ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ಸೆ.11ರಂದು ಗಣೇಶ ವಿಸರ್ಜನೆ ವೇಳೆ ನಡೆದಿದ್ದ ಗಲಭೆ ಪ್ರಕರಣದ ಎಲ್ಲಾ 55 ಆರೋಪಿಗಳಿಗೂ ಇಲ್ಲಿ 1ನೇ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ನ್ಯಾಯಾಂಗ ಬಂಧನದಲ್ಲಿದ್ದ ಹಿಂದೂ ಸಮುದಾಯದ 18 ಮತ್ತು ಮುಸ್ಲಿಂ ಸಮುದಾಯದ 37ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ಆರೋಪಿಗಳು 1 ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ನೀಡಿದ ನಂತರ ಬಿಡುಗಡೆ ಆಗುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಣೇಶ ಮೂರ್ತಿ ವಿಸರ್ಜನೆ ವೇಳೆ ಕೋಮುಗಲಭೆ ಆರಂಭಗೊಂಡು ಜಿಲ್ಲೆಯ ನಾಗಮಂಗಲ ಪಟ್ಟಣ ಹೊತ್ತಿ ಉರಿದಿತ್ತು. ಕಿಡಿಗೇಡಿಗಳು ಕಂಡಕಂಡಲ್ಲಿ ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿದ್ದರು. ಇಡೀ ಪ್ರಕರಣ ಕೇಂದ್ರ ಬಿಂದು ಬದ್ರಿಕೊಪ್ಪಲು ಗ್ರಾಮ ಅಕ್ಷರಸಹಃ ಸ್ಮಶಾನ ಮೌನವಾಗಿತ್ತು. ಬಂಧನದ ಭೀತಿಯಿಂದ ಹಲವು ಯುವಕರು ಗ್ರಾಮವನ್ನು ತೊರೆದಿದ್ದರು.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…