ಮಂಡ್ಯ: ನಾಗಮಂಗಲದ ಬದ್ರಿಕೊಪ್ಪಲಿನ ಯುವಕರು ಗಣೇಶ ವಿಸರ್ಜನಾ ಮೆರವಣಿಗೆ ಮಾಡುತ್ತಿದ್ದ ಸಂದರ್ಭದಲ್ಲಿ ಉಂಟಾದ ಗಲಭೆಯಲ್ಲಿ ಅಮಾಯಕರನ್ನು ಬಂಧಿಸಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಬಗ್ಗೆ ಬಂಧನಕ್ಕೊಳಗಾಗಿರುವ ಶ್ರೀನಿವಾಸ್ ಎಂಬ ಯುವಕನ ತಾಯಿ ಪ್ರತಿಕ್ರಿಯೆ ನೀಡಿದ್ದು, ನಮ್ಮ ಮಗ ಗಲಾಟೆಯಾದ ಸಂದರ್ಭದಲ್ಲಿ ಅಲ್ಲಿ ಇಲ್ಲದಿದ್ದರೂ ಬಂಧಿಸಲಾಗಿದೆ.
ಅಂದು ಸಂಜೆ 6.45 ರಿಂದ ರಾತ್ರಿ 9.28ರವರೆಗೂ ನಮ್ಮ ಮನೆಯಲ್ಲಿ ಇದ್ದ. ಆದರೂ ಅವನನ್ನು ಬಂಧಿಸಲಾಗಿದೆ. ಮಧ್ಯರಾತ್ರಿ ಮನೆಗೆ ಬಂದು ಪೊಲೀಸರು ನನ್ನ ಮಗನನ್ನು ಬಂಧಿಸಿದ್ದಾರೆ.
ರಸ್ತೆಯುದ್ದಕ್ಕೂ ನನ್ನ ಮಗನಿಗೆ ಹೊಡೆದುಕೊಂಡೇ ಕರೆದುಕೊಂಡು ಹೋದರು ಎಂದು ಬೇಸರ ವ್ಯಕ್ತಪಡಿಸಿದರು. ಸಿಸಿ ಕ್ಯಾಮರಾ ದೃಶ್ಯವನ್ನು ನೋಡಿದರೂ ನನ್ನ ಮಗನನ್ನು ಬಿಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಏನೂ ತಪ್ಪು ಮಾಡದ ನನ್ನ ಮಗನನ್ನು ಜೈಲಿನಿಂದ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…
ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…
ವಸಂತ್ ಕುಮಾರ್, ಮೈಸೂರು ಮಠ ಪ್ರತಿ ವರ್ಷವೂ ಪಾಲಿಕೆಯ ಬಜೆಟ್ನಲ್ಲಿ ರಸ್ತೆ ದುರಸ್ತಿಗಾಗಿ ಇಂತಿಷ್ಟು ಹಣವನ್ನು ನಿಗದಿಪಡಿಸಲಾಗುತ್ತದೆ. ೨೦೨೪-೨೦೨೫ರಲ್ಲಿ ಕೊಟ್ಟ…
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…