ಮಂಡ್ಯ

ನಾಗಮಂಗಲ ಗಲಭೆ ಪೂರ್ವಯೋಜಿತ ಕೃತ್ಯ: ಎಚ್‌ಡಿಕೆ

ನಾಗಮಂಗಲ(ಮಂಡ್ಯ): ಗಣೇಶ ಮೆರವಣಿಗೆ ವೇಳೆ ಪಟ್ಟಣದಲ್ಲಿ ನಡೆದ ಗಲಭೆ ಪೂರ್ವಯೋಜಿತ ಕೃತ್ಯ, ವ್ಯವಸ್ಥಿತ ಪಿತೂರಿ. ಅಷ್ಟೇ ಅಲ್ಲ ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ.

ನಾಗಮಂಗಲದ ಗಲಭೆ ಪ್ರದೇಶಗಳಿಗೆ ಬೆಳಗ್ಗೆ ಭೇಟಿ ನೀಡಿದ ಅವರು ದುಷ್ಕರ್ಮಿಗಳ ದಾಳಿಗೆ ತುತ್ತಾದ ಅಂಗಡಿ, ಮಳಿಗೆಗಳನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವ್ಯವಸ್ಥಿತವಾಗಿ ಗಲಭೆಗಳನ್ನು ಸೃಷ್ಟಿ ಮಾಡುವುದು ಕಾಂಗ್ರೆಸ್‍ಗೆ ಕರತಲಾಮಲಕ. ಹಿಂದಿನಿಂದಲೂ ಅದನ್ನು ಮಾಡಿಕೊಂಡು ಬಂದಿದೆ. 1990ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ರಾಮನಗರ, ಚನ್ನಪ್ಪಟ್ಟಣದಲ್ಲಿ ಕೋಮುಗಲಭೆ ಸೃಷ್ಟಿಸಿ ಬೆಂಕಿ ಹಾಕಲಾಗಿತ್ತು. ಅವಳಿ ಪಟ್ಟಣಗಳು ಹೊತ್ತಿ ಉರಿದವು. ಅದೇ ಮಾದರಿಯಲ್ಲಿ ನಾಗಮಂಗಲದಲ್ಲಿ ಗಲಭೆ ಎಬ್ಬಿಸಲಾಗಿದೆ ಎಂದು ಆರೋಪಿಸಿದರು.

ಡಿಜಿ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಇಟ್ಟು ಸುಟ್ಟು ಹಾಕಲಾಯಿತು. ಅದಕ್ಕೂ ಕಾಂಗ್ರೆಸ್ ನಾಯಕರೇ ಕಾರಣ. ಆ ಪ್ರಕರಣದಲ್ಲಿ ಜೈಲಿಗೆ ಹೋದವರು ಏನಾಗಿದ್ದಾರೋ ಗೊತ್ತಿಲ್ಲ. ನಾಗಮಂಗಲದಲ್ಲಿ ಈಗ ಯಾವ ದುರುದ್ದೇಶ ಇಟ್ಟುಕೊಂಡು ಗಲಭೆ ಸೃಷ್ಟಿಸಿದ್ದಾರೋ ಗೊತ್ತಿಲ್ಲ ಎಂದರು. ‌

ನಾಗಮಂಗಲದಲ್ಲಿಯೂ ಕಾಂಗ್ರೆಸ್ ಚಿತಾವಣೆಯ ಬಗ್ಗೆ ಅನುಮಾನ ಇದೆ. ಈಗ ಚನ್ನಪಟ್ಟಣದಲ್ಲಿ ಉಪ ಚುನಾವಣೆ ಬರುತ್ತಿದೆ. ಬೇರೆ ಬೇರೆ ಘಟನೆಗಳು ಕೂಡ ನಡೆಯುತ್ತಿವೆ. ಹೀಗಾಗಿ ಒಂದು ಸಮುದಾಯದ ಓಲೈಕೆ ಮಾಡಲು ಈ ಸಂಚು ರೂಪಿಸಿರಬಹುದು. ಇಡೀ ಘಟನೆಯನ್ನು ನೋಡಿದರೆ ನಾಗಮಂಗಲದ ಕೃತ್ಯದ ಹಿಂದೆ ಕಾಂಗ್ರೆಸ್ ಇದೆ ಎಂದು ಶಂಕೆ ವ್ಯಕ್ತಪಡಿಸಿದರು.

ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ ಹಾಗೂ ಸ್ಥಳೀಯ ಪೊಲೀಸರ ಕರ್ತವ್ಯ ಲೋಪವೂ ಕಾರಣ ಎಂದ ಅವರು ನಿಜವಾದ ದುಷ್ಕರ್ಮಿಗಳನ್ನು ಬಂಧಿಸಿ ಅವರಿಗೆ ಶಿಕ್ಷೆಯಾಗಲು ಪೊಲೀಸರು ಕೆಲಸ ಮಾಡಬೇಕು ಎಂದರು.

 

andolana

Recent Posts

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಆರ್‌.ಅಶೋಕ

ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…

5 hours ago

ರೀಲ್ಸ್‌ ಪ್ರಿಯರಿಗೆ ಭರ್ಜರಿ ಆಫರ್:‌ ರೀಲ್ಸ್ ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…

6 hours ago

ʻಕಾಟೇರʼನಿಗೆ ಕೋಳ ಬಿದ್ದು 100 ದಿನ: ಇಲ್ಲಿಯವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್…‌

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…

6 hours ago

ಕೃಷಿ ತಂತ್ರಜ್ಞಾನ ವರ್ಗಾವಣೆ ರಾಜ್ಯ ಸರ್ಕಾರದ ಆದ್ಯತೆ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…

7 hours ago

ದಸರಾ ಚಲನಚಿತ್ರೋತ್ಸವ: ಕಿರುಚಿತ್ರ ಪ್ರದರ್ಶನ

ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…

7 hours ago

ಮೈಸೂರು: ಪೊಲೀಸ್‌ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಒತ್ತಾಯ

ಮೈಸೂರು: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು…

8 hours ago