ಮಂಡ್ಯ

ನಾಗಮಂಗಲ: ನೂತನ ಬಸ್‌ ಸಂಚಾರಕ್ಕೆ ಚಾಲನೆ

ನಾಗಮಂಗಲ: ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತಷ್ಟು ಸೇವೆ ನೀಡುವ ಉದ್ದೇಶದಿಂದ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹಲವೆಡೆ ಬಸ್ ಸೇವೆಗಳನ್ನು ಆರಂಭ ಮಾಡಿರುವುದಾಗಿ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ 5 ಹೊಸ ಸಾರಿಗೆ ಬಸ್ ಸೇವೆಗಳ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ. ಇದರಿಂದ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೂ ಸಾಕಷ್ಟು ಲಾಭವಾಗಿದೆ. ಈ ಯೋಜನೆಯನ್ನು ಮತ್ತಷ್ಟು ವಿಸ್ತರಿಸುವ ಜತೆಗೆ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೂತನ ಬಸ್‌ಗಳನ್ನು ಹೊಸ ಮಾರ್ಗಗಳಿಗೆ ವಿಸ್ತರಿಸಲಾಗಿದೆ. ಜನರು ಇದರ ಅನುಕೂಲ ಪಡೆದುಕೊಳ್ಳಬೇಕು ಎಂದರು.

ಈ ಹಿಂದೆ ತಾವು ಸಚಿವರಾಗಿದ್ದ ಅವಧಿಯಲ್ಲಿ ತಾಲೂಕಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಪೋ ತರಲಾಯಿತು. ಇದರಿಂದಾಗಿ ತಾಲೂಕಿನ ಗ್ರಾಮೀಣ ಪ್ರದೇಶ ಸೇರಿದಂತೆ ಹಲವು ಭಾಗಗಳಿಗೆ ಬಸ್‌ಗಳು ಓಡಾಡುವಂತಾಯಿತು. ಹಳ್ಳಿಗಳಲ್ಲಿ ವಾಸಿಸುವ ಜನರಿಗೆ ಮತ್ತು ಸಾಗಾಣಿಕೆಗೆ ಅನುಕೂಲವಾಗಿದೆ. ಈಗ 5 ಹೊಸ ಬಸ್‌ಗಳು ನೂತನ ಮಾರ್ಗಗಳಲ್ಲಿ ಸಂಚರಿಸುವಂತೆ ಕ್ರಮವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಶಾಲಾ ಕಾಲೇಜು ಮಕ್ಕಳ ಹಿತದೃಷ್ಠಿಯಿಂದ ಮತಷ್ಟು ಬಸ್ ಸೇವೆಗಳನ್ನು ಒದಗಿಸಲಾಗುವುದು ಎಂದರು.

ನೂತನ ಬಸ್ ಮಾರ್ಗ : ನಾಗಮಂಗಲ-ಮೈಸೂರು ಹಾಗೂ ನಾಗಮಂಗಲ-ಬೆಂಗಳೂರಿನ ಶ್ರೀನಗರ ಮಾರ್ಗಕ್ಕೆ ತಡೆರಹಿತ, ನಾಗಮಂಗಲದಿಂದ ಕೆ.ಆರ್.ಪೇಟೆ, ಪಾಂಡವಪುರ ಮತ್ತು ಮಳವಳ್ಳಿ ಮಾರ್ಗಗಳಿಗೆ ಎಕ್ಸ್ಪ್ರೆಸ್ ಬಸ್ ಸೇವೆಗೆ ಸಚಿವರು ಚಾಲನೆ ನೀಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಅಪ್ಪಾಜಿಗೌಡ, ಪುರಸಭೆ ಅಧ್ಯಕ್ಷ ಅಲೀ ಅನ್ಸರ್‌ಪಾಷ, ಉಪಾಧ್ಯಕ್ಷೆ ವಸಂತಲಕ್ಷ್ಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ತಾಪಂ ಮಾಜಿ ಅಧ್ಯಕ್ಷ ಆರ್.ಕೃಷ್ಣೇಗೌಡ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಅಲ್ಪಹಳ್ಳಿ ಡಿ.ಕೃಷ್ಣೇಗೌಡ, ಬಗರ್ ಹುಕುಂ ಸಾಗುವಳಿ ಸಮಿತಿ ಸದಸ್ಯ ಎಂ.ನಾಗರಾಜಯ್ಯ, ಮುಖಂಡರಾದ ಸಂಪತ್, ಚಂದ್ರಶೇಖರ್, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಬಿ.ನಾಗರಾಜು, ವಿಭಾಗೀಯ ಸಂಚಲನಾಧಿಕಾರಿ ಪರಮೇಶ್ವರಪ್ಪ, ವಿಭಾಗೀಯ ಯಾಂತ್ರಿಕ ಅಭಿಯಂತರ ಚಿನ್ನಚಂಚಯ್ಯ, ಘಟಕ ವ್ಯವಸ್ಥಾಪಕ ಮಹೇಶ್ ಸೇರಿದಂತೆ ಹಲವರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

2 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

4 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

5 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

7 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

13 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

19 hours ago