ನಾಗಮಂಗಲ(ಮಂಡ್ಯ): ಗಣೇಶ ಮೆರವಣಿಗೆ ವೇಳೆ ಪಟ್ಟಣದಲ್ಲಿ ನಡೆದ ಗಲಭೆ ಪೂರ್ವಯೋಜಿತ ಕೃತ್ಯ, ವ್ಯವಸ್ಥಿತ ಪಿತೂರಿ. ಅಷ್ಟೇ ಅಲ್ಲ ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ.
ನಾಗಮಂಗಲದ ಗಲಭೆ ಪ್ರದೇಶಗಳಿಗೆ ಬೆಳಗ್ಗೆ ಭೇಟಿ ನೀಡಿದ ಅವರು ದುಷ್ಕರ್ಮಿಗಳ ದಾಳಿಗೆ ತುತ್ತಾದ ಅಂಗಡಿ, ಮಳಿಗೆಗಳನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವ್ಯವಸ್ಥಿತವಾಗಿ ಗಲಭೆಗಳನ್ನು ಸೃಷ್ಟಿ ಮಾಡುವುದು ಕಾಂಗ್ರೆಸ್ಗೆ ಕರತಲಾಮಲಕ. ಹಿಂದಿನಿಂದಲೂ ಅದನ್ನು ಮಾಡಿಕೊಂಡು ಬಂದಿದೆ. 1990ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ರಾಮನಗರ, ಚನ್ನಪ್ಪಟ್ಟಣದಲ್ಲಿ ಕೋಮುಗಲಭೆ ಸೃಷ್ಟಿಸಿ ಬೆಂಕಿ ಹಾಕಲಾಗಿತ್ತು. ಅವಳಿ ಪಟ್ಟಣಗಳು ಹೊತ್ತಿ ಉರಿದವು. ಅದೇ ಮಾದರಿಯಲ್ಲಿ ನಾಗಮಂಗಲದಲ್ಲಿ ಗಲಭೆ ಎಬ್ಬಿಸಲಾಗಿದೆ ಎಂದು ಆರೋಪಿಸಿದರು.
ಡಿಜಿ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಇಟ್ಟು ಸುಟ್ಟು ಹಾಕಲಾಯಿತು. ಅದಕ್ಕೂ ಕಾಂಗ್ರೆಸ್ ನಾಯಕರೇ ಕಾರಣ. ಆ ಪ್ರಕರಣದಲ್ಲಿ ಜೈಲಿಗೆ ಹೋದವರು ಏನಾಗಿದ್ದಾರೋ ಗೊತ್ತಿಲ್ಲ. ನಾಗಮಂಗಲದಲ್ಲಿ ಈಗ ಯಾವ ದುರುದ್ದೇಶ ಇಟ್ಟುಕೊಂಡು ಗಲಭೆ ಸೃಷ್ಟಿಸಿದ್ದಾರೋ ಗೊತ್ತಿಲ್ಲ ಎಂದರು.
ನಾಗಮಂಗಲದಲ್ಲಿಯೂ ಕಾಂಗ್ರೆಸ್ ಚಿತಾವಣೆಯ ಬಗ್ಗೆ ಅನುಮಾನ ಇದೆ. ಈಗ ಚನ್ನಪಟ್ಟಣದಲ್ಲಿ ಉಪ ಚುನಾವಣೆ ಬರುತ್ತಿದೆ. ಬೇರೆ ಬೇರೆ ಘಟನೆಗಳು ಕೂಡ ನಡೆಯುತ್ತಿವೆ. ಹೀಗಾಗಿ ಒಂದು ಸಮುದಾಯದ ಓಲೈಕೆ ಮಾಡಲು ಈ ಸಂಚು ರೂಪಿಸಿರಬಹುದು. ಇಡೀ ಘಟನೆಯನ್ನು ನೋಡಿದರೆ ನಾಗಮಂಗಲದ ಕೃತ್ಯದ ಹಿಂದೆ ಕಾಂಗ್ರೆಸ್ ಇದೆ ಎಂದು ಶಂಕೆ ವ್ಯಕ್ತಪಡಿಸಿದರು.
ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ ಹಾಗೂ ಸ್ಥಳೀಯ ಪೊಲೀಸರ ಕರ್ತವ್ಯ ಲೋಪವೂ ಕಾರಣ ಎಂದ ಅವರು ನಿಜವಾದ ದುಷ್ಕರ್ಮಿಗಳನ್ನು ಬಂಧಿಸಿ ಅವರಿಗೆ ಶಿಕ್ಷೆಯಾಗಲು ಪೊಲೀಸರು ಕೆಲಸ ಮಾಡಬೇಕು ಎಂದರು.
ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…