ಮಂಡ್ಯ

ನಾಗಮಂಗಲ ಗಲಭೆಯಲ್ಲಿ ಕೋಟ್ಯಂತರ ರೂ. ನಷ್ಟ

೧.೪೭ ಕೋಟಿ ಮೌಲ್ಯದ ಕಟ್ಟಡಗಳು, ೧.೧೮ ಕೋಟಿ ರೂ. ವಸ್ತುಗಳು ಭಸ್ಮ

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆಯಲ್ಲಿ ಕೋಟ್ಯಂತರ ರೂ. ನಷ್ಟ ಉಂಟಾಗಿರುವ ಬಗ್ಗೆ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ನೀಡಿರುವ ಮಾಹಿತಿಯಿಂದ ಬೆಳಕಿಗೆ ಬಂದಿದೆ.

ಎರಡೂ ಕೋಮಿಗೆ ಸೇರಿದ ಸುಮಾರು ೨೬ ಅಂಗಡಿಗಳಿಗೆ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ. ಇದರಿಂದಾಗಿ ಹಲವಾರು ಮಂದಿಯ ಬದುಕು ಈಗ ಬೀದಿಗೆ ಬಿದ್ದಿದೆ. ಘಟನೆಯಲ್ಲಿ ಸುಮಾರು ೧.೪೭ ಕೋಟಿ ರೂ. ಮೌಲ್ಯದ ಕಟ್ಟಡಗಳು ಬೆಂಕಿಗಾಹುತಿಯಾಗಿದ್ದು, ೧.೧೮ ಕೋಟಿ ರೂ. ಮೌಲ್ಯದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ.

ಬೀದಿಗೆ ಬಿದ್ದ ಬದುಕು:
ಘಟನೆ ನಡೆದ ದಿನ ಕಿಡಿಗೇಡಿಗಳು ಪೆಟ್ರೋಲ್ ಬಾಂಬ್ ಎಸೆದು ಬೆಂಕಿ ಹಾಕಿರುವುದು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉದ್ಯಮಿಯೊಬ್ಬರು ಇತ್ತೀಚೆಗೆ ೩೦ ಲಕ್ಷ ರೂ. ಹೂಡಿಕೆ ಮಾಡಿ ಬಟ್ಟೆ ಖರೀದಿಸಿ ತಮ್ಮ ಅಂಗಡಿಯಲ್ಲಿ ವ್ಯಾಪಾರ ನಡೆಸುತ್ತಿದ್ದರು.

ಈ ಅಂಗಡಿಯ ಬಾಗಿಲಿಗೆ ಹಾಕಲಾಗಿದ್ದ ಬೀಗವನ್ನು ಕಬ್ಬಿಣದ ಹಾರೆಯಿಂದ ಒಡೆದು ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚುತ್ತಿರುವುದನ್ನು ತೋರಿಸಿ ಅದನ್ನು ತಡೆಯುವಂತೆ ಸ್ಥಳದಲ್ಲಿದ್ದ ಪೊಲೀಸರಿಗೆ ಯುವಕರು ಮನವಿ ಮಾಡಿದರೂ ಸಹ ಇದಕ್ಕೂ ನಮಗೂ ಸಂಬAಧವೇ ಇಲ್ಲವೆಂಬAತೆ ಪೊಲೀಸರು ವರ್ತಿಸಿದ್ದು ನಾಗರಿಕರ ಟೀಕೆಗೂ ಒಳಗಾಗಿದೆ.

ಪಟ್ಟಣದಲ್ಲಿ ನಡೆದ ಘರ್ಷಣೆಯಿಂದಾಗಿ ಕೋಟ್ಯಂತರ ರೂ. ನಷ್ಟವುಂಟಾಗಿ ಹಲವರ ಬದುಕು ಬೀದಿಗೆ ಬಿದ್ದಿದೆ. ಘಟನೆಯಿಂದ ಹೆದರಿದ ತಾಲ್ಲೂಕಿನ ಬದ್ರಿಕೊಪ್ಪಲು ಗ್ರಾಮದ ಯುವಕರು ಗ್ರಾಮ ತೊರೆದಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಇಷ್ಟಾದರೂ ಗೃಹ ಸಚಿವರು ಇದೊಂದು ಸಣ್ಣ ಘಟನೆ ಎಂಬುದಾಗಿ ಹೇಳಿಕೆ ನೀಡಿರುವುದು ಸಂತ್ರಸ್ತರನ್ನು ಕೆರಳಿಸಿದೆ.

