ಮಂಡ್ಯ

ನಾಗಮಂಗಲ | ಅಂತರ ಜಿಲ್ಲಾ ಸರಗಳ್ಳನ ಬಂಧನ : 7 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಮಂಡ್ಯ : ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿ ಸೇರಿದಂತೆ ವಿವಿಧೆಡೆ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೆಳ್ಳೂರು ಪೊಲೀಸರು ಬಂಧಿಸಿದ್ದು, ಆರೋಪಿಯಿಂದ ೭ ಲಕ್ಷ ರೂ. ಮೌಲ್ಯದ ೬೯ ಗ್ರಾಂ ತೂಕದ ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ.

ಗಾರೆ ಕೆಲಸ ಮತ್ತು ತಲೆ ಕೂದಲು ವ್ಯಾಪಾರ ಮಾಡುತ್ತಿದ್ದ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಭೂತೇಶ್ವರ ನಗರ (ಭೂತಪ್ಪನಗುಡಿ)ದ ತಿಪ್ಪೇಶ ಅಲಿಯಾಸ್ ಭರತ್ ಬಿನ್ ಹನುಮಂತಪ್ಪ (೩೩) ಬಂಽತ ಆರೋಪಿ.

ಆ.೧೫ರಂದು ಬೆಳಿಗ್ಗೆ ೧೦.೩೦ರ ಸಮಯದಲ್ಲಿ ನಾಗಮಂಗಲ ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದ ಕಿರಣ್ ಕುಮಾರ್ ಎಂಬವರು ತನ್ನ ಬೈಕ್‌ನಲ್ಲಿ ಬೆಳ್ಳೂರು ಕ್ರಾಸ್ ಕಡೆಗೆ ಬರುತ್ತಿದ್ದಾಗ ಸಮೃದ್ಧಿ ಹೋಟೆಲ್ ಎದುರು ಹಿಂದಿನಿಂದ ಬಂದ ಬೈಕ್ ಸವಾರ ಕತ್ತಿನಲ್ಲಿದ್ದ ಸುಮಾರು ೩೦ ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿರುತ್ತಾನೆಂದು ದೂರು ನೀಡಿದ್ದರು.

ಈ ಪ್ರಕರಣದ ಆರೋಪಿತರ ಪತ್ತೆಗೆ ನಾಗಮಂಗಲ ವೃತ್ತ ಸಿಪಿಐ ನಿರಂಜನ ಕೆ.ಎಸ್.ಬೆಳ್ಳೂರು ಠಾಣಾ ಪಿ.ಎಸ್.ಐ ವೈ.ಎನ್.ರವಿಕುಮಾರ್, ಸಿಬ್ಬಂದಿಗಳಾದ ಪ್ರಶಾಂತ್ ಕುಮಾರ್, ಇಂದ್ರಕುಮಾರ್, ಮಧುಕುಮಾರ್, ರವಿಕಿರಣ್, ಲೋಕೇಶ್, ಸಿಪಿಸಿಯರವರಾದ ಶಂಕರ್‌ನಾಯ್ಕ, ದಿನೇಶ, ಕಿರಣ್ ಕುಮಾರ್, ಪ್ರಕಾಶ್, ಸಿದ್ದಪ್ಪ ಅರವನ್ನೊಗಳಗೊಂಡ ತಂಡ ರಚನೆ ಮಾಡಲಾಗಿತ್ತು.

ಈ ತಂಡ ಆ.೨೮ರಂದು ಮಧ್ಯಾಹ್ನ ೪ ಗಂಟೆ ಸಮಯದಲ್ಲಿ ನಾಗಮಂಗಲ ತಾಲ್ಲೂಕು ಚಂದ್ರಶೇಖರಪುರ ಗ್ರಾಮದ ಹತ್ತಿರವಿದ್ದ ಆರೋಪಿಯನ್ನು ಬಂಧಿಸಿದೆ. ಅಲ್ಲದೆ, ಆತ ಕೃತ್ಯವೆಸಗಲು ಬಳಸಿದ ಬೈಕನ್ನು ವಶಕ್ಕೆ ಪಡೆದಿದೆ. ಈತ ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ವಿಚಾರಣೆಯಿಂದ ತಿಳಿದು ಬಂದಿದೆ.

ಬೆಳ್ಳೂರು ಪೊಲೀಸ್ ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಯವರ ಕಾರ್ಯವನ್ನು ಮಂಡ್ಯ ಜಿಲ್ಲಾ ಪೊಲೀಸ್ ಅಧಿಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಶ್ಲಾಘಿಸಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

18 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

18 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

18 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

18 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

18 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

2 days ago