ಮಂಡ್ಯ: ಈ ಬಾರಿ ರೈತರ ಮೊಗದಲ್ಲಿ ಸಂತೋಷ ತುಂಬುವ ಸಂಕ್ರಾಂತಿ ಹಬ್ಬವನ್ನು ವಿಶೇಷವಾಗಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ದೇವಲಾಪುರದಲ್ಲಿ ಆಚರಿಸಲಾಯಿತು.
ಸುಗ್ಗಿ ಹಬ್ಬದ ಮೆರವಣಿಗೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಚಾಲನೆ ನೀಡಿದರು. ರೈತರ ಈ ಹಬ್ಬದಲ್ಲಿ ಮುಖ್ಯ ಆಕರ್ಷಣೆ ಎತ್ತಿನಗಾಡಿ ಮೆರವಣಿಗೆ ಎತ್ತುಗಳನ್ನು ಹೂವುಗಳಿಂದ ಹಾಗೂ ಎತ್ತಿನಗಾಡಿಯನ್ನು ಬಾಳೆ ಕಂಬ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು.
ಎತ್ತಿನಗಾಡಿಯ ಮುಂಭಾಗದಲ್ಲಿ ಪಟಕುಣಿತ, ಸೋಮನ ಕುಣಿತ, ಡೊಳ್ಳು ಕುಣಿತ, ಕೊಂಬು ಕಹಳೆ, ರಂಗನ ಕುಣಿತ, ಪೂಜಾ ಕುಣಿತ ವೀರಗಾಸೆ ಸೇರಿದಂತೆ ಪೂರ್ಣ ಕುಂಭ ಹೊತ್ತ ಮಹಿಳೆಯರು ವಿಶೇಷ ಮೆರಗು ನೀಡಿದರು.
ಇದೇ ಸಂದರ್ಭದಲ್ಲಿ ದೇವಲಪುರ ಕೆರೆಗೆ ಸಚಿವರು ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಸಚಿವರು ಎತ್ತಿನಗಾಡಿ ಏರಿ ಚಾಟಿ ಹಿಡಿದಿದ್ದು ವಿಶೇಷವಾಗಿತ್ತು.
ಕಾರ್ಯಕ್ರಮದಲ್ಲಿ ಸಚಿವರು ರಾಶಿ ಪೂಜೆ, ಕಡಲೆಕಾಯಿ, ಅವರೆಕಾಯಿ, ಬೆಲ್ಲದ ಪರಿಷೆ, ಗ್ರಾಮೀಣ ಕ್ರೀಡಾ ಸ್ಪರ್ಧೆಗಳಾದ ಹಗ್ಗ- ಜಗ್ಗಾಟ ಹಾಗೂ ಕಬ್ಬಡಿಯಲ್ಲಿ ಸ್ಪರ್ಧಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.
ಗಮನ ಸೆಳೆದ ವಸ್ತು ಪ್ರದರ್ಶನ ಮಳಿಗೆಗಳು ರೈತರಿಗೆ ಮಾಹಿತಿ ಮೀಡಲು ಕೃಷಿ ಇಲಾಖೆಯಿಂದ ಸಮಗ್ರ ಕೃಷಿ ಪದ್ಧತಿ ಹಾಗೂ ರಾಗಿ ಬೆಳೆಯ ಪಾರಂಪರಿಕ ಹಾಗೂ ಆಧುನಿಕ ಪದ್ಧತಿಗಳು, ತೋಟಗಾರಿಕೆ ಇಲಾಖೆಯಿಂದ ಹಣ್ಣು ಹಾಗೂ ತರಕಾರಿ ಮೇಲಿನ ಆಕರ್ಷಕ ಕೆತ್ತನೆಗಳು, ರೇಷ್ಮೆ, ಮೀನುಗಾರಿಕೆ, ಪಶು ಸಂಗೋಪನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸರ್ಕಾರದ ಯೋಜನೆಗಳ ಕುರಿತು ವಿಷಯಗಳನ್ನು ಪ್ರದರ್ಶಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…