ಮಂಡ್ಯ

ನಾಗಮಂಗಲ: ನೂತನ ಬಸ್‌ ಸಂಚಾರಕ್ಕೆ ಚಾಲನೆ

ನಾಗಮಂಗಲ: ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತಷ್ಟು ಸೇವೆ ನೀಡುವ ಉದ್ದೇಶದಿಂದ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹಲವೆಡೆ ಬಸ್ ಸೇವೆಗಳನ್ನು ಆರಂಭ ಮಾಡಿರುವುದಾಗಿ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ 5 ಹೊಸ ಸಾರಿಗೆ ಬಸ್ ಸೇವೆಗಳ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ. ಇದರಿಂದ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೂ ಸಾಕಷ್ಟು ಲಾಭವಾಗಿದೆ. ಈ ಯೋಜನೆಯನ್ನು ಮತ್ತಷ್ಟು ವಿಸ್ತರಿಸುವ ಜತೆಗೆ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೂತನ ಬಸ್‌ಗಳನ್ನು ಹೊಸ ಮಾರ್ಗಗಳಿಗೆ ವಿಸ್ತರಿಸಲಾಗಿದೆ. ಜನರು ಇದರ ಅನುಕೂಲ ಪಡೆದುಕೊಳ್ಳಬೇಕು ಎಂದರು.

ಈ ಹಿಂದೆ ತಾವು ಸಚಿವರಾಗಿದ್ದ ಅವಧಿಯಲ್ಲಿ ತಾಲೂಕಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಪೋ ತರಲಾಯಿತು. ಇದರಿಂದಾಗಿ ತಾಲೂಕಿನ ಗ್ರಾಮೀಣ ಪ್ರದೇಶ ಸೇರಿದಂತೆ ಹಲವು ಭಾಗಗಳಿಗೆ ಬಸ್‌ಗಳು ಓಡಾಡುವಂತಾಯಿತು. ಹಳ್ಳಿಗಳಲ್ಲಿ ವಾಸಿಸುವ ಜನರಿಗೆ ಮತ್ತು ಸಾಗಾಣಿಕೆಗೆ ಅನುಕೂಲವಾಗಿದೆ. ಈಗ 5 ಹೊಸ ಬಸ್‌ಗಳು ನೂತನ ಮಾರ್ಗಗಳಲ್ಲಿ ಸಂಚರಿಸುವಂತೆ ಕ್ರಮವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಶಾಲಾ ಕಾಲೇಜು ಮಕ್ಕಳ ಹಿತದೃಷ್ಠಿಯಿಂದ ಮತಷ್ಟು ಬಸ್ ಸೇವೆಗಳನ್ನು ಒದಗಿಸಲಾಗುವುದು ಎಂದರು.

ನೂತನ ಬಸ್ ಮಾರ್ಗ : ನಾಗಮಂಗಲ-ಮೈಸೂರು ಹಾಗೂ ನಾಗಮಂಗಲ-ಬೆಂಗಳೂರಿನ ಶ್ರೀನಗರ ಮಾರ್ಗಕ್ಕೆ ತಡೆರಹಿತ, ನಾಗಮಂಗಲದಿಂದ ಕೆ.ಆರ್.ಪೇಟೆ, ಪಾಂಡವಪುರ ಮತ್ತು ಮಳವಳ್ಳಿ ಮಾರ್ಗಗಳಿಗೆ ಎಕ್ಸ್ಪ್ರೆಸ್ ಬಸ್ ಸೇವೆಗೆ ಸಚಿವರು ಚಾಲನೆ ನೀಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಅಪ್ಪಾಜಿಗೌಡ, ಪುರಸಭೆ ಅಧ್ಯಕ್ಷ ಅಲೀ ಅನ್ಸರ್‌ಪಾಷ, ಉಪಾಧ್ಯಕ್ಷೆ ವಸಂತಲಕ್ಷ್ಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ತಾಪಂ ಮಾಜಿ ಅಧ್ಯಕ್ಷ ಆರ್.ಕೃಷ್ಣೇಗೌಡ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಅಲ್ಪಹಳ್ಳಿ ಡಿ.ಕೃಷ್ಣೇಗೌಡ, ಬಗರ್ ಹುಕುಂ ಸಾಗುವಳಿ ಸಮಿತಿ ಸದಸ್ಯ ಎಂ.ನಾಗರಾಜಯ್ಯ, ಮುಖಂಡರಾದ ಸಂಪತ್, ಚಂದ್ರಶೇಖರ್, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಬಿ.ನಾಗರಾಜು, ವಿಭಾಗೀಯ ಸಂಚಲನಾಧಿಕಾರಿ ಪರಮೇಶ್ವರಪ್ಪ, ವಿಭಾಗೀಯ ಯಾಂತ್ರಿಕ ಅಭಿಯಂತರ ಚಿನ್ನಚಂಚಯ್ಯ, ಘಟಕ ವ್ಯವಸ್ಥಾಪಕ ಮಹೇಶ್ ಸೇರಿದಂತೆ ಹಲವರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

3 mins ago

ಮಡಿಕೇರಿ | ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ; ಸಾರ್ವಜನಿಕೆ ಕೆಲಸ ವಿಳಂಬ

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…

17 mins ago

ಎಚ್.ಡಿ.ಕೋಟೆ | ಉತ್ತಮ ಮಳೆ ; ಕೃಷಿ ಚಟುವಟಿಕೆ ಚುರುಕುಗೊಳಿಸಿದ ರೈತರು

ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…

21 mins ago

ಚಾ.ನಗರ ವಿ.ವಿ | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಎಚ್‌.ಡಿಗೆ ಅವಕಾಶ

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…

53 mins ago

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

3 hours ago