ಮಂಡ್ಯ: ಜಿಲ್ಲೆ ನಾಗಮಂಗಲ ಸಮೀಪ ಶುಕ್ರವಾರ(ಜು.16) ಸಂಜೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ (50) ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಆಂದೋಲನ, ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ವರದಿಗಾರರಾಗಿ ಬಿ.ಸಿ.ಮೋಹನ ಕುಮಾರ್ ಅವರು ಕೆಲಸ ನಿರ್ವಹಿಸಿದ್ದರು. ಮೃತರು ನಾಗಮಂಗಲ ತಾಲೂಕಿನ ಬ್ಯಾಡರಹಳ್ಳಿಯವರಾಗಿದ್ದು, ಪತ್ನಿ, ಬಂಧು ಬಳಗ ಸೇರಿದಂತೆ ಸ್ನೇಹ ಬಳಗವನ್ನು ಅಗಲಿದ್ದಾರೆ.
ಮೃತ ಮೋಹನ್ ಅವರಿಗೆ ಜಿಲ್ಲಾ ಸಚಿವರ ಸಂತಾಪ.
ರಸ್ತೆ ಅಪಘಾತದಲ್ಲಿ ನಾಗಮಂಗಲದ ಪತ್ರಕರ್ತರಾದ ಬಿ.ಸಿ.ಮೋಹನ್ ಕುಮಾರ್ ಅವರು ಮೃತಪಟ್ಟ ಸುದ್ದಿ ತಿಳಿದು ಆಘಾತವಾಯಿತು.
ಮೋಹನ್ ಕುಮಾರ್ ಅವರು ಅತ್ಯಂತ ಕ್ರೀಯಾಶೀಲ ಪತ್ರಕರ್ತರಲ್ಲೊಬ್ಬರಾಗಿದ್ದರು.
ತಮ್ಮ ಬರವಣೆಗೆ ಮೂಲಕ ಅನೇಕ ಸಾಮಾಜಿಕ ಆಡಳಿತಾತ್ಮಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿ ಬಗೆಹರಿಸುವಲ್ಲಿ ಕಾರಣರಾಗಿದ್ದರು. ಅವರ ಅಕಾಲಿಕ ಸಾವು ತೀವ್ರ ದುಖ ತಂದಿದೆ.. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ನೋವು ಬರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ತಮ್ಮ ಶೋಕಸಂದೇಶದಲ್ಲಿ ತಿಳಿಸಿದ್ದಾರೆ
ಕೆಯುಡಬ್ಲ್ಯೂಜೆ ಸಂತಾಪ;
ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ ಅವರ ನಿಧನಕ್ಕೆ ಕರ್ನಾಟ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಸಂತಾಪ ವ್ಯಕ್ತಪಡಿಸಿದೆ. ಮೋಹನಕುಮಾರ್ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…