ಮಂಡ್ಯ: ಈ ಬಾರಿಯ ಕೇಂದ್ರ ಬಜೆಟ್ ರಾಷ್ಟ್ರಕ್ಕೆ ಅನುಕೂಲವಾಗುವ ಬಜೆಟ್ ಅಲ್ಲ, ಈ ಬಜೆಟ್ನಿಂದ ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಮಂಡ್ಯದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾರ್ಪೋರೇಷನ್ ಮತ್ತು ಪಂಚಾಯತ್ ರಾಜ್ಯದ ಬಜೆಟ್ಕ್ಕಿಂತ ಕೇಂದ್ರ ಬಜೆಟ್ ಒಂದು ಹೆಜ್ಜೆ ಕೆಳಗಿಳಿದ್ದಾರೆ. ಕೇಂದ್ರ ಸರ್ಕಾರದವರು ಪ್ರಚಾರ ಪ್ರಿಯರಾಗುತ್ತಿದ್ದಾರೆ ಅಷ್ಟೇ. ಮೂಗಿಗೆ ತುಪ್ಪ ಸವರಿಸುವ ಹಾಗೆ ಮಾಡಿದ್ದು, ಬಿಹಾರಕ್ಕೆ ಹೆಚ್ಚು ಅನುದಾನ ಬಿಡುಗಡೆ ನೀಡಿ, ಕರ್ನಾಟಕಕಕ್ಕೆ ಏನು ನೀಡಿಲ್ಲ ಎಂದು ಹೇಳಿದರು.
ಇನ್ನೂ ರಾಜ್ಯದಲ್ಲಿ 19 ಮಂದಿ ಸಂಸದರಿದ್ದು, ಪ್ರಧಾನ ಮಂತ್ರಿಯಾಗಲು ಮೋದಿ ಅವರಿಗೆ ಕರ್ನಾಟಕ ದೊಡ್ಡ ಶಕ್ತಿ ತುಂಬಿದ್ದಾರೆ. ಆದರೆ ಕೇಂದ್ರ ಬಜೆಟ್ ಮಾತ್ರ ನಮ್ಮ ರಾಜ್ಯಕ್ಕೆ ಶೂನ್ಯ ನೀಡಿದೆ. ಕೇಂದ್ರದಿಂದ ಬರಗಾಲದ ಅನುದಾನ ನೀಡಲ್ಲ, 7ನೇ ಹಣಕಾಸು ಯೋಜನೆ ವ್ಯತ್ಯಾಸದ ಹಣ ನೀಡಲ್ಲ. ಅಲ್ಲದೇ ತುಂಗಭದ್ರಾ ಅಣೆಕಟ್ಟುಗೂ ನೀಡಿಲ್ಲ, ನಾವು ಯಾವ ರೀತಿ ಈ ಬಜೆಟ್ ಅಭಿನಂದಿಸೋದು? ಎಂದು ಪ್ರಶ್ನಿಸಿದರು.
ಈ ಬಾರಿಯ ಬಜೆಟ್ನಲ್ಲಿ ಕರ್ನಾಟಕಕ್ಕೆ ವಿಶೇಷವಾದ ಕಾರ್ಯಕ್ರಮ ನೀಡಿಲ್ಲ. ಆದರೆ ತಮಿಳುನಾಡು ಮತ್ತು ಕೇರಳದವರು ತೆಗೆದುಕೊಂಡು ಹೋಗಿದ್ದಾರೆ. ನಮ್ಮ ರಾಜ್ಯದ ಜನತೆ ಏನು ಮಾಡಿದ್ದಾರೆ? ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ ಎಂದು ನೀಡಿಲ್ಲ. ಹೀಗಾಗಿ ರಾಷ್ಟ್ರಕ್ಕೆ ಅನುಕೂಲವಾಗುವ ಬಜೆಟ್ ಅಲ್ಲ, ನಮ್ಮ ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಆರೋಪಿಸಿದರು.
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…
ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…