ಮಂಡ್ಯ: ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಜನರ ಬಂಧನವಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ನಾಗಮಂಗಲಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ ನೀಡಲಿದ್ದು, ಪರಿಶೀಲನೆ ನಡೆಸಲಿದೆ.
ಮಾಜಿ ಡಿಸಿಎಂ ಅಶ್ವಥ್ ನಾರಾಯಣ್, ಭೈರತಿ ಬಸವರಾಜ್, ನಾರಾಯಣಗೌಡ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರನ್ನು ಒಳಗೊಂಡ ಬಿಜೆಪಿ ಸತ್ಯಶೋಧನಾ ಸಮಿತಿ ಒಂದು ನಾಗಮಂಗಲಕ್ಕೆ ಭೇಟಿ ನೀಡಲಿದೆ.
ಘಟನೆ ಬಗ್ಗೆ ಸಮಗ್ರ ಮಾಹಿತಿ ಕಲೆಹಾಕಲು ಬಿಜೆಪಿ ನಿಯೋಗ ಭೇಟಿ ನೀಡಲಿದ್ದು, ಘಟನೆ ನಡೆದ ದಿನ ಏನಾಯಿತು ಎನ್ನುವ ಬಗ್ಗೆ ಇಂಚಿಂಚೂ ಮಾಹಿತಿ ಕಲೆಹಾಕಲಿದೆ.
ಮಾಹಿತಿ ಕಲೆಹಾಕಿದ ಬಳಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದ ಬದ್ರಿಕೊಪ್ಪಲು ಬಡಾವಣೆಗೂ ಬಿಜೆಪಿ ನಿಯೋಗ ಭೇಟಿ ನೀಡಲಿದ್ದು, ಘಟನೆ ಬಗ್ಗೆ ಸಂಪೂರ್ಣ ವಿವರ ಕಲೆಹಾಕಲಿದೆ.
ಇನ್ನು ಗಲಭೆಯಲ್ಲಿ ಸಂಪೂರ್ಣ ಹಾನಿಗೊಳಗಾದ ಅಂಗಡಿ ಮಳಿಗೆಗಳನ್ನು ಸಹ ಪರಿಶೀಲನೆ ನಡೆಸಲಾಗುತ್ತದೆ. ಬಿಜೆಪಿ ನಾಯಕರ ನೇತೃತ್ವದ ಸಮಿತಿಗೆ ಜೆಡಿಎಸ್ ಮುಖಂಡರು ಕೂಡ ಸಾಥ್ ನೀಡಲಿದ್ದಾರೆ.
ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…
ಮಂಡ್ಯ : ಕಳೆದ 2024ರಲ್ಲಿ ಬೂದನೂರು ಉತ್ಸವವನ್ನು ವಿಜೃಂಭಣೆಯಿಂದ ನಡೆಸಲಾಗಿತ್ತು. ಸದರಿ ವರ್ಷವೂ ಸಹ ಅದ್ಧೂರಿಯಾಗಿ ಉತ್ಸವವನ್ನು ಆಚರಿಸಲಾಗುವುದು ಎಂದು…
ಮೈಸೂರು : ಚಲನಚಿತ್ರಗಳು, ಧಾರಾವಾಹಿಗಳು, ಟಿವಿ ಕಾರ್ಯಕ್ರಮಗಳು, ಜಾಹೀರಾತುಗಳು ಹಾಗೂ ಇತರ ವಾಣಿಜ್ಯ ಶ್ರವಣ-ದೃಶ್ಯ ಮಾಧ್ಯಮಗಳಲ್ಲಿ ಮಕ್ಕಳು (ಬಾಲ ಕಲಾವಿದರು)…
ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ…
ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…
ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…