Mysore
16
clear sky

Social Media

ಬುಧವಾರ, 10 ಡಿಸೆಂಬರ್ 2025
Light
Dark

ಕಾವೇರಿ ಆರತಿಗೆ ರೈತ ಸಂಘ ವಿರೋಧ: ಸಚಿವ ಚಲುವರಾಯಸ್ವಾಮಿ ಹೇಳಿದ್ದಿಷ್ಟು.!

ಮಂಡ್ಯ: ಕಾವೇರಿ ಆರತಿಗೆ ರೈತ ಸಂಘ ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ರೈತರ ಜೊತೆ ಚರ್ಚೆಗೆ ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್‌ ಅಣೆಕಟ್ಟೆ ಬಳಿ ಕೈಗೊಳ್ಳಲಿರುವ ಅಮ್ಯೂಸ್‌ಮೆಂಟ್‌ ಪಾರ್ಕ್‌ ಮತ್ತು ಕಾವೇರಿ ಅರತಿ ಯೋಜನೆಗಳಿಗೆ ಏಕೆ ವಿರೋಧ ವ್ಯಕ್ತವಾಗುತ್ತಿದೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ರೈತಸಂಘದ ಜೊತೆ ಚರ್ಚೆ ಮಾಡಲು ನಾವು ಸಿದ್ಧರಿದ್ದೇವೆ. ಸಮಸ್ಯೆಯನ್ನು ನಮಗೆ ಮನದಟ್ಟು ಮಾಡಿಕೊಡಲಿ. ನಿಜವಾಗಿಯೂ ಸಮಸ್ಯೆ ಇದ್ದರೆ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಹೇಳಿ, ಈ ಯೋಜನೆ ನಿಲ್ಲಿಸುವ ತೀರ್ಮಾನ ಮಾಡೋಣ ಎಂದರು.

ಈ ಯೋಜನೆಗಳಿಂದ ಆರ್ಥಿಕತೆ ವೃದ್ಧಿ, ಉದ್ಯೋಗ ಸೃಷ್ಟಿ ಆಗುತ್ತದೆ. ಇದನ್ನು ರೈತಸಂಘದವರು ಅರ್ಥ ಮಾಡಿಕೊಳ್ಳಲಿ. ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರು ಸಹ ರೈತರ ಪರವಾಗಿ ಬಂದು ಚರ್ಚೆ ಮಾಡಲಿ. ರೈತರಿಗೆ ಪ್ರತಿಭಟನೆ ನಡೆಸುವ ಹಕ್ಕಿದೆ. ಚರ್ಚೆ ಬಳಿಕವೇ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.

Tags:
error: Content is protected !!