ಮಂಡ್ಯ

ಮೈಶುಗರ್‌ ಸಕ್ಕರೆ ಕಾರ್ಖಾನೆ ಯಾವುದೇ ಕಾರಣಕ್ಕೂ ಖಾಸಗೀಕರಣವಿಲ್ಲ: ದಿನೇಶ ಗೂಳಿಗೌಡ

  • ಸ್ಪಷ್ಟನೆ ನೀಡಿದ ವಿಪ ಶಾಸಕರಾದ ದಿನೇಶ ಗೂಳಿಗೌಡ
  • ಕಾರ್ಖಾನೆಯನ್ನು ಬಂದ್‌ ಮಾಡಲು ಅಪ ಪ್ರಚಾರ ನಡೆಯುತ್ತಿದೆ
  • ಕಾರ್ಖಾನೆಯ, ರೈತರ ಹಿತ ಕಾಪಾಡಲು ಸರ್ಕಾರ ಬದ್ಧ ಎಂಬ ಭರವಸೆ

ಮಂಡ್ಯ: ಜಿಲ್ಲೆಯ ಏಕೈಕ ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಯಾದ “ಮೈಶುಗರ್‌” ಖಾಸಗೀಕರಣ ಮಾಡಲಾಗುತ್ತಿದೆ ಎಂದು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅಪಪ್ರಚಾರ ಮಾಡುತ್ತಿವೆ ಎಂದು ವಿಧಾನ ಪರಿಷತ್‌ ಶಾಸಕರಾದ ದಿನೇಶ ಗೂಳಿಗೌಡ ಹೇಳಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಅಪ ಪ್ರಚಾರಕ್ಕೆ ಸಾರ್ವಜನಿಕರಾಗಲೀ, ರೈತರಾಗಲೀ ಅಪ ಪ್ರಚಾರಕ್ಕೆ ಕಿವಿಗೊಡಬಾರದು. ಯಾವುದೇ ಕಾರಣಕ್ಕೂ ಇದನ್ನು ಖಾಸಗೀಕರಣ ಮಾಡುವುದಿಲ್ಲ. ನಮ್ಮ ಸರ್ಕಾರ ರೈತರ ಹಿತ ಕಾಯಲು ಬದ್ಧವಿದೆ ಎಂದು ಹೇಳಿದ್ದಾರೆ.

ಈ ಕಾರ್ಖಾನೆ ಸಂಪೂರ್ಣವಾಗಿ ನಷ್ಟದಲ್ಲಿದ್ದಿದ್ದಲ್ಲದೆ, ಮುಚ್ಚಿ ಹೋಗುವ ಹಂತದಲ್ಲಿತ್ತು. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ, ಶಾಸಕರಾದ ರವಿಕುಮಾರ್ ಗಣಿಗ ಹಾಗೂ ನಾನುಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಬಳಿ ಈ ಕಾರ್ಖಾನೆಯ ಪುನಶ್ಚೇತನಕ್ಕಾಗಿ ಮನವಿ ಮಾಡಿದ್ದೆವು. ಕಳೆದ ವರ್ಷ ಕಾರ್ಖಾನೆಗೆ 50 ಕೋಟಿ ರೂಪಾಯಿಯನ್ನು ಕಾರ್ಖಾನೆಯ ಕಾರ್ಯಗಳಿಗೆ ಬಿಡುಗಡೆ ಮಾಡಿಸಲು ಯಶಸ್ವಿಯಾಗಿದ್ದೆವು. ಪರಿಣಾಮ ಕಾರ್ಖಾನೆ ಕಳೆದ ಹಂಗಾಮಿನಲ್ಲಿ 2 ಲಕ್ಷ 5 ಸಾವಿರ ಟನ್ ಕಬ್ಬನ್ನು ಅರೆದಿತ್ತು. ಮಾತ್ರವಲ್ಲ ರೈತರಿಗೆ ಕಬ್ಬಿನ ಬಿಲ್‌ನ ಸಂಪೂರ್ಣ ಹಣ ಪಾವತಿಸಲಾಗಿತ್ತು. ಈ ಬಾರಿ ಕಾರ್ಖಾನೆಯು ಸರ್ಕಾರದ ಯಾವುದೇ ಸಹಾಯಧನವನ್ನು ಪಡೆಯದೆಯೇ ಕಬ್ಬನ್ನು ನುರಿಸಿದೆ ಎಂದು ಹೇಳಿದ್ದಾರೆ.

ಈ ವರ್ಷ 2 ಲಕ್ಷದ 1 ಸಾವಿರದ 850 ಟನ್ ಕಬ್ಬನ್ನು ಅರೆಯಲಾಗಿದೆ. ಸುಮಾರು 3400 ರಷ್ಟು ರೈತರು ಕಬ್ಬು ಪೂರೈಕೆ ಮಾಡಿದ್ದರು. ಎಲ್ಲ ರೈತರಿಗೆ ಶೇಕಡ 100 ರಷ್ಟು ಬಿಲ್‌ ಪಾವತಿ ಮಾಡಲಾಗಿದೆ.

ಮಾತ್ರವಲ್ಲ ಕಳೆದ 20 ವರ್ಷಗಳಿಂದ ಬಾಕಿ ಇದ್ದ 52.25 ಕೋಟಿ ವಿದ್ಯುತ್ ಬಿಲ್ ಬಾಕಿಯನ್ನು ಸಹ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಉಸ್ತುವಾರಿ ಸಚಿವರಾದ ಚಲುವರಾಯಸ್ವಾಾಮಿ ನೇತೃತ್ವದ ಸರ್ಕಾರ ಮನ್ನಾ ಮಾಡಿದೆ. ಹೀಗಾಗಿ ಇದನ್ನು ಖಾಸಗೀಕರಣ ಮಾಡುವಂತಹ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ. ಇದು ಖಂಡಿತಾ ಅಪಪ್ರಚಾರವಾಗಿದೆ. ರಾಜ್ಯದಲ್ಲಿ ಇರುವ 72 ಸಕ್ಕರೆ ಕಾರ್ಖಾನೆಗಳಲ್ಲಿ ಮೈಶುಗರ್ ಏಕೈಕ ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಯಾಗಿದೆ. ಮೈಶುಗರ್ ಉಳಿವಿಗೆ ಸರ್ಕಾರ ಸಿದ್ಧವಿದೆ. ಅಪಪ್ರಚಾರಕ್ಕೆ ಯಾರೂ ಕಿವಿಗೊಡಬೇಡಿ ಎಂದು ದಿನೇಶ್ ಗೂಳಿಗೌಡ ಹೇಳಿದ್ದಾರೆ.ವ

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

17 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

17 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

17 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

17 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

17 hours ago