ಮಂಡ್ಯ

ನಾಗಮಂಗಲ ಗಲಭೆ ಪೂರ್ವಯೋಜಿತ ಕೃತ್ಯ: ಎಚ್‌ಡಿಕೆ

ನಾಗಮಂಗಲ(ಮಂಡ್ಯ): ಗಣೇಶ ಮೆರವಣಿಗೆ ವೇಳೆ ಪಟ್ಟಣದಲ್ಲಿ ನಡೆದ ಗಲಭೆ ಪೂರ್ವಯೋಜಿತ ಕೃತ್ಯ, ವ್ಯವಸ್ಥಿತ ಪಿತೂರಿ. ಅಷ್ಟೇ ಅಲ್ಲ ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ.

ನಾಗಮಂಗಲದ ಗಲಭೆ ಪ್ರದೇಶಗಳಿಗೆ ಬೆಳಗ್ಗೆ ಭೇಟಿ ನೀಡಿದ ಅವರು ದುಷ್ಕರ್ಮಿಗಳ ದಾಳಿಗೆ ತುತ್ತಾದ ಅಂಗಡಿ, ಮಳಿಗೆಗಳನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವ್ಯವಸ್ಥಿತವಾಗಿ ಗಲಭೆಗಳನ್ನು ಸೃಷ್ಟಿ ಮಾಡುವುದು ಕಾಂಗ್ರೆಸ್‍ಗೆ ಕರತಲಾಮಲಕ. ಹಿಂದಿನಿಂದಲೂ ಅದನ್ನು ಮಾಡಿಕೊಂಡು ಬಂದಿದೆ. 1990ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ರಾಮನಗರ, ಚನ್ನಪ್ಪಟ್ಟಣದಲ್ಲಿ ಕೋಮುಗಲಭೆ ಸೃಷ್ಟಿಸಿ ಬೆಂಕಿ ಹಾಕಲಾಗಿತ್ತು. ಅವಳಿ ಪಟ್ಟಣಗಳು ಹೊತ್ತಿ ಉರಿದವು. ಅದೇ ಮಾದರಿಯಲ್ಲಿ ನಾಗಮಂಗಲದಲ್ಲಿ ಗಲಭೆ ಎಬ್ಬಿಸಲಾಗಿದೆ ಎಂದು ಆರೋಪಿಸಿದರು.

ಡಿಜಿ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಇಟ್ಟು ಸುಟ್ಟು ಹಾಕಲಾಯಿತು. ಅದಕ್ಕೂ ಕಾಂಗ್ರೆಸ್ ನಾಯಕರೇ ಕಾರಣ. ಆ ಪ್ರಕರಣದಲ್ಲಿ ಜೈಲಿಗೆ ಹೋದವರು ಏನಾಗಿದ್ದಾರೋ ಗೊತ್ತಿಲ್ಲ. ನಾಗಮಂಗಲದಲ್ಲಿ ಈಗ ಯಾವ ದುರುದ್ದೇಶ ಇಟ್ಟುಕೊಂಡು ಗಲಭೆ ಸೃಷ್ಟಿಸಿದ್ದಾರೋ ಗೊತ್ತಿಲ್ಲ ಎಂದರು. ‌

ನಾಗಮಂಗಲದಲ್ಲಿಯೂ ಕಾಂಗ್ರೆಸ್ ಚಿತಾವಣೆಯ ಬಗ್ಗೆ ಅನುಮಾನ ಇದೆ. ಈಗ ಚನ್ನಪಟ್ಟಣದಲ್ಲಿ ಉಪ ಚುನಾವಣೆ ಬರುತ್ತಿದೆ. ಬೇರೆ ಬೇರೆ ಘಟನೆಗಳು ಕೂಡ ನಡೆಯುತ್ತಿವೆ. ಹೀಗಾಗಿ ಒಂದು ಸಮುದಾಯದ ಓಲೈಕೆ ಮಾಡಲು ಈ ಸಂಚು ರೂಪಿಸಿರಬಹುದು. ಇಡೀ ಘಟನೆಯನ್ನು ನೋಡಿದರೆ ನಾಗಮಂಗಲದ ಕೃತ್ಯದ ಹಿಂದೆ ಕಾಂಗ್ರೆಸ್ ಇದೆ ಎಂದು ಶಂಕೆ ವ್ಯಕ್ತಪಡಿಸಿದರು.

ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ ಹಾಗೂ ಸ್ಥಳೀಯ ಪೊಲೀಸರ ಕರ್ತವ್ಯ ಲೋಪವೂ ಕಾರಣ ಎಂದ ಅವರು ನಿಜವಾದ ದುಷ್ಕರ್ಮಿಗಳನ್ನು ಬಂಧಿಸಿ ಅವರಿಗೆ ಶಿಕ್ಷೆಯಾಗಲು ಪೊಲೀಸರು ಕೆಲಸ ಮಾಡಬೇಕು ಎಂದರು.

 

andolana

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

7 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

7 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

7 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

10 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

10 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

10 hours ago