ಮಂಡ್ಯ

ಮೈಶುಗರ್: 2.5 ಲಕ್ಷ ಟನ್‌ನಷ್ಟು ಕಬ್ಬು ಅರೆಯಲು ಯಾವುದೇ ತೊಂದರೆ ಇಲ್ಲ: ಡಾ: ಹೆಚ್.ಎಲ್ ನಾಗರಾಜು

ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು ಕಬ್ಬು ಪೂರೈಕೆಯಾಗುತ್ತಿದೆ. ನಿಗಧಿತ ಗುರಿಯಂತೆ 2.5 ಲಕ್ಷ ಟನ್‌ನಷ್ಟು ಕಬ್ಬು ಅರೆಯಲಾಗುವುದು, ಕಾರ್ಖಾನೆಯಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಮೈ ಶುಗರ್ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಹೆಚ್ ಎಲ್ ನಾಗರಾಜು‌ ತಿಳಿಸಿದ್ದಾರೆ.

ಅನಧಿಕೃತವಾಗಿ ಪರಭಾರೆ
ಮೈಷುಗರ್ ಕಂಪನಿಯ ವ್ಯಾಪ್ತಿಯ ಪ್ರದೇಶದಲ್ಲಿ ಅಕ್ಕ-ಪಕ್ಕದ ಕಾರ್ಖಾನೆಯಾದ ಕೆ.ಎಂ.ದೊಡ್ಡಿಯ ಭಾರತೀನಗರದಲ್ಲಿರುವ ಶ್ರೀ.ಚಾಮುಂಡೇಶ್ವರಿ ಷುಗರ್ಸ್ ಲಿ. ಇವರು ತಮ್ಮ ವ್ಯಾಪ್ತಿಯ ಪ್ರದೇಶವಾದ ಕುರುಬನಪುರ ಗ್ರಾಮದ ರೈತ ಶ್ರೀ.ಸಿದ್ದಗೌಡರ ಕಬ್ಬುನ್ನು 15 ತಿಂಗಳು ತುಂಬಿದರೂ ಕಬ್ಬುನ್ನು ಕಟಾವು ಮಾಡದೇ ಮೈಷುಗರ್ ವ್ಯಾಪ್ತಿಯ ಕಬ್ಬನ್ನು ಕಟಾವು ಮಾಡಲು ಬಂದಿರುತ್ತಾರೆ. ಎನ್.ಎಸ್.ಎಲ್. ಷುಗರ್ಸ್ ಲಿ. ಕೊಪ್ಪ ಇವರು ಹಲ್ಲೆಗೆರೆ ಗ್ರಾಮದಲ್ಲಿ ಕ್ಷೇತ್ರ ಸಹಾಯಕರ ಕಚೇರಿಗೆ ಬೀಗ ಹಾಕಿರುತ್ತಾರೆ. ಈ ಎರಡು ಕಾರ್ಖಾನೆಗಳು ಮೈಷುಗರ್ ವ್ಯಾಪ್ತಿ ಪ್ರದೇಶ ಕಬ್ಬನ್ನು ಅನಧಿಕೃತವಾಗಿ ಪರಭಾರೆ ಮಾಡುತ್ತಿದ್ದಾರೆ.

ನಿಗಧಿತ ಸುಮಯದಲ್ಲಿ ಕಬ್ಬು ಸರಬರಾಜು ಮಾಡಿದ ರೈತರಿಗೆ, ಸಾಗಾಣಿಕೆದಾರರಿಗೆ ಮತ್ತು ಕಬ್ಬು ಕಟಾವು ಮೇಸ್ತ್ರಿಗಳಿಗೆ ಮೈ ಶುಗರ್ ಸಕ್ಕರೆ ಕಾರ್ಖಾನೆ ಹಣ ಪಾವತಿ ಮಾಡುತ್ತಿದೆ.

ಮೈಸೂರು ಸಕ್ಕರೆ ಕಂಪನಿ ನಿಯಮಿತ ಕಾರ್ಖಾನೆಯು ಸೆಪ್ಟೆಂಬರ್ 15 ವರೆಗೆ 74605 ಮೆ.ಟನ್ ಕಬ್ಬು ನುರಿಸಿಲಾಗಿರುತ್ತದೆ.
38318 ಕ್ವಿಂಟಾಲ್ ಸಕ್ಕರೆ ಉತ್ಪಾದನೆ ಹಾಗೂ 4140 ಮೆ. ಟನ್ ಕಾಕಂಬಿ ಉತ್ಪಾದನೆಯಾಗಿರುತ್ತದೆ.

