ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರ್.ಅಶೋಕ್ ವಿರುದ್ಧ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಯಾರೂ ಪಾಕ್ ಪರ ಘೋಷಣೆ ಕೂಗಿಲ್ಲ. ವಿಪಕ್ಷ ನಾಯಕ ಆರ್.ಅಶೋಕ್ ಸುಳ್ಳು ಹೇಳಿದ್ದಾರೆ. ಅಶೋಕ್ ಮೇಲೆಯೇ ಕ್ರಮ ತೆಗೆದುಕೊಳ್ಳಬೇಕು ಎಂದು ಕಿಡಿಕಾರಿದರು.
ಮಾತನಾಡುವಾಗ ಅಶೋಕ್ ಮಾತಿನಲ್ಲಿ ಸ್ವಲ್ಪ ಹಿಡಿತ ಇಟ್ಟುಕೊಂಡು ಮಾತನಾಡಬೇಕು. ಅಶೋಕ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ. ವಿಪಕ್ಷ ನಾಯಕನಾಗಿ ಸರಿಯಾಗಿ ಮಾತನಾಡೋದನ್ನು ಕಲಿಯಬೇಕು ಎಂದು ಟಾಂಗ್ ಕೊಟ್ಟಿದ್ದಾರೆ.
ನಾಗಮಂಗಲದಲ್ಲಿ ನಡೆದ ಗಲಭೆ ವೇಳೆ ಪಾಕ್ ಪರ ಘೋಷಣೆ ಕೂಗಿಲ್ಲ. ಇದೆಲ್ಲಾ ಸುಳ್ಳುಸುದ್ದಿ. ಹಾಗಾಗಿ ವಿಪಕ್ಷದವರು ಹೇಳುವುದನ್ನು ಯಾರೂ ನಂಬಬೇಡಿ ಎಂದು ಸ್ಪಷ್ಟನೆ ನೀಡಿದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…