ಮಂಡ್ಯ

ಕಾನೂನು ಸೇವಾ ಪ್ರಶಸ್ತಿಗೆ ನಾಗಮೋಹನದಾಸ್‌ ಆಯ್ಕೆ

ಮಂಡ್ಯ: ಕರ್ನಾಟಕ ಸಂಘದ ವತಿಯಿಂದ ಕಾನೂನು ಸೇವಾ, ಕೃಷಿ, ವೈದ್ಯಕೀಯ ಸೇವಾ, ಮತ್ತು ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಡಿಸೆಂಬರ್ ೦೮ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಕೆ.ವಿ.ಶಂಕರಗೌಡ ರೈತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ಗೌಡ ತಿಳಿಸಿದರು.

ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶಸ್ತಿ ಪುರಸ್ಕೃತರಿಗೆ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಪ್ರಶಸ್ತಿ ಪ್ರಧಾನ ಮಾಡಲಿದ್ದು, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ಗೌಡ ಅಧ್ಯಕ್ಷತೆ ವಹಿಸುವರು. ವಿಶ್ರಾಂತ ಪ್ರಾಂಶುಪಾಲ ಡಾ.ಮ.ರಾಮಕೃಷ್ಣ ಅಭಿನಂದನಾ ನುಡಿಗಳನ್ನಾಡಲಿದ್ದು, ಮುಖ್ಯ ಅತಿಥಿಗಳಾಗಿ ಕನಕಪುರದ ರೂರಲ್ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಹೆಚ್.ಕೆ.ಶ್ರೀಕಂಠ ಭಾಗವಹಿಸುವರು. ಪ್ರಭಾವತಿ ಹನುಮೇಗೌಡ ಉಪಸ್ಥಿತರಿರುವರು ಎಂದು ವಿವರಿಸಿದರು.

ಪ್ರಭಾವತಿ ಹನುಮೇಗೌಡ ಕಾನೂನು ಸೇವಾ ಪ್ರಶಸ್ತಿಯನ್ನು ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅವರಿಗೆ, ಶಾರದಮ್ಮ ಎಂ.ಎಲ್.ಸುಬ್ಬಣ್ಣ ಕೃಷಿ ಪ್ರಶಸ್ತಿಯನ್ನು ಪ್ರಗತಿಪರ ಕೃಷಿ ಚಂದ್ರಶೇಖರ್ ಅವರಿಗೆ, ವೀಣಾ ಡಾ.ಎಂ.ಮಂಚಯ್ಯ ವೈದ್ಯಕೀಯ ಪ್ರಶಸ್ತಿಯನ್ನು ಆಯುಷ್ ವೈದ್ಯಾಧಿಕಾರಿ ಡಾ.ಅಂಬಿಕಾ ಅವರಿಗೆ, ರತ್ನಮ್ಮ ಕುನ್ನಮರಿಗೌಡ ಕೃಷಿ ಪ್ರಶಸ್ತಿಯನ್ನು ಕನಕಪುರದ ಮಹಿಳಾ ಪ್ರಗತಿಪರ ಕೃಷಿಕರಾದ ಬಿ.ಕೆ.ಪದ್ಮ ಅವರಿಗೆ, ಡಾ.ಸಿ.ಶಿವರಾಮಯ್ಯ ಕೃಷಿ ಪ್ರಶಸ್ತಿಯನ್ನು ಪ್ರೊ.ಎಂ.ಸಿ.ಬೋರೇಗೌಡರಿಗೆ, ಕಾನೂನು ವಿದ್ಯಾರ್ಥಿಗಳಾದ ಪಿ.ಮಂಜುನಾಥ್ ಮತ್ತು ಜಿ.ಎಸ್.ಚೈತ್ರ ಅವರಿಗೆ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಡಾ.ಹೆಚ್.ಅನೀಲ್‌ಕುಮಾರ್, ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಕುಮಾರ್, ಕಾರ್ಯದರ್ಶಿ ಸೋಮಶೇಖರ್, ನಿರ್ದೇಶಕ ನಾಗಪ್ಪ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲಿ ಮುಸ್ಲಿಂರ ಮೀಸಲಾತಿಗೆ ಸಂಪುಟ ಒಪ್ಪಿಗೆ

ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.…

48 mins ago

ಆನೆ ದಾಳಿಗೆ ಮಹಿಳೆ ಸಾವು: ಈಶ್ವರ ಖಂಡ್ರೆ ಸಂತಾಪ

ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ…

59 mins ago

ಒಂದು ತಿಂಗಳು ʼಜಲ ಸಂರಕ್ಷಣಾ ಅಭಿಯಾನʼ: ಡಿಕೆ ಶಿವಕುಮಾರ್‌

ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…

2 hours ago

ಸರ್ವಜ್ಞನಗರದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…

2 hours ago

ಹೊಸ 7 ವಿವಿಗಳನ್ನು ಮುಚ್ಚುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…

3 hours ago

ವೈದ್ಯರ ನಿವೃತ್ತಿ ವಯಸ್ಸು ಏರಿಸಲು ಚಿಂತನೆ: ಸಚಿವ ಶರಣ ಪ್ರಕಾಶ ಪಾಟೀಲ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…

3 hours ago