ಮಂಡ್ಯ

ಕೇಂದ್ರ ಬಜೆಟ್‌ 2025| ರಾಷ್ಟ್ರಕ್ಕೆ ಅನುಕೂಲವಾಗುವ ಬಜೆಟ್ ಅಲ್ಲ, ನಮ್ಮ ರಾಜ್ಯಕ್ಕೆ ಅನ್ಯಾಯ ಆಗಿದೆ: ಎನ್.ಚಲುವರಾಯಸ್ವಾಮಿ

ಮಂಡ್ಯ: ಈ ಬಾರಿಯ ಕೇಂದ್ರ ಬಜೆಟ್‌ ರಾಷ್ಟ್ರಕ್ಕೆ ಅನುಕೂಲವಾಗುವ ಬಜೆಟ್‌ ಅಲ್ಲ, ಈ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದರು.

ಮಂಡ್ಯದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾರ್ಪೋರೇಷನ್‌ ಮತ್ತು ಪಂಚಾಯತ್ ರಾಜ್ಯದ ಬಜೆಟ್‌ಕ್ಕಿಂತ ಕೇಂದ್ರ ಬಜೆಟ್‌ ಒಂದು ಹೆಜ್ಜೆ ಕೆಳಗಿಳಿದ್ದಾರೆ. ಕೇಂದ್ರ ಸರ್ಕಾರದವರು ಪ್ರಚಾರ ಪ್ರಿಯರಾಗುತ್ತಿದ್ದಾರೆ ಅಷ್ಟೇ. ಮೂಗಿಗೆ ತುಪ್ಪ ಸವರಿಸುವ ಹಾಗೆ ಮಾಡಿದ್ದು, ಬಿಹಾರಕ್ಕೆ ಹೆಚ್ಚು ಅನುದಾನ ಬಿಡುಗಡೆ ನೀಡಿ, ಕರ್ನಾಟಕಕಕ್ಕೆ ಏನು ನೀಡಿಲ್ಲ ಎಂದು ಹೇಳಿದರು.

ಇನ್ನೂ ರಾಜ್ಯದಲ್ಲಿ 19 ಮಂದಿ ಸಂಸದರಿದ್ದು, ಪ್ರಧಾನ ಮಂತ್ರಿಯಾಗಲು ಮೋದಿ ಅವರಿಗೆ ಕರ್ನಾಟಕ ದೊಡ್ಡ ಶಕ್ತಿ ತುಂಬಿದ್ದಾರೆ. ಆದರೆ ಕೇಂದ್ರ ಬಜೆಟ್‌ ಮಾತ್ರ ನಮ್ಮ ರಾಜ್ಯಕ್ಕೆ ಶೂನ್ಯ ನೀಡಿದೆ. ಕೇಂದ್ರದಿಂದ ಬರಗಾಲದ ಅನುದಾನ ನೀಡಲ್ಲ, 7ನೇ ಹಣಕಾಸು ಯೋಜನೆ ವ್ಯತ್ಯಾಸದ ಹಣ ನೀಡಲ್ಲ. ಅಲ್ಲದೇ ತುಂಗಭದ್ರಾ ಅಣೆಕಟ್ಟುಗೂ ನೀಡಿಲ್ಲ, ನಾವು ಯಾವ ರೀತಿ ಈ ಬಜೆಟ್ ಅಭಿನಂದಿಸೋದು? ಎಂದು ಪ್ರಶ್ನಿಸಿದರು.

ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕಕ್ಕೆ ವಿಶೇಷವಾದ ಕಾರ್ಯಕ್ರಮ ನೀಡಿಲ್ಲ. ಆದರೆ ತಮಿಳುನಾಡು ಮತ್ತು ಕೇರಳದವರು ತೆಗೆದುಕೊಂಡು ಹೋಗಿದ್ದಾರೆ. ನಮ್ಮ ರಾಜ್ಯದ ಜನತೆ ಏನು ಮಾಡಿದ್ದಾರೆ? ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದೆ ಎಂದು ನೀಡಿಲ್ಲ. ಹೀಗಾಗಿ ರಾಷ್ಟ್ರಕ್ಕೆ ಅನುಕೂಲವಾಗುವ ಬಜೆಟ್ ಅಲ್ಲ, ನಮ್ಮ ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಆರೋಪಿಸಿದರು.

ಅರ್ಚನ ಎಸ್‌ ಎಸ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

4 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

4 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

4 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

4 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

5 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago