ಮಂಡ್ಯ: ನಾಗಮಂಗಲದ ಬದ್ರಿಕೊಪ್ಪಲಿನ ಯುವಕರು ಗಣೇಶ ವಿಸರ್ಜನಾ ಮೆರವಣಿಗೆ ಮಾಡುತ್ತಿದ್ದ ಸಂದರ್ಭದಲ್ಲಿ ಉಂಟಾದ ಗಲಭೆಯಲ್ಲಿ ಅಮಾಯಕರನ್ನು ಬಂಧಿಸಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಬಗ್ಗೆ ಬಂಧನಕ್ಕೊಳಗಾಗಿರುವ ಶ್ರೀನಿವಾಸ್ ಎಂಬ ಯುವಕನ ತಾಯಿ ಪ್ರತಿಕ್ರಿಯೆ ನೀಡಿದ್ದು, ನಮ್ಮ ಮಗ ಗಲಾಟೆಯಾದ ಸಂದರ್ಭದಲ್ಲಿ ಅಲ್ಲಿ ಇಲ್ಲದಿದ್ದರೂ ಬಂಧಿಸಲಾಗಿದೆ.
ಅಂದು ಸಂಜೆ 6.45 ರಿಂದ ರಾತ್ರಿ 9.28ರವರೆಗೂ ನಮ್ಮ ಮನೆಯಲ್ಲಿ ಇದ್ದ. ಆದರೂ ಅವನನ್ನು ಬಂಧಿಸಲಾಗಿದೆ. ಮಧ್ಯರಾತ್ರಿ ಮನೆಗೆ ಬಂದು ಪೊಲೀಸರು ನನ್ನ ಮಗನನ್ನು ಬಂಧಿಸಿದ್ದಾರೆ.
ರಸ್ತೆಯುದ್ದಕ್ಕೂ ನನ್ನ ಮಗನಿಗೆ ಹೊಡೆದುಕೊಂಡೇ ಕರೆದುಕೊಂಡು ಹೋದರು ಎಂದು ಬೇಸರ ವ್ಯಕ್ತಪಡಿಸಿದರು. ಸಿಸಿ ಕ್ಯಾಮರಾ ದೃಶ್ಯವನ್ನು ನೋಡಿದರೂ ನನ್ನ ಮಗನನ್ನು ಬಿಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಏನೂ ತಪ್ಪು ಮಾಡದ ನನ್ನ ಮಗನನ್ನು ಜೈಲಿನಿಂದ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…