Nagamangala | Steps to issue title deeds to slum residents
ಮಂಡ್ಯ : ನಾಗಮಂಗಲ ಪುರಸಭೆ ವ್ಯಾಪ್ತಿಯಲ್ಲಿರುವ ಸುಭಾಷ್ ನಗರದ 223 ಸ್ಲಂ ನಿವಾಸಿಗಳಿಗೆ ಹಕ್ಕು ಪತ್ರ ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕುಮಾರ ಅವರು ತಿಳಿಸಿದರು.
ಗುರುವಾರ ನಾಗಮಂಗಲದ ಸುಭಾಷ್ ನಗರ ಸ್ಲಂ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು. ಸುಭಾಷ್ ನಗರ ಸ್ಲಂ ನಲ್ಲಿ ಈಗಾಗಲೇ ಕೊಳಚೆ ನಿರ್ಮೂಲನ ಮಂಡಳಿಯಿಂದ 223 ಮನೆ ನಿರ್ಮಾಣ ಮಾಡಲಾಗಿರುತ್ತದೆ. ಆದರೆ ಹಕ್ಕು ಪತ್ರ ವಿತರಣೆಯಾಗಿರುವುದಿಲ್ಲ. ಈ ಕುರಿತಂತೆ ಸರ್ವೆ ಕೆಲಸ ನಡೆಸಿ ವರದಿ ಪಡೆಯಲಾಗಿದ್ದು, ವರದಿಯನ್ನು ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ ಎಂದರು.
ಶೀಘ್ರದಲ್ಲೇ 223 ಜನರಿಗೆ ಹಕ್ಕು ಪತ್ರ ವಿತರಿಸಿ 2010 ರಿಂದ ಹಕ್ಕು ಪತ್ರ ವಿತರಣೆಗೆ ಸಂಬಂಧಿಸಿದಂತೆ ಇದ್ದ ತೊಡಕನ್ನು ನಿವಾರಿಸಲಾಗುವುದು ಎಂದು ತಿಳಿಸಿರು.
ಇದೇ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್ ಆದರ್ಶ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…