ಪೊಲೀಸರ ವೈಫಲ್ಯ:
ಕಳೆದ ವರ್ಷದ ಗಣೇಶೋತ್ಸವ ವೇಳೆ ಇದೇ ಸ್ಥಳದಲ್ಲಿ ಸಣ್ಣ ಘಟನೆ ನಡೆದು ರಾಜೀ ಸಂಧಾನ ಮಾಡಿಸಲಾಗಿತ್ತು. ಆದರೂ ಸಹ ಎಚ್ಚೆತ್ತುಕೊಳ್ಳದ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ. ಗಣೇಶ ವಿಸರ್ಜನೆ ವೇಳೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರೆ ಇಂತಹ ಘಟನೆ ನಡೆಯುತ್ತಲೇ ಇರಲಿಲ್ಲ. ಕೇರಳದವರ ಪಿತೂರಿಯಿಂದಾಗಿ ಈ ಘಟನೆ ನಡೆಯಲು ಮತ್ತೊಂದು ಕಾರಣವಾಗಿದ್ದರೂ, ಗುಪ್ತಚರ ಇಲಾಖೆಯ ದಿವ್ಯ ನಿರ್ಲಕ್ಷö್ಯವೂ ಇದಕ್ಕೆ ಸಾಕ್ಷಿಯಾಗಿದೆ.

ಪಿಎಫ್‌ಐ ಕೈವಾಡದ ಬಗ್ಗೆ ಮಾಹಿತಿ ಇಲ್ಲ
ನಾಗಮಂಗಲದಲ್ಲಿ ನಡೆದ ಕೋಮು ಗಲಭೆ ಪ್ರಕರಣದಲ್ಲಿ ಪಿಎಫ್‌ಐ ಕೈವಾಡ ಇರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕೇರಳದ ನಂಟಿನ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.


ಈ ಸಂಬAಧ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಲಭೆ ಪ್ರಕರಣದಕ್ಕೆ ಸಂಬAಧಿಸಿದAತೆ ೫೫ ಆರೋಪಿಗಳ ಬಂಧಿಸಿದ್ದೇವೆ. ಇದರಲ್ಲಿ ಇಬ್ಬರು ಆರೋಪಿಗಳಾದ ಕೇರಳದ ಮಲ್ಲಪುರಂ ಜಿಲ್ಲೆಯ ಯೂಸಫ್ ಹಾಗೂ ನಾಸಿರ್ ಅವರು ನಾಗಮಂಗಲದಲ್ಲಿ ಬೇಕರಿ ಕೆಲಸ ಮಾಡುತ್ತಿದ್ದು, ಕಳೆದ ೧೮ ವರ್ಷಗಳಿಂದ ನಾಗಮಂಗಲದಲ್ಲಿ ವಾಸ ಮಾಡುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದರು.

ಘಟನೆಯಲ್ಲಿ ಅಕ್ರಮವಾಗಿ ಬಾಂಗ್ಲಾದೇಶದವರಿದ್ದರೆ ಪರಿಶೀಲನೆ ಮಾಡಲಾಗುವುದು. ನಮ್ಮ ಮಾಹಿತಿ ಪ್ರಕಾರ ಯಾರೂ ಇಲ್ಲ. ಅಕ್ರಮ ಚಟುವಟಿಕೆ ಇದ್ದರೆ ಗೊತ್ತಾಗುತ್ತಿತ್ತು. ಎಫ್‌ಐಆರ್ ಮಾಹಿತಿ ಪ್ರಕಾರ ೪.೫ ಕೋಟಿ ರೂ. ನಷ್ಟವಾಗಿದೆ.

ಘಟನೆಯಿಂದ ಕೆಲವು ಗ್ರಾಮದ ಯುವಕರು ಊರು ಬಿಟ್ಟಿದ್ದಾರೆ. ಅಮಾಯಕರಿಗೆ ತೊಂದರೆ ಕೊಡಲ್ಲ. ಪ್ರಕರಣದಲ್ಲಿ ಪ್ರಮುಖ ಪಾತ್ರವಹಿಸಿ ಭಾಗಿಯಾದವರನ್ನ ಮಾತ್ರ ಬಂಧಿಸಿದ್ದೇವೆ. ಸಿಸಿ ಟಿವಿ ದೃಶ್ಯ ಸಂಗ್ರಹಿಸಿ ಮಾಹಿತಿ ಕಲೆಹಾಕಲಾಗಿದೆ. ಪ್ರಕರಣಲ್ಲಿ ೧೦೦ಕ್ಕೂ ಹೆಚ್ಚು ಜನರನ್ನ ಗುರುತಿಸಲಾಗಿದೆ. ಅವರ ಮೇಲೆ ಮುಂದಿನ ದಿನಗಳಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು.

ಅಮಾಯಕರಿಗೆ ಏನೂ ಮಾಡಲ್ಲ ಅವರು ಪಟ್ಟಣಕ್ಕೆ ಬರಬಹುದು. ಘಟನೆ ಹಿನ್ನೆಲೆ ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಲಾಗಿದ್ದು, ಬೇರೆ ಬೇರೆ ಜಿಲ್ಲೆಯಲ್ಲಿ ನಡೆದ ವಿಡಿಯೋ ಬಿಟ್ಟು ನಾಗಮಂಗಲ ಪ್ರಕರಣ ಅಂತ ಪೋಸ್ಟ್ ಹಾಕ್ತಿದ್ದಾರೆ ಅಂತಹವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದರು.

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

22 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

1 hour ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

2 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

3 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

7 hours ago