ಮಂಡ್ಯ

ನಾಗಮಂಗಲ | ಸಂಕ್ರಾಂತಿ ಸಂಭ್ರಮ ಕಳೆಗಟ್ಟಿದ ಅಲಂಕೃತ ಎತ್ತಿನಗಾಡಿ ಮೆರವಣಿಗೆ

ಮಂಡ್ಯ: ಈ ಬಾರಿ ರೈತರ ಮೊಗದಲ್ಲಿ ಸಂತೋಷ ತುಂಬುವ ಸಂಕ್ರಾಂತಿ ಹಬ್ಬವನ್ನು‌ ವಿಶೇಷವಾಗಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ದೇವಲಾಪುರದಲ್ಲಿ ಆಚರಿಸಲಾಯಿತು.

ಸುಗ್ಗಿ ಹಬ್ಬದ ಮೆರವಣಿಗೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಚಾಲನೆ ನೀಡಿದರು. ರೈತರ ಈ ಹಬ್ಬದಲ್ಲಿ ಮುಖ್ಯ ಆಕರ್ಷಣೆ ಎತ್ತಿನಗಾಡಿ ಮೆರವಣಿಗೆ ‌‌ ಎತ್ತುಗಳನ್ನು ಹೂವುಗಳಿಂದ ಹಾಗೂ ಎತ್ತಿನಗಾಡಿಯನ್ನು ಬಾಳೆ ಕಂಬ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು.

ಎತ್ತಿನಗಾಡಿಯ ಮುಂಭಾಗದಲ್ಲಿ ಪಟಕುಣಿತ, ಸೋಮನ ಕುಣಿತ, ಡೊಳ್ಳು ಕುಣಿತ, ಕೊಂಬು ಕಹಳೆ, ರಂಗನ ಕುಣಿತ, ಪೂಜಾ ಕುಣಿತ ವೀರಗಾಸೆ ಸೇರಿದಂತೆ ಪೂರ್ಣ ಕುಂಭ ಹೊತ್ತ ಮಹಿಳೆಯರು ವಿಶೇಷ ಮೆರಗು ನೀಡಿದರು.

ಇದೇ ಸಂದರ್ಭದಲ್ಲಿ ದೇವಲಪುರ ಕೆರೆಗೆ ಸಚಿವರು ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು‌. ಸಚಿವರು ಎತ್ತಿನಗಾಡಿ ಏರಿ ಚಾಟಿ ಹಿಡಿದಿದ್ದು ವಿಶೇಷವಾಗಿತ್ತು.

ಕಾರ್ಯಕ್ರಮದಲ್ಲಿ ಸಚಿವರು ರಾಶಿ ಪೂಜೆ, ಕಡಲೆಕಾಯಿ, ಅವರೆಕಾಯಿ, ಬೆಲ್ಲದ ಪರಿಷೆ, ಗ್ರಾಮೀಣ ಕ್ರೀಡಾ ಸ್ಪರ್ಧೆಗಳಾದ ಹಗ್ಗ- ಜಗ್ಗಾಟ ಹಾಗೂ ಕಬ್ಬಡಿಯಲ್ಲಿ ಸ್ಪರ್ಧಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

ಗಮನ ಸೆಳೆದ ವಸ್ತು ಪ್ರದರ್ಶನ‌ ಮಳಿಗೆಗಳು ರೈತರಿಗೆ ಮಾಹಿತಿ ಮೀಡಲು ಕೃಷಿ ಇಲಾಖೆಯಿಂದ ಸಮಗ್ರ ಕೃಷಿ ಪದ್ಧತಿ ಹಾಗೂ ರಾಗಿ ಬೆಳೆಯ ಪಾರಂಪರಿಕ ಹಾಗೂ ಆಧುನಿಕ ಪದ್ಧತಿಗಳು, ತೋಟಗಾರಿಕೆ ಇಲಾಖೆಯಿಂದ ಹಣ್ಣು ಹಾಗೂ ತರಕಾರಿ ಮೇಲಿನ ಆಕರ್ಷಕ ಕೆತ್ತನೆಗಳು, ರೇಷ್ಮೆ, ಮೀನುಗಾರಿಕೆ, ಪಶು ಸಂಗೋಪನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸರ್ಕಾರದ ಯೋಜನೆಗಳ ಕುರಿತು ವಿಷಯಗಳನ್ನು ಪ್ರದರ್ಶಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸುಪ್ರೀಂಕೋರ್ಟ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಹಿನ್ನಡೆ

ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…

22 mins ago

ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ: ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…

42 mins ago

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…

2 hours ago

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

2 hours ago

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

3 hours ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

3 hours ago