ಮಂಡ್ಯ

ನಾಗಮಂಗಲ | ಸ್ಲಂ ನಿವಾಸಿಗಳಿಗೆ ಹಕ್ಕು ಪತ್ರ ನೀಡಲು ಕ್ರಮ

ಮಂಡ್ಯ : ನಾಗಮಂಗಲ ಪುರಸಭೆ ವ್ಯಾಪ್ತಿಯಲ್ಲಿರುವ ಸುಭಾಷ್ ನಗರದ 223 ಸ್ಲಂ ನಿವಾಸಿಗಳಿಗೆ ಹಕ್ಕು ಪತ್ರ ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕುಮಾರ ಅವರು ತಿಳಿಸಿದರು.

ಗುರುವಾರ ನಾಗಮಂಗಲದ ಸುಭಾಷ್ ನಗರ ಸ್ಲಂ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು. ಸುಭಾಷ್ ನಗರ ಸ್ಲಂ ನಲ್ಲಿ‌ ಈಗಾಗಲೇ ಕೊಳಚೆ ನಿರ್ಮೂಲನ ಮಂಡಳಿಯಿಂದ 223 ಮನೆ ನಿರ್ಮಾಣ ಮಾಡಲಾಗಿರುತ್ತದೆ. ಆದರೆ ಹಕ್ಕು ಪತ್ರ ವಿತರಣೆಯಾಗಿರುವುದಿಲ್ಲ. ಈ ಕುರಿತಂತೆ ಸರ್ವೆ ಕೆಲಸ ನಡೆಸಿ ವರದಿ ಪಡೆಯಲಾಗಿದ್ದು, ವರದಿಯನ್ನು ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ ಎಂದರು.

ಶೀಘ್ರದಲ್ಲೇ 223 ಜನರಿಗೆ ಹಕ್ಕು ಪತ್ರ ವಿತರಿಸಿ 2010 ರಿಂದ ಹಕ್ಕು ಪತ್ರ ವಿತರಣೆಗೆ ಸಂಬಂಧಿಸಿದಂತೆ ಇದ್ದ ತೊಡಕನ್ನು ನಿವಾರಿಸಲಾಗುವುದು ಎಂದು ತಿಳಿಸಿರು.

ಇದೇ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್ ಆದರ್ಶ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

51 mins ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

2 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

3 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

4 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

5 hours ago

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

5 hours ago