Categories: ಮಂಡ್ಯ

ಮೈಷುಗರ್:‌ 2024-25ನೇ ಸಾಲಿನ ಕಬ್ಬು ನುರಿಯುವ ಕಾರ್ಯ ಸ್ಥಗಿತ

ಮಂಡ್ಯ: ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ೨೦೨೪-೨೫ ನೇ ಸಾಲಿನ ಕಬ್ಬು ನುರಿಯುವ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಆಗಸ್ಟ್ ೫ರಂದು ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಯುವ ಕಾರ್ಯ ಪ್ರಾರಂಭವಾಗಿ ೨,೦೫,೦೦೦ ಟನ್ ಕಬ್ಬಿನ ಗುರಿಯ ಪೈಕಿ ೨,೦೧,೯೦೦ ಟನ್ ಕಬ್ಬನ್ನು ನುರಿಯಲಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ೨೦೨೩-೨೪ನೇ ಸಾಲಿನಲ್ಲಿ ಮೈಷುಗರ್ ಸಕ್ಕರೆ ಕಾರ್ಖಾನೆಗೆ ನೀಡಿದ ಆರ್ಥಿಕ ನೆರವು ಸದುಪಯೋಗ ಪಡಿಸಿಕೊಂಡು, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರ ಹಾರೈಕೆಯಿಂದ ಮೈಷುಗರ್ ಸಕ್ಕರೆ ಕಾರ್ಖಾನೆ ಯಶಸ್ವಿಯಾಗಿ ಕಾರ್ಯನಿರ್ವಹಿಸಿದೆ ಎಂದು ಹೇಳಿದರು.

೨೦೦೫-೦೬ರಿಂದ ಈವರೆಗೆ ಮೈಷುಗರ್ ಸಕ್ಕರೆ ಕಾರ್ಖಾನೆಗೆ ಸುಮಾರು ೬೫೦ ಕೋಟಿ ರೂ. ಸರ್ಕಾರ ನೆರವು ನೀಡಲಾಗಿದ್ದು, ಇದೇ ಮೊದಲ ಬಾರಿಗೆ ೨೦೨೪-೨೫ನೇ ಸಾಲಿನಲ್ಲಿ ಸರ್ಕಾರದ ಆರ್ಥಿಕ ನೆರವನ್ನು ಪಡೆಯದೇ ಕಬ್ಬನ್ನು ನುರಿಯಲಾಗಿದೆ ಎಂದು ಹೆಮ್ಮೆಯಿಂದ ನುಡಿದರು.

ಲಾಭದಲ್ಲಿ ಮೈಷುಗರ್ ಸಕ್ಕರೆ ಕಾರ್ಖಾನೆ
೨೦೨೪-೨೫ನೇ ಸಾಲಿನದಲ್ಲಿ ಉತ್ಪಾದನೆಯಾದ ೧,೩೦,೦೦೦ ಕ್ವಿಂಟಾಲ್ ಸಕ್ಕರೆ ಮಾರಾಟ ಮಾಡಿ, ೪೫ ಕೋಟಿ ರೂ, ೧೨,೦೦೦ ಮೊಲಾಸಸ್ ಮಾರಾಟದಿಂದ ೧೫.೩೬ ಕೋಟಿ, ಕಾರ್ಖಾನೆಯ ಸಹ ವಿದ್ಯುತ್ ಘಟಕದಿಂದ ೧,೫೪,೯೩,೦೦೦ ಯೂನಿಟ್ ವಿದ್ಯುತ್ ಉತ್ಪಾದನೆಯಾಗಿದ್ದು, ಸಕ್ಕರೆ ಕಾರ್ಖಾನೆ ನಡೆಸಲು ಕಳೆದ ಸಾಲಿನಲ್ಲಿ ೧೦ ಕೋಟಿ ರೂ ವ್ಯಯಿಸಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ಸ್ವಯಂ ವಿದ್ಯುತ್ ಉತ್ಪಾದನೆಯಿಂದ ಸಕ್ಕರೆ ಕಾರ್ಖಾನೆಯನ್ನು ನಡೆಸಿ ಉಳಿದ ೭೧,೧೨,೮೮೦ ಯೂನಿಟ್ ಚೆಸ್ಕಾಂಗೆ ಮಾರಾಟ ಮಾಡಿ ೪.೩೩ ಕೋಟಿ ರೂ ಆದಾಯ ಗಳಿಸಿ ಕಾರ್ಖಾನೆಯನ್ನು ಲಾಭದಲ್ಲಿ ನಡೆಸಲಾಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಸರ್ಕಾರ ಮತ್ತಿತರೆ ಯಾವುದೇ ಮೂಲಗಳಿಂದ ಆರ್ಥಿಕ ನೆರವು ಪಡೆಯದೇ ಪ್ರಸಕ್ತ ಸಾಲಿನಲ್ಲಿ ರೈತರಿಗೆ ಕಬ್ಬಿನ ಹಣ ಪಾವತಿ ಮಾಡಲಾಗಿದ್ದು, ಜಿಲ್ಲೆಯ ಇತರೇ ಕಾರ್ಖಾನೆಗಳಿಗೆ ಮಾದರಿಯಾಗಿದೆ. ಇದೀಗ ಖಾಸಗಿ ಕಾರ್ಖಾನೆಗಳು ಸಹ ರೈತರಿಗೆ ಕಬ್ಬಿನ ಹಣವನ್ನು ಹಂತ ಹಂತವಾಗಿ ನೀಡುವುದನ್ನು ಬಿಟ್ಟು ಒಮ್ಮೆಲೆ ಹಣ ಪಾವತಿ ಮಾಡಲು ಮುಂದಾಗಿವೆ ಎಂದರು.

ಗೋಷ್ಠಿಯಲ್ಲಿ ಕಾಂಗ್ರೆಸ್ ನಗರ ಅಧ್ಯಕ್ಷ ರುದ್ರಪ್ಪ, ಗ್ರಾಮಾಂತರ ಅಧ್ಯಕ್ಷ ಅಪ್ಪಾಜಿಗೌಡ, ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಸಾತನೂರು ಕೃಷ್ಣ, ರೈತ ಮೋರ್ಚಾ ಅಧ್ಯಕ್ಷ ದೇಶಿಹಳ್ಳಿ ಮೋಹನ್, ದ್ಯಾವಪ್ಪ, ಸುಂಡಹಳ್ಳಿ ಮಂಜುನಾಥ್, ಶ್ರೀಧರ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

7 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

8 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

9 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

14 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

14 hours ago