ಮಂಡ್ಯ

ನಾಗಮಂಗಲದಲ್ಲಿ ಗಲಭೆ ಕೇಸ್:‌ 52 ಮಂದಿಯ ಬಂಧನ

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 52 ಮಂದಿಯನ್ನು ಬಂಧಿಸಲಾಗಿದೆ.

ಘಟನೆ ಬಳಿಕ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪರಿಸ್ಥಿತಿ ಉದ್ದಿಗ್ನಗೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸೆಕ್ಷನ್‌ 144 ಜಾರಿ ಮಾಡಲಾಗಿದೆ. ನಾಗಮಂಗಲದಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಜಿಲ್ಲಾಧಿಕಾರಿ ಡಾ.ಕುಮಾರ್‌ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿದ್ದು, ಸೆಪ್ಟೆಂಬರ್.14ರವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನನು ನಿಯೋಜನೆ ಮಾಡಲಾಗಿದೆ. ಪ್ರಕರಣ ಸಂಬಂಧ ಇದುವರೆಗೂ 52 ಮಂದಿಯನ್ನು ಬಂಧಿಸಲಾಗಿದ್ದು, ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಬದರಿಕೊಪ್ಪಲಿನಲ್ಲಿ ಅದ್ಧೂರಿಯಾಗಿ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುತ್ತಿತ್ತು. ಈ ವೇಳೆ ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ  ಯುವಕರ ನಡುವೆ ವಾಕ್ಸಮರ, ತಳ್ಳಾಟ, ನೂಕಾಟ ನಡೆಯಿತು. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸ ನಡೆಸಿದ್ದರು.

ಮಂಡ್ಯದ ನಾಗಮಂಗಲ ಪಟ್ಟಣ ಸದ್ಯ ಉದ್ವಿಗ್ನಗೊಂಡಿದ್ದು, ದುಷ್ಕರ್ಮಿಗಳ ಗುಂಪು ಅಂಗಡಿ ಹಾಗೂ ಅಂಗಡಿ ಮುಂದಿದ್ದ ಬೈಕ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಅಷ್ಟೇ ಅಲ್ಲದೇ ರಸ್ತೆ ಮಧ್ಯೆ ಕತ್ತಿ ಹಿಡಿದು ಝಳಪಿಸಿದ್ದ ಘಟನೆಯೂ ಕೂಡ ನಡೆದಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

5 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

6 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

7 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

8 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

8 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

12 hours ago