ಮಂಡ್ಯ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವೇಗೌಡರು ದಲಿತರ ಉದ್ಧಾರಕ್ಕಾಗಿ ಅನೇಕ ಉತ್ತಮ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ಗಂಗಾ ಕಲ್ಯಾಣ ಯೋಜನೆಯನ್ನು ಅವರು ಜಾರಿಗೆ ತಂದು ಅನೇಕರಿಗೆ ಸಹಾಯ ಮಾಡಿದ್ದರು. ಸಚಿವರಾಗಿ, ಸಿಎಂ ಆಗಿ, ಪ್ರಧಾನಿಯಾಗಿ ದಲಿತರ ಉದ್ಧಾರಕ್ಕೆ ಬಹುದೊಡ್ಡ ಕಾಣಿಕೆ ನೀಡಿದ್ದಾರೆ ಎಂದು ಹೇಳಿದರು.
ಮೊದಲು ಮೀಸಲು ಸೌಲಭ್ಯ ಕೇವಲ ವಿಧಾನಸಭೆ, ಲೋಕಸಭೆ ಕ್ಷೇತ್ರಗಳಿಗೆ ಮೀಸಲಾಗಿತ್ತು. ದೇವೇಗೌಡರು ಆ ಮೀಸಲು ಸೌಲಭ್ಯವನ್ನು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿಯೂ ಜಾರಿಗೆ ತಂದರು. ಬಳಿಕ ಹಾಸನ ಜಿಲ್ಲಾ ಪಂಚಾಯಿತಿ ಅಧ್ಯಕ್ಷರನ್ನಾಗಿ ಎಂಎ ಪದವೀಧರನಾಗಿದ್ದ ಒಬ್ಬ ದಲಿತ ಯುವಕನನ್ನು ಮಾಡಿದ್ದರು. ತಳಮಟ್ಟದ ಸಮುದಾಯಗಳ ವಿದ್ಯಾವಂತರನ್ನು ಗುರುತಿಸಿ ಅಧಿಕಾರ ನೀಡುವ ಕೆಲಸವನ್ನು ದೇವೇಗೌಡ ಅವರೇ ಮಾಡಿದ್ದರು ಎಂದು ಮಾಹಿತಿ ನೀಡಿದರು.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…