ಮಂಡ್ಯ: ನಿನ್ನೆ ರಾತ್ರಿ ನಾಗಮಂಗಲ ಪಟ್ಟಣದಲ್ಲಿ ನಡೆದ ಘಟನಾ ಸ್ಥಳಕ್ಕೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಯವರು ಭೇಟಿ ನೀಡಿ, ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಪ್ರತ್ಯಕ್ಷದರ್ಶಿಗಳು, ಅಂಗಡಿ ಮುಂಗಟ್ಟುಗಳು ಹಾಗೂ ಗ್ಯಾರೇಜ್ಗಳ ಮಾಲಿಕರು ಮತ್ತು ಸ್ಥಳೀಯ ನಿವಾಸಿಗಳೊಂದಿಗೆ ಮಾತುಕತೆ ನಡೆಸಿ, ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವರು ತಿಳಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮವಹಿಸಲಾಗುವುದು. ಈ ಘಟನೆ ನಡೆದಿರುವುದು ದುರದೃಷ್ಟಕರ. ಆಕಸ್ಮಿಕವಾಗಿ ನಡೆದ ಘಟನೆ, ನಂತರ ದೊಡ್ಡ ಮಟ್ಟದ ಗಲಭೆಗೆ ಕಾರಣವಾಗಿದೆ ಎಂದು ಚಲುವರಾಯಸ್ವಾಮಿ ಯವರು ತಿಳಿಸಿದರು..
ನೈಜ ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ
ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಸುಮಾರು 54ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಘಟನೆಯಲ್ಲಿ ಪಾಲ್ಗೊಳ್ಳದ ಅಮಾಯಕರ ಬಂಧನವಾಗಿದ್ದಲ್ಲಿ ಸಿಸಿಟಿವಿ ಪರಿಶೀಲಿಸಿ, ಖಚಿತಪಡಿಸಿಕೊಂಡು ಬಿಡುಗಡೆ ಮಾಡಲು ಸೂಚಿಸಲಾಗಿದೆ. ನೈಜ ತಪ್ಪಿತಸ್ಥರನ್ನು ಬಿಡುವ ಪ್ರಶ್ನೆ ಇಲ್ಲ ಎಂದು ಸಚಿವರು ತಿಳಿಸಿದರು.
ಕೋಮು ಸೌಹಾರ್ದತೆಯನ್ನು ಕದಡುವ ಕೆಲಸವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ನಮ್ಮ ಜನರಿಗೆ ಶಾಂತಿ ಸೌಹಾರ್ದತೆಯಿಂದ ಬದುಕುವ ವಾತಾವರಣ ಕಲ್ಪಿಸಿಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ.
ಪರಿಹಾರದ ಭರವಸೆ
ಘಟನೆಯಲ್ಲಿ ಹಾನಿಗೊಳಗಾದ ಅಂಗಡಿಗಳು ಹಾಗೂ ಮನೆಗಳ ನಷ್ಟವನ್ನು ಅಂದಾಜಿಸಲಾಗುತ್ತಿದೆ. ಅವುಗಳ ಮಾಲೀಕರಿಗೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು. ಇದು ನನ್ನ ಸ್ವ ಕ್ಷೇತ್ರ, ನಷ್ಟ ಅನುಭವಿಸಿದವರಿಗೆ ವೈಯಕ್ತಿಕವಾಗಿಯೂ ಪರಿಹಾರ ಒದಗಿಸುವುದಾಗಿ ಕೃಷಿ ಸಚಿವರು ತಿಳಿಸಿದರು.
ಮುಂದಿನ ಎರಡು ದಿನಗಳಲ್ಲಿ ಮಂಡ್ಯ ಜಿಲ್ಲಾಧಿಕಾರಿ, ಹಾಗೂ ಎಸ್.ಪಿ. ನೇತ್ರತ್ವದಲ್ಲಿ ಶಾಂತಿ ಸಭೆ ನಡೆಸಲು ಸೂಚನೆ ನೀಡಲಾಗಿದೆ.
ಈ ಘಟನೆಯನ್ನು ರಾಜಕೀಯವಾಗಿ ಬಳಸದೇ ವಿರೋಧ ಪಕ್ಷಗಳು ಸಹ ಜವಾಬ್ದಾರಿಯಿಂದ ವರ್ತಿಸಬೇಕು. ಹಾಗೆಯೇ, ಮಾಧ್ಯಮಗಳು ನಮ್ಮೊಂದಿಗೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿಕೊಂಡರು.
ಅಮಾಯಕರನ್ನು ಬಂಧಿಸಲಾಗಿದೆ ಬಿಡುಗಡೆಗೊಳಿಸಿ ಎಂದು ನಾಗಮಂಗಕ ಪೋಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ಎರಡೂ ಕೋಮಿನ ಜನರನ್ನು ಭೇಟಿ ಮಾಡಿ ಮಾತನಾಡಿದ ಸಚಿವರು.
ಈ ವರಗೆ 54 ಮಂದಿ ಬಂಧಿಸಲಾಗಿದೆ . ನೈಜ ತಪ್ಪಿತಸ್ಥ ರನ್ನು ಬಿಡುವ ಪ್ರಶ್ನೆ ಇಲ್ಲ ಅದರೆ
ಘಟನೆಯಲ್ಲಿ ಪಾಲ್ಗೊಳದ ಅಮಾಯಕರ ಬಂಧನವಾಗಿದ್ದಲ್ಲಿ ಸಿ.ಸಿ ಟಿ.ವಿ ಪರಿಶೀಲಿಸಿ ಖಚಿತ ಪಡಿಸಿಕೊಂಡು ಬಿಡುಗಡೆ ಮಾಡಲು ಸೂಚಿಸಲಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು..
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…
ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…
ಮಂಡ್ಯ: ವಿಸಿ ಫಾರ್ಮ್ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…