ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ಸೆ.11ರಂದು ಗಣೇಶ ವಿಸರ್ಜನೆ ವೇಳೆ ನಡೆದಿದ್ದ ಗಲಭೆ ಪ್ರಕರಣದ ಎಲ್ಲಾ 55 ಆರೋಪಿಗಳಿಗೂ ಇಲ್ಲಿ 1ನೇ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ನ್ಯಾಯಾಂಗ ಬಂಧನದಲ್ಲಿದ್ದ ಹಿಂದೂ ಸಮುದಾಯದ 18 ಮತ್ತು ಮುಸ್ಲಿಂ ಸಮುದಾಯದ 37ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ಆರೋಪಿಗಳು 1 ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ನೀಡಿದ ನಂತರ ಬಿಡುಗಡೆ ಆಗುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಣೇಶ ಮೂರ್ತಿ ವಿಸರ್ಜನೆ ವೇಳೆ ಕೋಮುಗಲಭೆ ಆರಂಭಗೊಂಡು ಜಿಲ್ಲೆಯ ನಾಗಮಂಗಲ ಪಟ್ಟಣ ಹೊತ್ತಿ ಉರಿದಿತ್ತು. ಕಿಡಿಗೇಡಿಗಳು ಕಂಡಕಂಡಲ್ಲಿ ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿದ್ದರು. ಇಡೀ ಪ್ರಕರಣ ಕೇಂದ್ರ ಬಿಂದು ಬದ್ರಿಕೊಪ್ಪಲು ಗ್ರಾಮ ಅಕ್ಷರಸಹಃ ಸ್ಮಶಾನ ಮೌನವಾಗಿತ್ತು. ಬಂಧನದ ಭೀತಿಯಿಂದ ಹಲವು ಯುವಕರು ಗ್ರಾಮವನ್ನು ತೊರೆದಿದ್ದರು.
ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…
ಇಂದು ಒಟಿಟಿ ವೇದಿಕೆಗಳಾದ ಅಮೆಜನ್ ಪ್ರೈಮ, ನೆಟ್ಫ್ಲಿಕ್ಸ್, ಡಿಸ್ನಿ+ಹಾಟ್ಸ್ಟಾರ್, ಜೀ೫, ಸೋನಿಲಿವ್ ಮುಂತಾದವುಗಳು ನಮ್ಮ ಮನರಂಜನೆಯ ಅವಿಭಾಜ್ಯ ಅಂಗವಾಗಿವೆ. ಮನೆಯಲ್ಲಿಯೇ…
ರಾಜ್ಯದಲ್ಲಿ ಸರ್ಕಾರಿ ವಿಶ್ವವಿದ್ಯಾನಿಲಯಗಳ ಸಂಯೋಜಿತ ಕೆಲವು ಖಾಸಗಿ ಕಾಲೇಜುಗಳು ವರ್ಷದಿಂದ ವರ್ಷಕ್ಕೆ ಕಾಲೇಜು ಅಭಿವೃದ್ಧಿಯ ಹೆಸರಿನಲ್ಲಿ, ವಿಶ್ವವಿದ್ಯಾನಿಲಯದ ಸೂಚನೆ ಹೆಸರಿನಲ್ಲಿ…
ಕೋರ್ಟ್ ಮೆಟ್ಟಿಲು ಏರಿ ವೈದ್ಯಕೀಯ ಸೀಟು ಪಡೆದ ಸಾಹಸಿ ಗುಜರಾತಿನ ಭಾವನಗರದ ಗೋರ್ಕಿ ಗ್ರಾಮದ ಗಣೇಶ್ ಬರಯ್ಯ ಎಂಟು ಜನ…
ಕೆ.ಬಿ.ರಮೇಶನಾಯಕ ಹೋಬಳಿಗೊಂದರಂತೆ ೨೯ ಮೇವು ಬ್ಯಾಂಕ್ ತೆರೆಯಲು ಪ್ರಸ್ತಾವನೆ ಮೈಸೂರು: ಪೂರ್ವ ಮುಂಗಾರು ಮತ್ತು ಮುಂಗಾರು ಮಳೆ ಕೈಕೊಟ್ಟಿದ್ದರಿಂದಾಗಿ ಮಳೆಯಾಶ್ರಿತ…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಧಾನಿ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗಮನ ಸೆಳೆದ ಪಶ್ಚಿಮಘಟ್ಟದ ಪ್ರಕೃತಿ ಸೌಂದರ್ಯ ಸೋಮವಾರಪೇಟೆ: ಪಶ್ಚಿಮಘಟ್ಟದ…