ಮಂಡ್ಯ

ನಾಗಮಂಗಲ ಗಲಭೆ ಪ್ರಕರಣ: 54ಆರೋಪಿಗಳ ಬಂಧನ

ಮಂಡ್ಯ: ನಿನ್ನೆ ರಾತ್ರಿ ನಾಗಮಂಗಲ ಪಟ್ಟಣದಲ್ಲಿ ನಡೆದ ಘಟನಾ ಸ್ಥಳಕ್ಕೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಯವರು ಭೇಟಿ ನೀಡಿ, ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಪ್ರತ್ಯಕ್ಷದರ್ಶಿಗಳು, ಅಂಗಡಿ ಮುಂಗಟ್ಟುಗಳು ಹಾಗೂ ಗ್ಯಾರೇಜ್‌ಗಳ ಮಾಲಿಕರು ಮತ್ತು ಸ್ಥಳೀಯ ನಿವಾಸಿಗಳೊಂದಿಗೆ ಮಾತುಕತೆ ನಡೆಸಿ, ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವರು ತಿಳಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮವಹಿಸಲಾಗುವುದು. ಈ ಘಟನೆ ನಡೆದಿರುವುದು ದುರದೃಷ್ಟಕರ. ಆಕಸ್ಮಿಕವಾಗಿ ನಡೆದ ಘಟನೆ, ನಂತರ ದೊಡ್ಡ ಮಟ್ಟದ ಗಲಭೆಗೆ ಕಾರಣವಾಗಿದೆ ಎಂದು ಚಲುವರಾಯಸ್ವಾಮಿ ಯವರು ತಿಳಿಸಿದರು..

ನೈಜ ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ
ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಸುಮಾರು 54ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಘಟನೆಯಲ್ಲಿ ಪಾಲ್ಗೊಳ್ಳದ ಅಮಾಯಕರ ಬಂಧನವಾಗಿದ್ದಲ್ಲಿ ಸಿಸಿಟಿವಿ ಪರಿಶೀಲಿಸಿ, ಖಚಿತಪಡಿಸಿಕೊಂಡು ಬಿಡುಗಡೆ ಮಾಡಲು ಸೂಚಿಸಲಾಗಿದೆ. ನೈಜ ತಪ್ಪಿತಸ್ಥರನ್ನು ಬಿಡುವ ಪ್ರಶ್ನೆ ಇಲ್ಲ ಎಂದು ಸಚಿವರು ತಿಳಿಸಿದರು.

ಕೋಮು ಸೌಹಾರ್ದತೆಯನ್ನು ಕದಡುವ ಕೆಲಸವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ನಮ್ಮ ಜನರಿಗೆ ಶಾಂತಿ ಸೌಹಾರ್ದತೆಯಿಂದ ಬದುಕುವ ವಾತಾವರಣ ಕಲ್ಪಿಸಿಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ.

ಪರಿಹಾರದ ಭರವಸೆ
ಘಟನೆಯಲ್ಲಿ ಹಾನಿಗೊಳಗಾದ ಅಂಗಡಿಗಳು ಹಾಗೂ ಮನೆಗಳ ನಷ್ಟವನ್ನು ಅಂದಾಜಿಸಲಾಗುತ್ತಿದೆ. ಅವುಗಳ ಮಾಲೀಕರಿಗೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು. ಇದು ನನ್ನ ಸ್ವ ಕ್ಷೇತ್ರ, ನಷ್ಟ ಅನುಭವಿಸಿದವರಿಗೆ ವೈಯಕ್ತಿಕವಾಗಿಯೂ ಪರಿಹಾರ ಒದಗಿಸುವುದಾಗಿ ಕೃಷಿ ಸಚಿವರು ತಿಳಿಸಿದರು.

ಮುಂದಿನ ಎರಡು ದಿನಗಳಲ್ಲಿ ಮಂಡ್ಯ ಜಿಲ್ಲಾಧಿಕಾರಿ, ಹಾಗೂ ಎಸ್.ಪಿ. ನೇತ್ರತ್ವದಲ್ಲಿ ಶಾಂತಿ ಸಭೆ ನಡೆಸಲು ಸೂಚನೆ ನೀಡಲಾಗಿದೆ.

ಈ ಘಟನೆಯನ್ನು ರಾಜಕೀಯವಾಗಿ ಬಳಸದೇ ವಿರೋಧ ಪಕ್ಷಗಳು ಸಹ ಜವಾಬ್ದಾರಿಯಿಂದ ವರ್ತಿಸಬೇಕು. ಹಾಗೆಯೇ, ಮಾಧ್ಯಮಗಳು ನಮ್ಮೊಂದಿಗೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿಕೊಂಡರು‌‌‌‌.

