೆ ಎಂದು ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

34 mins ago

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…

1 hour ago

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

2 hours ago

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

2 hours ago

ಓದುಗರ ಪತ್ರ | ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…

2 hours ago

ಶಿವರಾತ್ರಿ ಜಾತ್ರೆ | ಮ.ಬೆಟ್ಟದಲ್ಲಿ ಸಕಲ ಸಿದ್ಧತೆ ; ನಾಳೆಯಿಂದ ಐದು ದಿನ ಸಂಭ್ರಮ

ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…

3 hours ago