ಮಂಡ್ಯ

ಮಂಡ್ಯದಲ್ಲಿ ನಾಡ ಬಾಂಬ್‌ ಸ್ಫೋಟ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ಮಂಡ್ಯ: ನಾಡ ಬಾಂಬ್‌ ಸ್ಫೋಟದಿಂದಾಗಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಾಗಮಂಗಲ ತಾಲ್ಲೂಕಿನ ಕಂಬದಹಳ್ಳಿಯಲ್ಲಿ ನಡೆದಿದೆ.

ವಿದ್ಯಾರ್ಥಿಗಳನ್ನು ಹರಿಯಂತ್‌ ಪಾಟೀಲ್‌ ಹಾಗೂ ಪಾರ್ಥ ಎಂದು ಗುರುತಿಸಲಾಗಿದ್ದು, ಜೈನ ಬಸದಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆಂಜನೇಯ ಬೆಟ್ಟದ ದೇವಸ್ಥಾನದ ಸುತ್ತ ಸ್ವಚ್ಛಕಾರ್ಯಕ್ಕಾಗಿ ವಿದ್ಯಾರ್ಥಿಗಳು ತೆರಳಿದ್ದರು. ಈ ವೇಳೆ ವಿದ್ಯಾರ್ಥಿಗಳು ಕಸದ ರಾಶಿಗೆ ಕೈ ಹಾಕಿದ್ದು, ಬಾಂಬ್‌ ಸ್ಪೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಓರ್ವನ ಅಂಗೈ ಸಂಪೂರ್ಣ ಛಿದ್ರವಾಗಿದ್ದು, ಇನ್ನೋರ್ವನ ಮುಖದ ಭಾಗಕ್ಕೆ ಗಾಯವಾಗಿದೆ.

ಕಾಡು ಹಂದಿ ಬೇಟೆಗಾಗಿ ನಾಡ ಬಾಂಬ್‌ ಇಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಕಿಡಿಗೇಡಿಗಳ ಕೆಲಸದಿಂದ ಅಮಾಯಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಬಿಂಡಿಗನವಿಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಧಾನಸೌಧಕ್ಕೆ ಮತ್ತೆ ಬರೋದು ಭಗವಂತನ ಇಚ್ಛೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…

1 hour ago

ಜುಲೈ.3ರಿಂದ ವಾರ್ಷಿಕ ಅಮರನಾಥ ಯಾತ್ರೆ ಆರಂಭ

ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…

2 hours ago

ಪ್ರಧಾನಿ ಮೋದಿಗೆಂದೇ ಮೈಸೂರು ಮಹಾರಾಜರು ಧರಿಸುತ್ತಿದ್ದ ಮಾದರಿಯ ಪೇಟ ತಯಾರು

ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…

2 hours ago

ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್‌ಗೆ ಬಿಗ್‌ ಟ್ವಿಸ್ಟ್‌

ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್‌ ಆರೋಪ…

2 hours ago

ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ಬಿಡಲು ಸಿದ್ಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಹೈಕಮಾಂಡ್‌ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…

3 hours ago

ರಾಜ್ಯದಲ್ಲಿ ಮುಂದಿನ 5 ದಿನ ತಾಪಮಾನ ಭಾರೀ ಏರಿಕೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…

4 hours ago