ಅಮಾಯಕರನ್ನು ಬಂಧಿಸಲಾಗಿದೆ ಬಿಡುಗಡೆಗೊಳಿಸಿ ಎಂದು ನಾಗಮಂಗಕ ಪೋಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ಎರಡೂ ಕೋಮಿನ ಜನರನ್ನು ಭೇಟಿ ಮಾಡಿ ಮಾತನಾಡಿದ ಸಚಿವರು.
ಈ ವರಗೆ 54 ಮಂದಿ ಬಂಧಿಸಲಾಗಿದೆ . ನೈಜ ತಪ್ಪಿತಸ್ಥ ರನ್ನು ಬಿಡುವ ಪ್ರಶ್ನೆ ಇಲ್ಲ ಅದರೆ
ಘಟನೆಯಲ್ಲಿ ಪಾಲ್ಗೊಳದ ಅಮಾಯಕರ ಬಂಧನವಾಗಿದ್ದಲ್ಲಿ ಸಿ.ಸಿ ಟಿ.ವಿ ಪರಿಶೀಲಿಸಿ ಖಚಿತ ಪಡಿಸಿಕೊಂಡು ಬಿಡುಗಡೆ ಮಾಡಲು ಸೂಚಿಸಲಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು..

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

1 hour ago

ಓದುಗರ ಪತ್ರ: ಒಟಿಟಿ ವೇದಿಕೆಗಳು ಕನ್ನಡ ಭಾಷೆಗೂ ಆದ್ಯತೆ ನೀಡಲಿ

ಇಂದು ಒಟಿಟಿ ವೇದಿಕೆಗಳಾದ ಅಮೆಜನ್ ಪ್ರೈಮ, ನೆಟ್‌ಫ್ಲಿಕ್ಸ್, ಡಿಸ್ನಿ+ಹಾಟ್‌ಸ್ಟಾರ್, ಜೀ೫, ಸೋನಿಲಿವ್ ಮುಂತಾದವುಗಳು ನಮ್ಮ ಮನರಂಜನೆಯ ಅವಿಭಾಜ್ಯ ಅಂಗವಾಗಿವೆ. ಮನೆಯಲ್ಲಿಯೇ…

1 hour ago

ಓದುಗರ ಪತ್ರ: ಖಾಸಗಿ ಕಾಲೇಜುಗಳ ಅನಗತ್ಯ ಶುಲ್ಕ ಹೆಚ್ಚಳ ನಿಯಂತ್ರಿಸಿ

ರಾಜ್ಯದಲ್ಲಿ ಸರ್ಕಾರಿ ವಿಶ್ವವಿದ್ಯಾನಿಲಯಗಳ ಸಂಯೋಜಿತ ಕೆಲವು ಖಾಸಗಿ ಕಾಲೇಜುಗಳು ವರ್ಷದಿಂದ ವರ್ಷಕ್ಕೆ ಕಾಲೇಜು ಅಭಿವೃದ್ಧಿಯ ಹೆಸರಿನಲ್ಲಿ, ವಿಶ್ವವಿದ್ಯಾನಿಲಯದ ಸೂಚನೆ ಹೆಸರಿನಲ್ಲಿ…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮೂರಡಿಯ ಮೂರ್ತಿಗೆ ಡಾಕ್ಟರಾದ ಕೀರ್ತಿ

ಕೋರ್ಟ್ ಮೆಟ್ಟಿಲು ಏರಿ ವೈದ್ಯಕೀಯ ಸೀಟು ಪಡೆದ ಸಾಹಸಿ ಗುಜರಾತಿನ ಭಾವನಗರದ ಗೋರ್ಕಿ ಗ್ರಾಮದ ಗಣೇಶ್ ಬರಯ್ಯ ಎಂಟು ಜನ…

1 hour ago

ಬರದಲ್ಲೂ ಜಾನುವಾರುಗಳ ಮೇವಿಗಿಲ್ಲ ಕೊರತೆ

ಕೆ.ಬಿ.ರಮೇಶನಾಯಕ ಹೋಬಳಿಗೊಂದರಂತೆ ೨೯ ಮೇವು ಬ್ಯಾಂಕ್ ತೆರೆಯಲು ಪ್ರಸ್ತಾವನೆ  ಮೈಸೂರು: ಪೂರ್ವ ಮುಂಗಾರು ಮತ್ತು ಮುಂಗಾರು ಮಳೆ ಕೈಕೊಟ್ಟಿದ್ದರಿಂದಾಗಿ ಮಳೆಯಾಶ್ರಿತ…

1 hour ago

ಮಂಜಿನ ನಡುವೆ ಕೇಸರಿ ರೈಲು; ಕಾಗಿನೆರೆ ದೃಶ್ಯ ವೈರಲ್

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಧಾನಿ ಮೋದಿ, ರೈಲ್ವೆ  ಸಚಿವ ಅಶ್ವಿನಿ ವೈಷ್ಣವ್ ಗಮನ ಸೆಳೆದ ಪಶ್ಚಿಮಘಟ್ಟದ ಪ್ರಕೃತಿ ಸೌಂದರ್ಯ ಸೋಮವಾರಪೇಟೆ: ಪಶ್ಚಿಮಘಟ್ಟದ…

2 hours ago