ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು ಕಬ್ಬು ಪೂರೈಕೆಯಾಗುತ್ತಿದೆ. ನಿಗಧಿತ ಗುರಿಯಂತೆ 2.5 ಲಕ್ಷ ಟನ್ನಷ್ಟು ಕಬ್ಬು ಅರೆಯಲಾಗುವುದು, ಕಾರ್ಖಾನೆಯಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಮೈ ಶುಗರ್ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಹೆಚ್ ಎಲ್ ನಾಗರಾಜು ತಿಳಿಸಿದ್ದಾರೆ.
ಅನಧಿಕೃತವಾಗಿ ಪರಭಾರೆ
ಮೈಷುಗರ್ ಕಂಪನಿಯ ವ್ಯಾಪ್ತಿಯ ಪ್ರದೇಶದಲ್ಲಿ ಅಕ್ಕ-ಪಕ್ಕದ ಕಾರ್ಖಾನೆಯಾದ ಕೆ.ಎಂ.ದೊಡ್ಡಿಯ ಭಾರತೀನಗರದಲ್ಲಿರುವ ಶ್ರೀ.ಚಾಮುಂಡೇಶ್ವರಿ ಷುಗರ್ಸ್ ಲಿ. ಇವರು ತಮ್ಮ ವ್ಯಾಪ್ತಿಯ ಪ್ರದೇಶವಾದ ಕುರುಬನಪುರ ಗ್ರಾಮದ ರೈತ ಶ್ರೀ.ಸಿದ್ದಗೌಡರ ಕಬ್ಬುನ್ನು 15 ತಿಂಗಳು ತುಂಬಿದರೂ ಕಬ್ಬುನ್ನು ಕಟಾವು ಮಾಡದೇ ಮೈಷುಗರ್ ವ್ಯಾಪ್ತಿಯ ಕಬ್ಬನ್ನು ಕಟಾವು ಮಾಡಲು ಬಂದಿರುತ್ತಾರೆ. ಎನ್.ಎಸ್.ಎಲ್. ಷುಗರ್ಸ್ ಲಿ. ಕೊಪ್ಪ ಇವರು ಹಲ್ಲೆಗೆರೆ ಗ್ರಾಮದಲ್ಲಿ ಕ್ಷೇತ್ರ ಸಹಾಯಕರ ಕಚೇರಿಗೆ ಬೀಗ ಹಾಕಿರುತ್ತಾರೆ. ಈ ಎರಡು ಕಾರ್ಖಾನೆಗಳು ಮೈಷುಗರ್ ವ್ಯಾಪ್ತಿ ಪ್ರದೇಶ ಕಬ್ಬನ್ನು ಅನಧಿಕೃತವಾಗಿ ಪರಭಾರೆ ಮಾಡುತ್ತಿದ್ದಾರೆ.
ನಿಗಧಿತ ಸುಮಯದಲ್ಲಿ ಕಬ್ಬು ಸರಬರಾಜು ಮಾಡಿದ ರೈತರಿಗೆ, ಸಾಗಾಣಿಕೆದಾರರಿಗೆ ಮತ್ತು ಕಬ್ಬು ಕಟಾವು ಮೇಸ್ತ್ರಿಗಳಿಗೆ ಮೈ ಶುಗರ್ ಸಕ್ಕರೆ ಕಾರ್ಖಾನೆ ಹಣ ಪಾವತಿ ಮಾಡುತ್ತಿದೆ.
ಮೈಸೂರು ಸಕ್ಕರೆ ಕಂಪನಿ ನಿಯಮಿತ ಕಾರ್ಖಾನೆಯು ಸೆಪ್ಟೆಂಬರ್ 15 ವರೆಗೆ 74605 ಮೆ.ಟನ್ ಕಬ್ಬು ನುರಿಸಿಲಾಗಿರುತ್ತದೆ.
38318 ಕ್ವಿಂಟಾಲ್ ಸಕ್ಕರೆ ಉತ್ಪಾದನೆ ಹಾಗೂ 4140 ಮೆ. ಟನ್ ಕಾಕಂಬಿ ಉತ್ಪಾದನೆಯಾಗಿರುತ್ತದೆ.
223 ಕಬ್ಬು ಕಟಾವು ಗ್ಯಾಂಗ್ ಮೇಸ್ತಿಗಳ ಸಂಖ್ಯೆ ಇದ್ದು, ಕಬ್ಬು ಕಟಾವು ಮೇಸ್ತ್ರಿ ಗಳಿಗೆ ರೂ 2,61,12,200/- ಪಾವತಿಯಾಗಿರುತ್ತದೆ,
ರೂ 91,62,839/- ಕಬ್ಬು ಸಾಗಾಣಿಕೆ ವೆಚ್ಚವಾಗಿದೆ. ಕಬ್ಬು ಸರಬರಾಜು ಮಾಡಿರುವ 531 ರೈತರಿಗೆ ಒಟ್ಟು (35775.511 ಮೆ. ಟನ್ ಕಬ್ಬು) ರೂ.9,14,45,197/- ಹಣ ಪಾವತಿಸಿದೆ.
ಸೆಪ್ಟೆಂಬರ್ 15, 2024 ರ ಅಂತ್ಯಕ್ಕೆ ಕಾರ್ಖಾನೆಯಲ್ಲಿ ಒಟ್ಟು 60,30,000 ಯೂನಿಟ್
ವಿದ್ಯುತ್ ಉತ್ಪಾದಿಸಿ , 28,52,640 ಯೂನಿಟ್ ನ್ನು ಒಂದು ಯುನಿಟ್ ಗೆ ರೂ. 6.07 ಪೈಸೆ ಯಂತೆ ರಪ್ತು ಮಾಡಲಾಗಿದೆ. .
ಮೈ ಶುಗರ್ ಸಕ್ಕರೆ ಕಾರ್ಖಾನೆಗೆ ಆದಾಯ ತೆರಿಗೆ ಇಲಾಖೆಯಿಂದ ಹಿಂಬಾಕಿ ರೂ.6.50 ಕೋಟಿ.
ಬರಬೇಕಿರುತ್ತದೆ. ಕಬ್ಬು ಕಟಾವು ಮೇಸ್ತಿಗಳಿಂದ ರೂ.2,12,99,865/- ಮುಂಗಡ ಹಣ ವಸೂಲಿ ಮಾಡಲಾಗಿದ್ದು ಇನ್ನುಳಿದ ಮುಂಗಡ ಹಣ – ರೂ. 1,15,75,135/- ಮೊತ್ತಕ್ಕೆ ಸಂಪೂರ್ಣ ಭದ್ರತೆ ಪಡೆದುಕೊಳ್ಳಲಾಗಿರುತ್ತದೆ.
223 ಕಬ್ಬು ಕಟಾವು ಮಾಡುವ ಗ್ಯಾಂಗ್ಗಳು ಮುಂಗಡ ಹಣವಿಲ್ಲದೇ ಪ್ರತಿ ದಿನ 3000 ಮೆ.ಟನ್ ಕಬ್ಬು ಕಟಾವು ಮಾಡುತ್ತಿದ್ದಾರೆ ಎಂದು ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…