ಮಂಡ್ಯ: ಈ ಬಾರಿ ರೈತರ ಮೊಗದಲ್ಲಿ ಸಂತೋಷ ತುಂಬುವ ಸಂಕ್ರಾಂತಿ ಹಬ್ಬವನ್ನು ವಿಶೇಷವಾಗಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ದೇವಲಾಪುರದಲ್ಲಿ ಆಚರಿಸಲಾಯಿತು.
ಸುಗ್ಗಿ ಹಬ್ಬದ ಮೆರವಣಿಗೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಚಾಲನೆ ನೀಡಿದರು. ರೈತರ ಈ ಹಬ್ಬದಲ್ಲಿ ಮುಖ್ಯ ಆಕರ್ಷಣೆ ಎತ್ತಿನಗಾಡಿ ಮೆರವಣಿಗೆ ಎತ್ತುಗಳನ್ನು ಹೂವುಗಳಿಂದ ಹಾಗೂ ಎತ್ತಿನಗಾಡಿಯನ್ನು ಬಾಳೆ ಕಂಬ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು.
ಎತ್ತಿನಗಾಡಿಯ ಮುಂಭಾಗದಲ್ಲಿ ಪಟಕುಣಿತ, ಸೋಮನ ಕುಣಿತ, ಡೊಳ್ಳು ಕುಣಿತ, ಕೊಂಬು ಕಹಳೆ, ರಂಗನ ಕುಣಿತ, ಪೂಜಾ ಕುಣಿತ ವೀರಗಾಸೆ ಸೇರಿದಂತೆ ಪೂರ್ಣ ಕುಂಭ ಹೊತ್ತ ಮಹಿಳೆಯರು ವಿಶೇಷ ಮೆರಗು ನೀಡಿದರು.
ಇದೇ ಸಂದರ್ಭದಲ್ಲಿ ದೇವಲಪುರ ಕೆರೆಗೆ ಸಚಿವರು ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಸಚಿವರು ಎತ್ತಿನಗಾಡಿ ಏರಿ ಚಾಟಿ ಹಿಡಿದಿದ್ದು ವಿಶೇಷವಾಗಿತ್ತು.
ಕಾರ್ಯಕ್ರಮದಲ್ಲಿ ಸಚಿವರು ರಾಶಿ ಪೂಜೆ, ಕಡಲೆಕಾಯಿ, ಅವರೆಕಾಯಿ, ಬೆಲ್ಲದ ಪರಿಷೆ, ಗ್ರಾಮೀಣ ಕ್ರೀಡಾ ಸ್ಪರ್ಧೆಗಳಾದ ಹಗ್ಗ- ಜಗ್ಗಾಟ ಹಾಗೂ ಕಬ್ಬಡಿಯಲ್ಲಿ ಸ್ಪರ್ಧಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.
ಗಮನ ಸೆಳೆದ ವಸ್ತು ಪ್ರದರ್ಶನ ಮಳಿಗೆಗಳು ರೈತರಿಗೆ ಮಾಹಿತಿ ಮೀಡಲು ಕೃಷಿ ಇಲಾಖೆಯಿಂದ ಸಮಗ್ರ ಕೃಷಿ ಪದ್ಧತಿ ಹಾಗೂ ರಾಗಿ ಬೆಳೆಯ ಪಾರಂಪರಿಕ ಹಾಗೂ ಆಧುನಿಕ ಪದ್ಧತಿಗಳು, ತೋಟಗಾರಿಕೆ ಇಲಾಖೆಯಿಂದ ಹಣ್ಣು ಹಾಗೂ ತರಕಾರಿ ಮೇಲಿನ ಆಕರ್ಷಕ ಕೆತ್ತನೆಗಳು, ರೇಷ್ಮೆ, ಮೀನುಗಾರಿಕೆ, ಪಶು ಸಂಗೋಪನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸರ್ಕಾರದ ಯೋಜನೆಗಳ ಕುರಿತು ವಿಷಯಗಳನ್ನು ಪ್ರದರ್ಶಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…