223 ಕಬ್ಬು ಕಟಾವು ಗ್ಯಾಂಗ್ ಮೇಸ್ತಿಗಳ ಸಂಖ್ಯೆ ಇದ್ದು, ಕಬ್ಬು ಕಟಾವು ಮೇಸ್ತ್ರಿ ಗಳಿಗೆ ರೂ 2,61,12,200/- ಪಾವತಿಯಾಗಿರುತ್ತದೆ,

ರೂ 91,62,839/- ಕಬ್ಬು ಸಾಗಾಣಿಕೆ ವೆಚ್ಚವಾಗಿದೆ. ಕಬ್ಬು ಸರಬರಾಜು ಮಾಡಿರುವ 531 ರೈತರಿಗೆ ಒಟ್ಟು (35775.511 ಮೆ. ಟನ್ ಕಬ್ಬು) ರೂ.9,14,45,197/- ಹಣ ಪಾವತಿಸಿದೆ.

ಸೆಪ್ಟೆಂಬರ್ 15, 2024 ರ ಅಂತ್ಯಕ್ಕೆ ಕಾರ್ಖಾನೆಯಲ್ಲಿ ಒಟ್ಟು 60,30,000 ಯೂನಿಟ್
ವಿದ್ಯುತ್ ಉತ್ಪಾದಿಸಿ , 28,52,640 ಯೂನಿಟ್ ನ್ನು ಒಂದು ಯುನಿಟ್ ಗೆ ರೂ. 6.07 ಪೈಸೆ ಯಂತೆ ರಪ್ತು ಮಾಡಲಾಗಿದೆ. .

ಮೈ ಶುಗರ್ ಸಕ್ಕರೆ ಕಾರ್ಖಾನೆಗೆ ಆದಾಯ ತೆರಿಗೆ ಇಲಾಖೆಯಿಂದ ಹಿಂಬಾಕಿ ರೂ.6.50 ಕೋಟಿ.
ಬರಬೇಕಿರುತ್ತದೆ. ಕಬ್ಬು ಕಟಾವು ಮೇಸ್ತಿಗಳಿಂದ ರೂ.2,12,99,865/- ಮುಂಗಡ ಹಣ ವಸೂಲಿ ಮಾಡಲಾಗಿದ್ದು ಇನ್ನುಳಿದ ಮುಂಗಡ ಹಣ – ರೂ. 1,15,75,135/- ಮೊತ್ತಕ್ಕೆ ಸಂಪೂರ್ಣ ಭದ್ರತೆ ಪಡೆದುಕೊಳ್ಳಲಾಗಿರುತ್ತದೆ.

223 ಕಬ್ಬು ಕಟಾವು ಮಾಡುವ ಗ್ಯಾಂಗ್‌ಗಳು ಮುಂಗಡ ಹಣವಿಲ್ಲದೇ ಪ್ರತಿ ದಿನ 3000 ಮೆ.ಟನ್ ಕಬ್ಬು ಕಟಾವು ಮಾಡುತ್ತಿದ್ದಾರೆ ಎಂದು ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು | ಟೆಕ್ಕಿ ಶರಣ್ಯ ಕೊನೆಗೂ ಪತ್ತೆ

ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊ‌ನೆಗೂ ಪತ್ತೆ…

8 mins ago

ತಮಿಳುನಾಡು ಚುನಾವಣೆ : ಅಫಿಡವಿಟ್‌ನಲ್ಲಿ 2 ಕ್ರಿಮಿನಲ್‌ ಪ್ರಕರಣ ಘೋಷಿಸಿಕೊಂಡ ವಿಜಯ್‌

ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ…

20 mins ago

ಮಧ್ಯ ಪ್ರಾಚ್ಯ ಬಿಕ್ಕಟ್ಟು | ವಿದೇಶಾಂಗ ನೀತಿ ಬದಲಿಸಲು ಖರ್ಗೆ ಆಗ್ರಹ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…

3 hours ago

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

4 hours ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

4 hours ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

5 hours ago