ಮಂಡ್ಯ: ನಾಗಮಂಗಲ ಪಟ್ಟಣದ ಗಣೇಶ ವಿಸರ್ಜನೆ ಸಮಯದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಡಿಯಲ್ಲಿ ಪಟ್ಟಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತ್ತು ಮಾಡಲಾಗಿದೆ.
ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಆರೋಪದಡಿಯಲ್ಲಿ ಅಶೋಕ್ ಕುಮಾರ್ ಅವರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸೆಪ್ಟೆಂಬರ್ 11ರಂದು ರಾತ್ರಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಎರಡು ಕೋಮಿನ ಯುವಕರ ನಡುವೆ ಗಲಭೆ ಉಂಟಾಗಿತ್ತು. ಈ ಗಲಭೆಯಲ್ಲಿ ಹಲವು ಅಂಗಡಿ ಮುಂಗಟ್ಟುಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಘಟನೆ ಸಂಬಂಧ ಪೊಲೀಸರು 152 ಜನರ ವಿರುದ್ಧ ಎಫ್ಐಆರ್ ದಾಖಲಿಸಿ ಈವರೆಗೆ 52 ಮಂದಿಯನ್ನು ಬಂಧಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…