ಮಂಡ್ಯ: ಕಾವೇರಿ ಆರತಿಗೆ ರೈತ ಸಂಘ ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ರೈತರ ಜೊತೆ ಚರ್ಚೆಗೆ ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಆರ್ಎಸ್ ಅಣೆಕಟ್ಟೆ ಬಳಿ ಕೈಗೊಳ್ಳಲಿರುವ ಅಮ್ಯೂಸ್ಮೆಂಟ್ ಪಾರ್ಕ್ ಮತ್ತು ಕಾವೇರಿ ಅರತಿ ಯೋಜನೆಗಳಿಗೆ ಏಕೆ ವಿರೋಧ ವ್ಯಕ್ತವಾಗುತ್ತಿದೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ರೈತಸಂಘದ ಜೊತೆ ಚರ್ಚೆ ಮಾಡಲು ನಾವು ಸಿದ್ಧರಿದ್ದೇವೆ. ಸಮಸ್ಯೆಯನ್ನು ನಮಗೆ ಮನದಟ್ಟು ಮಾಡಿಕೊಡಲಿ. ನಿಜವಾಗಿಯೂ ಸಮಸ್ಯೆ ಇದ್ದರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೇಳಿ, ಈ ಯೋಜನೆ ನಿಲ್ಲಿಸುವ ತೀರ್ಮಾನ ಮಾಡೋಣ ಎಂದರು.
ಈ ಯೋಜನೆಗಳಿಂದ ಆರ್ಥಿಕತೆ ವೃದ್ಧಿ, ಉದ್ಯೋಗ ಸೃಷ್ಟಿ ಆಗುತ್ತದೆ. ಇದನ್ನು ರೈತಸಂಘದವರು ಅರ್ಥ ಮಾಡಿಕೊಳ್ಳಲಿ. ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಸಹ ರೈತರ ಪರವಾಗಿ ಬಂದು ಚರ್ಚೆ ಮಾಡಲಿ. ರೈತರಿಗೆ ಪ್ರತಿಭಟನೆ ನಡೆಸುವ ಹಕ್ಕಿದೆ. ಚರ್ಚೆ ಬಳಿಕವೇ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…