ಮಂಡ್ಯ

ನಾಗಮಂಗಲ: ಗಣೇಶ ವಿಸರ್ಜನೆ ವೇಳೆ ಘರ್ಷಣೆ, ಪೋಲಿಸ್‌ ಠಾಣೆ ಪ್ರತಿಭಟನೆ

ನಾಗಮಂಗಲ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಬುಧವಾರ(ಸೆ.11) ರಾತ್ರಿ ಎರಡು ಕೋಮುಗಳ ಯುವಕರ ನಡುವೆ ಗಲಾಟೆ ನಡೆದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಪ್ರಹಾರ ಮಾಡಿದ್ದು, ಇಡೀ ಪಟ್ಟಣದಲ್ಲಿ ಪ್ರಕ್ಷುಬ್ಧ ವಾತವಾರಣ ನಿರ್ಮಾಣವಾಗಿದೆ.

ಪಟ್ಟಣದ ಬದರಿ ಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ಉತ್ಸವವು ಮೈಸೂರು ರಸ್ತೆಗೆ ಆಗಮಿಸುತ್ತಿದ್ದಂತೆ ಒಂದು ಕೋಮಿನ ಯುವಕರು ಗಣಪತಿ ಉತ್ಸವದ ಮೆರವಣಿಗೆಯಲ್ಲಿದ್ದ ಮತ್ತೊಂದು ಕೋಮಿನ ಯುವಕರ ಮೇಲೆ ಕಲ್ಲು ತೂರಿದ್ದ ಆರೋಪ ಕೇಳಿ ಬಂದಿದೆ.

ಈ ವೇಳೆ ಎರಡೂ ಗುಂಪುಗಳ ನಡುವೆ ಜಗಳ ತಾರಕಕ್ಕೇರಿ, ತಳ್ಳಾಟ,ನೂಕಾಟ ನಡೆದಿದೆ. ಈ ವೇಳೆ ಎರಡೂ ಗುಂಪುಗಳನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಆದರೂ ಎರಡು ಗುಂಪುಗಳು ಸ್ಥಳದಿಂದ ಚದುರಲಿಲ್ಲ. ಒಂದು ಕೋಮಿನ ಯುವಕರು ಮೈಸೂರು ರಸ್ತೆಯಲ್ಲಿ ನಿಂತು ಘೋಷಣೆ ಕೂಗಿದರೆ, ಇದಕ್ಕೆ ಪ್ರತಿಯಾಗಿ ಮತ್ತೊಂದು ಗುಂಪಿನ ಯುವಕರು ಘೋಷಣೆ ಕೂಗಿದರು.

ಎರಡೂ ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ಪೊಲೀಸರು ಕಡಿಮೆ ಸಂಖ್ಯೆಯಲ್ಲಿ ಇದ್ದ ಕಾರಣ ಗಲಾಟೆಯನ್ನು ಹತೋಟಿಗೆ ತರಲು ಸಾಧ್ಯವಾಗಲಿಲ್ಲ. ಮಂಡ್ಯ ಸರ್ಕಲ್ ಮತ್ತು ಟಿ.ಮರಿಯಪ್ಪ ಸರ್ಕಲ್‌ನಲ್ಲಿ ಬಾಟಲಿಗಳು, ಕಲ್ಲುಗಳ ತೂರಾಟ ನಡೆಯಿತು. ಇದರಿಂದಾಗಿ ಜನಸಾಮಾನ್ಯರು ಗಾಬರಿಗೊಂಡು ದಿಕ್ಕಾಪಾಲಾಗಿ ಓಡಿದರು. ಎರಡು ಗುಂಪುಗಳು ಪೊಲೀಸರಿಗೂ ಹೆದರದೆ ರಾತ್ರಿ ೯.೩೦ ಗಂಟೆಯಾದರೂ ಪರಸ್ಪರ ಕೂಗಾಟ ನಡೆಸುತ್ತಿದ್ದರು. ಇದರಿಂದಾಗಿ ಪಟ್ಟಣದ ಅಂಗಡಿ ಮುಂಗಟ್ಟುಗಳು ಮುಚ್ಚಿ ಬಂದ್ ವಾತಾವರಣ ಸೃಷ್ಟಿಯಾಗಿತ್ತು.

ಬದರಿಕೊಪ್ಪಲಿನ ಯುವಕರು ಗಣಪತಿ ಮೂರ್ತಿಯನ್ನು ಪೊಲೀಸ್ ಠಾಣೆ ಮತ್ತು ಟಿ.ಮರಿಯಪ್ಪ ಸರ್ಕಲ್‌ನಲ್ಲಿ ನಿಲ್ಲಿಸಿ, ಘೋಷಣೆ ಕೂಗಿದರು. ಪೊಲೀಸರು ಎರಡೂ ಗುಂಪುಗಳನ್ನು ಚದುರಿಸಲು ಹಲವು ಬಾರಿ ಲಾಠಿ ಪ್ರಹಾರ ನಡೆಸಿದರೂ ಘರ್ಷಣೆಯನ್ನು ತಹಬದಿಗೆ ತರಲು ಸಾಧ್ಯವಾಗಲಿಲ್ಲ.

ಘಟನೆ ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಹೆಚ್ಚಿನ ಪೊಲೀಸರು ಆಗಮಿಸಿದರೂ ಗಲಾಟೆ ಹತೋಟಿಗೆ ತರಲು ಶ್ರಮಿಸುತ್ತಿದ್ದಾರೆ. ರಾತ್ರಿ ಸಮಯವಾಗಿರುವುದರಿಂದ ಗುಂಪುಗಳು ಎಲ್ಲಿ ಎಲ್ಲಿ ನಿಂತು ಕಲ್ಲು ಮತ್ತು ಬಾಟಲಿಗಳನ್ನು ಎಸೆಯುತ್ತಿದ್ದಾರೆ ಎಂಬುದೂ ಗೊತ್ತಾಗುತ್ತಿಲ್ಲ. ಇದರಿಂದಾಗಿ ಮಂಡ್ಯ ರಸ್ತೆ ಮತ್ತು ಮೈಸೂರು ರಸ್ತೆ , ತುಮಕೂರು ರಸ್ತೆಗಳಲ್ಲಿ ಸಂಚಾರ ಬಂದ್ ಆಗಿದೆ.

ಕಳೆದ ವರ್ಷವೂ ಇದೇ ಸ್ಥಳದಲ್ಲಿ ಗಲಾಟೆ ನಡೆದಿತ್ತು. ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ತಮಟೆ, ಡೊಳ್ಳು ಬಾರಿಸದಂತೆ ಕಿರಿಕ್ ಆಗಿತ್ತು. ಈ ಬಾರಿ ಕಲ್ಲೆಸೆತ ನಡೆದಿದ್ದು, ನಾಗಮಂಗಲ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

41 mins ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

58 mins ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

1 hour ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

2 hours ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

2 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

3 hours ago