ಮಂಡ್ಯ: ಈ ಬಾರಿ ರೈತರ ಮೊಗದಲ್ಲಿ ಸಂತೋಷ ತುಂಬುವ ಸಂಕ್ರಾಂತಿ ಹಬ್ಬವನ್ನು ವಿಶೇಷವಾಗಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ದೇವಲಾಪುರದಲ್ಲಿ ಆಚರಿಸಲಾಯಿತು.
ಸುಗ್ಗಿ ಹಬ್ಬದ ಮೆರವಣಿಗೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಚಾಲನೆ ನೀಡಿದರು. ರೈತರ ಈ ಹಬ್ಬದಲ್ಲಿ ಮುಖ್ಯ ಆಕರ್ಷಣೆ ಎತ್ತಿನಗಾಡಿ ಮೆರವಣಿಗೆ ಎತ್ತುಗಳನ್ನು ಹೂವುಗಳಿಂದ ಹಾಗೂ ಎತ್ತಿನಗಾಡಿಯನ್ನು ಬಾಳೆ ಕಂಬ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು.
ಎತ್ತಿನಗಾಡಿಯ ಮುಂಭಾಗದಲ್ಲಿ ಪಟಕುಣಿತ, ಸೋಮನ ಕುಣಿತ, ಡೊಳ್ಳು ಕುಣಿತ, ಕೊಂಬು ಕಹಳೆ, ರಂಗನ ಕುಣಿತ, ಪೂಜಾ ಕುಣಿತ ವೀರಗಾಸೆ ಸೇರಿದಂತೆ ಪೂರ್ಣ ಕುಂಭ ಹೊತ್ತ ಮಹಿಳೆಯರು ವಿಶೇಷ ಮೆರಗು ನೀಡಿದರು.
ಇದೇ ಸಂದರ್ಭದಲ್ಲಿ ದೇವಲಪುರ ಕೆರೆಗೆ ಸಚಿವರು ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಸಚಿವರು ಎತ್ತಿನಗಾಡಿ ಏರಿ ಚಾಟಿ ಹಿಡಿದಿದ್ದು ವಿಶೇಷವಾಗಿತ್ತು.
ಕಾರ್ಯಕ್ರಮದಲ್ಲಿ ಸಚಿವರು ರಾಶಿ ಪೂಜೆ, ಕಡಲೆಕಾಯಿ, ಅವರೆಕಾಯಿ, ಬೆಲ್ಲದ ಪರಿಷೆ, ಗ್ರಾಮೀಣ ಕ್ರೀಡಾ ಸ್ಪರ್ಧೆಗಳಾದ ಹಗ್ಗ- ಜಗ್ಗಾಟ ಹಾಗೂ ಕಬ್ಬಡಿಯಲ್ಲಿ ಸ್ಪರ್ಧಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.
ಗಮನ ಸೆಳೆದ ವಸ್ತು ಪ್ರದರ್ಶನ ಮಳಿಗೆಗಳು ರೈತರಿಗೆ ಮಾಹಿತಿ ಮೀಡಲು ಕೃಷಿ ಇಲಾಖೆಯಿಂದ ಸಮಗ್ರ ಕೃಷಿ ಪದ್ಧತಿ ಹಾಗೂ ರಾಗಿ ಬೆಳೆಯ ಪಾರಂಪರಿಕ ಹಾಗೂ ಆಧುನಿಕ ಪದ್ಧತಿಗಳು, ತೋಟಗಾರಿಕೆ ಇಲಾಖೆಯಿಂದ ಹಣ್ಣು ಹಾಗೂ ತರಕಾರಿ ಮೇಲಿನ ಆಕರ್ಷಕ ಕೆತ್ತನೆಗಳು, ರೇಷ್ಮೆ, ಮೀನುಗಾರಿಕೆ, ಪಶು ಸಂಗೋಪನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸರ್ಕಾರದ ಯೋಜನೆಗಳ ಕುರಿತು ವಿಷಯಗಳನ್ನು ಪ್ರದರ್ಶಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…