ಮಂಡ್ಯ

ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಮೈಸೂರಿನ ಮಹಾಶಿಲ್ಪಿ: ಆರ್.‌ಅಶೋಕ್‌

ಮಂಡ್ಯ: ಕೆಆರ್‌ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಸಾಗರ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ 1799ರಲ್ಲಿ ಮೃತಪಟ್ಟಿದ್ದು, ಕೆಆರ್‌ಎಸ್ ಜಲಾಶಯದ ನಿರ್ಮಾಣ 1911ರಲ್ಲಿ ಆರಂಭವಾಯಿತು. ಬರೋಬ್ಬರಿ 112 ವರ್ಷಗಳ ನಂತರ ಡ್ಯಾಂ ಕಟ್ಟಲಾಗಿದ್ದು, ಟಿಪ್ಪು ಶಂಕುಸ್ಥಾಪನೆ ಮಾಡಿದ್ದರೆ ಆಗಲೇ ಈ ಹೆಸರು ಇಡಬೇಕಿತ್ತಲ್ವ? ಎಂದು ಪ್ರಶ್ನಿಸಿದರು. ಕೃಷ್ಣರಾಜಸಾಗರ ಡ್ಯಾಂಗೆ ಟಿಪ್ಪು ಹೆಸರು ತಳಕು ಹಾಕುತ್ತಿರುವುದು ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಮಾಡಿದ ಅಪಮಾನ ಎಂದು ಕಿಡಿಕಾರಿದ್ದಾರಲ್ಲದೇ ಟಿಪ್ಪು ಸುಲ್ತಾನನೊಬ್ಬ ನಾಡದ್ರೋಹಿ, ಪರ್ಶಿಯಾದವನು, ಮತಾಂಧ, ಸಾವಿರಾರು ಹಿಂದೂಗಳನ್ನು ಕೊಂದು ದೇವಾಲಯಗಳನ್ನು ಕೆಡವಿದವನು ಅಂತವನ ಹೆಸರು ಕೆಆರ್‌ಎಸ್ ಗೆ ಇಡಲು ಹೊರಟಿರುವುದು ಕಾಂಗ್ರೆಸ್‌ ಮನಸ್ಥಿತಿಯನ್ನ ತೋರಿಸಿದೆ ಎಂದು ಕಿಡಿಕಾರಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತದಲ್ಲಿ ಹಳೇ ಮೈಸೂರು ಸಾಕಷ್ಟು ಅಭಿವೃದ್ಧಿ ಕಂಡಿತ್ತು. ಕೆಆರ್‌ಎಸ್ ಜಲಾಶಯ ನಿರ್ಮಾಣಕ್ಕೆ ಯಾರ ಮೇಲೂ ತೆರಿಗೆ ಹಾಕಿರಲಿಲ್ಲ. ಆದರೆ ಸಿದ್ದರಾಮಯ್ಯ ಸರ್ಕಾರ ಎರಡು ವರ್ಷದಲ್ಲಿ 2 ಲಕ್ಷ ಕೋಟಿ ಸಾಲ ಮಾಡಿ, ಜನರ ಮೇಲೆ ತೆರಿಗೆಯ ಬರೆ ಎಳೆದಿದೆ. ಇಂಥ ಮುಖ್ಯಮಂತ್ರಿಯನ್ನ ನಾಲ್ವಡಿ ಹೋಲಿಕೆ ಮಾಡುವುದು ಕೂಡ ನಾಚಿಕೆಗೇಡು ಎಂದು ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಗೌರವ ಉಳಿಯಬೇಕಾದ್ರೆ ಕೂಡಲೇ ರಾಜ್ಯದ ಜನತೆ, ನಾಲ್ವಡಿ ಕುಟುಂಬಕ್ಕೆ ಕ್ಷಮಾಪಣೆ ಕೇಳಿ. ಹೀಗೆ ಮಾತನಾಡಿದ್ರೆ ಜನರು ನಿಮ್ಮ ಪಕ್ಷವನ್ನು ಧೂಳಿಪಟ ಮಾಡ್ತಾರೆ. ತಕ್ಷಣವೇ ರಾಜಮನೆತನಕ್ಕೆ ಕ್ಷಮೆಯಾಚಿಸಿ ಗೌರವ ಉಳಿಸಿಕೊಳ್ಳಿ ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

11 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

3 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

17 hours ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

18 hours ago

ಹಾಸನದಲ್ಲಿ ಮುಂದುವರಿದ ಮಳೆಯ ಅಬ್ಬರ

ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593…

19 hours ago

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: 7 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

19 hours ago