ಮಂಡ್ಯ: ಕಾವೇರಿ ಆರತಿಗೆ ರೈತ ಸಂಘ ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ರೈತರ ಜೊತೆ ಚರ್ಚೆಗೆ ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಆರ್ಎಸ್ ಅಣೆಕಟ್ಟೆ ಬಳಿ ಕೈಗೊಳ್ಳಲಿರುವ ಅಮ್ಯೂಸ್ಮೆಂಟ್ ಪಾರ್ಕ್ ಮತ್ತು ಕಾವೇರಿ ಅರತಿ ಯೋಜನೆಗಳಿಗೆ ಏಕೆ ವಿರೋಧ ವ್ಯಕ್ತವಾಗುತ್ತಿದೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ರೈತಸಂಘದ ಜೊತೆ ಚರ್ಚೆ ಮಾಡಲು ನಾವು ಸಿದ್ಧರಿದ್ದೇವೆ. ಸಮಸ್ಯೆಯನ್ನು ನಮಗೆ ಮನದಟ್ಟು ಮಾಡಿಕೊಡಲಿ. ನಿಜವಾಗಿಯೂ ಸಮಸ್ಯೆ ಇದ್ದರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೇಳಿ, ಈ ಯೋಜನೆ ನಿಲ್ಲಿಸುವ ತೀರ್ಮಾನ ಮಾಡೋಣ ಎಂದರು.
ಈ ಯೋಜನೆಗಳಿಂದ ಆರ್ಥಿಕತೆ ವೃದ್ಧಿ, ಉದ್ಯೋಗ ಸೃಷ್ಟಿ ಆಗುತ್ತದೆ. ಇದನ್ನು ರೈತಸಂಘದವರು ಅರ್ಥ ಮಾಡಿಕೊಳ್ಳಲಿ. ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಸಹ ರೈತರ ಪರವಾಗಿ ಬಂದು ಚರ್ಚೆ ಮಾಡಲಿ. ರೈತರಿಗೆ ಪ್ರತಿಭಟನೆ ನಡೆಸುವ ಹಕ್ಕಿದೆ. ಚರ್ಚೆ ಬಳಿಕವೇ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…