ಮಂಡ್ಯ: ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಜನರ ಬಂಧನವಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ನಾಗಮಂಗಲಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ ನೀಡಲಿದ್ದು, ಪರಿಶೀಲನೆ ನಡೆಸಲಿದೆ.
ಮಾಜಿ ಡಿಸಿಎಂ ಅಶ್ವಥ್ ನಾರಾಯಣ್, ಭೈರತಿ ಬಸವರಾಜ್, ನಾರಾಯಣಗೌಡ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರನ್ನು ಒಳಗೊಂಡ ಬಿಜೆಪಿ ಸತ್ಯಶೋಧನಾ ಸಮಿತಿ ಒಂದು ನಾಗಮಂಗಲಕ್ಕೆ ಭೇಟಿ ನೀಡಲಿದೆ.
ಘಟನೆ ಬಗ್ಗೆ ಸಮಗ್ರ ಮಾಹಿತಿ ಕಲೆಹಾಕಲು ಬಿಜೆಪಿ ನಿಯೋಗ ಭೇಟಿ ನೀಡಲಿದ್ದು, ಘಟನೆ ನಡೆದ ದಿನ ಏನಾಯಿತು ಎನ್ನುವ ಬಗ್ಗೆ ಇಂಚಿಂಚೂ ಮಾಹಿತಿ ಕಲೆಹಾಕಲಿದೆ.
ಮಾಹಿತಿ ಕಲೆಹಾಕಿದ ಬಳಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದ ಬದ್ರಿಕೊಪ್ಪಲು ಬಡಾವಣೆಗೂ ಬಿಜೆಪಿ ನಿಯೋಗ ಭೇಟಿ ನೀಡಲಿದ್ದು, ಘಟನೆ ಬಗ್ಗೆ ಸಂಪೂರ್ಣ ವಿವರ ಕಲೆಹಾಕಲಿದೆ.
ಇನ್ನು ಗಲಭೆಯಲ್ಲಿ ಸಂಪೂರ್ಣ ಹಾನಿಗೊಳಗಾದ ಅಂಗಡಿ ಮಳಿಗೆಗಳನ್ನು ಸಹ ಪರಿಶೀಲನೆ ನಡೆಸಲಾಗುತ್ತದೆ. ಬಿಜೆಪಿ ನಾಯಕರ ನೇತೃತ್ವದ ಸಮಿತಿಗೆ ಜೆಡಿಎಸ್ ಮುಖಂಡರು ಕೂಡ ಸಾಥ್ ನೀಡಲಿದ್ದಾರೆ.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…