ಮಂಡ್ಯ: ಈ ಬಾರಿ ರೈತರ ಮೊಗದಲ್ಲಿ ಸಂತೋಷ ತುಂಬುವ ಸಂಕ್ರಾಂತಿ ಹಬ್ಬವನ್ನು ವಿಶೇಷವಾಗಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ದೇವಲಾಪುರದಲ್ಲಿ ಆಚರಿಸಲಾಯಿತು.
ಸುಗ್ಗಿ ಹಬ್ಬದ ಮೆರವಣಿಗೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಚಾಲನೆ ನೀಡಿದರು. ರೈತರ ಈ ಹಬ್ಬದಲ್ಲಿ ಮುಖ್ಯ ಆಕರ್ಷಣೆ ಎತ್ತಿನಗಾಡಿ ಮೆರವಣಿಗೆ ಎತ್ತುಗಳನ್ನು ಹೂವುಗಳಿಂದ ಹಾಗೂ ಎತ್ತಿನಗಾಡಿಯನ್ನು ಬಾಳೆ ಕಂಬ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು.
ಎತ್ತಿನಗಾಡಿಯ ಮುಂಭಾಗದಲ್ಲಿ ಪಟಕುಣಿತ, ಸೋಮನ ಕುಣಿತ, ಡೊಳ್ಳು ಕುಣಿತ, ಕೊಂಬು ಕಹಳೆ, ರಂಗನ ಕುಣಿತ, ಪೂಜಾ ಕುಣಿತ ವೀರಗಾಸೆ ಸೇರಿದಂತೆ ಪೂರ್ಣ ಕುಂಭ ಹೊತ್ತ ಮಹಿಳೆಯರು ವಿಶೇಷ ಮೆರಗು ನೀಡಿದರು.
ಇದೇ ಸಂದರ್ಭದಲ್ಲಿ ದೇವಲಪುರ ಕೆರೆಗೆ ಸಚಿವರು ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಸಚಿವರು ಎತ್ತಿನಗಾಡಿ ಏರಿ ಚಾಟಿ ಹಿಡಿದಿದ್ದು ವಿಶೇಷವಾಗಿತ್ತು.
ಕಾರ್ಯಕ್ರಮದಲ್ಲಿ ಸಚಿವರು ರಾಶಿ ಪೂಜೆ, ಕಡಲೆಕಾಯಿ, ಅವರೆಕಾಯಿ, ಬೆಲ್ಲದ ಪರಿಷೆ, ಗ್ರಾಮೀಣ ಕ್ರೀಡಾ ಸ್ಪರ್ಧೆಗಳಾದ ಹಗ್ಗ- ಜಗ್ಗಾಟ ಹಾಗೂ ಕಬ್ಬಡಿಯಲ್ಲಿ ಸ್ಪರ್ಧಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.
ಗಮನ ಸೆಳೆದ ವಸ್ತು ಪ್ರದರ್ಶನ ಮಳಿಗೆಗಳು ರೈತರಿಗೆ ಮಾಹಿತಿ ಮೀಡಲು ಕೃಷಿ ಇಲಾಖೆಯಿಂದ ಸಮಗ್ರ ಕೃಷಿ ಪದ್ಧತಿ ಹಾಗೂ ರಾಗಿ ಬೆಳೆಯ ಪಾರಂಪರಿಕ ಹಾಗೂ ಆಧುನಿಕ ಪದ್ಧತಿಗಳು, ತೋಟಗಾರಿಕೆ ಇಲಾಖೆಯಿಂದ ಹಣ್ಣು ಹಾಗೂ ತರಕಾರಿ ಮೇಲಿನ ಆಕರ್ಷಕ ಕೆತ್ತನೆಗಳು, ರೇಷ್ಮೆ, ಮೀನುಗಾರಿಕೆ, ಪಶು ಸಂಗೋಪನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸರ್ಕಾರದ ಯೋಜನೆಗಳ ಕುರಿತು ವಿಷಯಗಳನ್ನು ಪ್ರದರ್ಶಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…