ಮಂಡ್ಯ: ಜಿಲ್ಲೆ ನಾಗಮಂಗಲ ಸಮೀಪ ಶುಕ್ರವಾರ(ಜು.16) ಸಂಜೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ (50) ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಆಂದೋಲನ, ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ವರದಿಗಾರರಾಗಿ ಬಿ.ಸಿ.ಮೋಹನ ಕುಮಾರ್ ಅವರು ಕೆಲಸ ನಿರ್ವಹಿಸಿದ್ದರು. ಮೃತರು ನಾಗಮಂಗಲ ತಾಲೂಕಿನ ಬ್ಯಾಡರಹಳ್ಳಿಯವರಾಗಿದ್ದು, ಪತ್ನಿ, ಬಂಧು ಬಳಗ ಸೇರಿದಂತೆ ಸ್ನೇಹ ಬಳಗವನ್ನು ಅಗಲಿದ್ದಾರೆ.
ಮೃತ ಮೋಹನ್ ಅವರಿಗೆ ಜಿಲ್ಲಾ ಸಚಿವರ ಸಂತಾಪ.
ರಸ್ತೆ ಅಪಘಾತದಲ್ಲಿ ನಾಗಮಂಗಲದ ಪತ್ರಕರ್ತರಾದ ಬಿ.ಸಿ.ಮೋಹನ್ ಕುಮಾರ್ ಅವರು ಮೃತಪಟ್ಟ ಸುದ್ದಿ ತಿಳಿದು ಆಘಾತವಾಯಿತು.
ಮೋಹನ್ ಕುಮಾರ್ ಅವರು ಅತ್ಯಂತ ಕ್ರೀಯಾಶೀಲ ಪತ್ರಕರ್ತರಲ್ಲೊಬ್ಬರಾಗಿದ್ದರು.
ತಮ್ಮ ಬರವಣೆಗೆ ಮೂಲಕ ಅನೇಕ ಸಾಮಾಜಿಕ ಆಡಳಿತಾತ್ಮಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿ ಬಗೆಹರಿಸುವಲ್ಲಿ ಕಾರಣರಾಗಿದ್ದರು. ಅವರ ಅಕಾಲಿಕ ಸಾವು ತೀವ್ರ ದುಖ ತಂದಿದೆ.. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ನೋವು ಬರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ತಮ್ಮ ಶೋಕಸಂದೇಶದಲ್ಲಿ ತಿಳಿಸಿದ್ದಾರೆ
ಕೆಯುಡಬ್ಲ್ಯೂಜೆ ಸಂತಾಪ;
ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ ಅವರ ನಿಧನಕ್ಕೆ ಕರ್ನಾಟ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಸಂತಾಪ ವ್ಯಕ್ತಪಡಿಸಿದೆ. ಮೋಹನಕುಮಾರ್ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…